ಅಹ್ಮದ್ ಮಸೂದ್ 
ವಿದೇಶ

ಪಂಜ್ ಶೀರ್ ನಾಯಕ ಹೋರಾಟಗಾರ ಅಹ್ಮದ್ ಮಸೂದ್ ಅಫ್ಘಾನಿಸ್ತಾನ ತೊರೆದಿಲ್ಲ  ವರದಿ

ಅಫ್ಘಾನಿಸ್ತಾನದಲ್ಲಿ ತಾಲೀಬಾನ್ ವಿರುದ್ಧ ಹೋರಾಟ ಮಾಡುತ್ತಿರುವ ಅಫ್ಘಾನ್ ರೆಸಿಸ್ಟೆನ್ಸ್ ಫೋರ್ಸ್ ನ ನಾಯಕ ಅಹ್ಮದ್ ಮಸೂದ್ ಅಫ್ಘಾನಿಸ್ತಾನ ತೊರೆದಿಲ್ಲ ಎಂದು ಇರಾನ್ ನ ಸುದ್ದಿ ಸಂಸ್ಥೆ ವರದಿ ಪ್ರಕಟಿಸಿದೆ.

ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲೀಬಾನ್ ವಿರುದ್ಧ ಹೋರಾಟ ಮಾಡುತ್ತಿರುವ ಅಫ್ಘಾನ್ ರೆಸಿಸ್ಟೆನ್ಸ್ ಫೋರ್ಸ್ ನ ನಾಯಕ ಅಹ್ಮದ್ ಮಸೂದ್ ಅಫ್ಘಾನಿಸ್ತಾನ ತೊರೆದಿಲ್ಲ ಎಂದು ಇರಾನ್ ನ ಸುದ್ದಿ ಸಂಸ್ಥೆ ವರದಿ ಪ್ರಕಟಿಸಿದೆ.

ಅಫ್ಘಾನಿಸ್ತಾನ ತಾಲೀಬಾನ್ ವಶವಾಗಿರುವ ಹಿನ್ನೆಲೆಯಲ್ಲಿ ಮಸೂದ್ ಕೇಂದ್ರ ಏಷ್ಯಾದ ರಾಷ್ಟ್ರವನ್ನು ತೊರೆದು ಟರ್ಕಿ ಅಥವಾ ಇನ್ನಿತರ ಪ್ರದೇಶಗಳಿಗೆ ತೆರಳಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ಇರಾನ್ ನ ಸುದ್ದಿ ಸಂಸ್ಥೆ ಎಫ್ಎಆರ್ ಎಸ್ ತಿಳಿಸಿದೆ.

ಪಂಜ್ ಶೀರ್ ನ ಶೇ.70 ರಷ್ಟು ಪ್ರದೇಶ ತಾಲೀಬಾನಿ ನಿಯಂತ್ರಣಕ್ಕೆ ಒಳಪಟ್ಟಿದ್ದು, ಅಹ್ಮದ್ ಮಸೂದ್ ಪಂಜ್ ಶೀರ್ ಕಣಿವೆಯಲ್ಲಿ ಸುರಕ್ಷಿತ ಪ್ರದೇಶದಲ್ಲಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಪ್ರಕಟಿಸಿದೆ.

ತಾಲೀಬಾನ್ ತಾನು ಪಂಜ್ ಶೀರ್ ಪ್ರದೇಶವನ್ನು ವಶಪಡಿಸಿಕೊಂಡಿರುವುದಾಗಿ ಈ ಹಿಂದೆ ಘೋಷಿಸಿತ್ತು. ಆದರೆ ತಾಲೀಬಾನಿಗಳ ವಿರುದ್ಧ ಹೋರಾಟ ನಡೆಸುತ್ತಿರುವ ಅಫ್ಘಾನಿಸ್ತಾನದ ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ (ಎನ್ ಆರ್ ಎಫ್) ತಾಲೀಬಾನಿಗಳ ಹೇಳಿಕೆಯನ್ನು ಅಲ್ಲಗಳೆದಿದೆ.

"ಇತ್ತೀಚಿನ ದಿನಗಳಲ್ಲಿ ತಾಲೀಬಾನ್ ಪಂಜ್ ಶೀರ್ ಗೆ ಪ್ರವೇಶಿಸಿದ್ದು, ಶೇ.70 ರಷ್ಟು ಪ್ರಮುಖ ರಸ್ತೆಗಳು ಹಾಗೂ ಹಾದಿಗಳು ಅವರ ನಿಯಂತ್ರಣದಲ್ಲೇ ಇದೆ. ಆದರೆ ಕಣಿವೆಗಳ ಮೇಲೆ ಎನ್ ಆರ್ ಎಫ್ ಸಂಪೂರ್ಣ ನಿಯಂತ್ರಣ ಹೊಂದಿದೆ ಎಂದು ಕಾಸಿಮ್ ಮೊಹಮ್ಮದಿ ಎಫ್ಎನ್ಎ ಗೆ ಮಾಹಿತಿ ನೀಡಿದ್ದಾರೆ.

ಕಣಿವೆಯ ಪ್ರಮುಖ, ಆಯಕಟ್ಟಿನ ಪ್ರದೇಶಗಳಲ್ಲಿ ಎನ್ ಆರ್ ಎಫ್ ಅಸ್ತಿತ್ವವಿದ್ದು, ತಾಲೀಬಾನಿಗಳ ವಿರುದ್ಧ ಹೋರಾಟ ಮುಂದುವರೆಸುತ್ತಿದೆ ಎಂದು ಎನ್ ಆರ್ ಎಫ್ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ನೀವು ಮಾಡಿದರೆ ರಾಜತಂತ್ರ? ಮತಗಳ ಮೈಲೇಜ್‌ಗಾಗಿ ತಾಯಿ ಹೆಸರನ್ನು ಬಳಸುವುದು ಪ್ರೀತಿಯಲ್ಲ, ಕ್ರೂರ: PM ಮೋದಿ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿಗರೇ ಎಚ್ಚರ! ಎಲ್ಲೆಂದರಲ್ಲಿ ಕಸ ಸುರಿಯುವ ವಾಹನಗಳನ್ನು ಮುಲಾಜಿಲ್ಲದೇ ಸೀಜ್ ಮಾಡಿ; ಪೊಲೀಸರಿಗೆ CM ಡಿಕೆಶಿ ಖಡಕ್ ಸೂಚನೆ

NSA ಅಜಿತ್ ದೋವಲ್ ಗೆ ಪ್ರತಿಷ್ಠಿತ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ ಅಮಿತ್ ಶಾ

ಅಭಿಜೀತ್ ದೀಪ್ಕೆಗೆ ಮತ್ತೆ ಅನಾರೋಗ್ಯ; ಜನರ ಭೇಟಿಗೆ ಬಂದಿದ್ದ CJP ಸಂಸ್ಥಾಪಕ ದಿಢೀರ್ ವಾಪಸ್!