ಭಾರತೀಯ ಯೋಧ 
ವಿದೇಶ

ಕಾಶ್ಮೀರದ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥರ 'ಅನಗತ್ಯ ಟೀಕೆ'ಗೆ ಭಾರತ ಅಸಮಾಧಾನ!

ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥರು ಮಾಡಿದ 'ವಿನಾಕಾರಣ ಟೀಕೆಗಳ' ಬಗ್ಗೆ ಭಾರತ ಅಸಮಾಧಾನ ವ್ಯಕ್ತಪಡಿಸಿದೆ.

ವಿಶ್ವಸಂಸ್ಥೆ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥರು ಮಾಡಿದ 'ವಿನಾಕಾರಣ ಟೀಕೆಗಳ' ಬಗ್ಗೆ ಭಾರತ ಅಸಮಾಧಾನ ವ್ಯಕ್ತಪಡಿಸಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮೀಷನರ್ ಮಿಶೆಲ್ ಬ್ಯಾಚೆಲೆಟ್ ಹೇಳಿಕೆಗಳು ವಾಸ್ತವಿಕತೆಯನ್ನು ಪ್ರತಿಬಿಂಬಿಸುವುದಿಲ್ಲ. ಮಾನವ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಯಾವುದೇ ನ್ಯೂನತೆಗಳನ್ನು ನಿಷ್ಪಕ್ಷಪಾತವಾಗಿ ಪರಿಹರಿಸಬೇಕು. ದೇಶದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಒಳ್ಳೆಯದ್ದು ಎಂದು ಹೇಳಿದೆ. 

ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಆಕೆಯ ಅನಗತ್ಯ ಹೇಳಿಕೆಗಳ ಬಗ್ಗೆ ನಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತೇವೆ. ಇದು ಮೂಲ ವಾಸ್ತವತೆಯನ್ನು ಪ್ರತಿಬಿಂಬಿಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ(ಪಶ್ಚಿಮ) ರೀನಾತ್ ಸಂಧು ಅವರು ಮಾನವ ಹಕ್ಕುಗಳ ಮಂಡಳಿಯ 48ನೇ ಅಧಿವೇಶನದಲ್ಲಿ ಹೈಕಮೀಷನರ್‌ನ ಮೌಖಿಕ ನವೀಕರಣದ ಕುರಿತು ಸಾಮಾನ್ಯ ಚರ್ಚೆ ವೇಳೆ ಭಾರತದ ಹೇಳಿಕೆಯನ್ನು ತಿಳಿಸಿದರು. 

ಜಾಗತಿಕ ಪ್ರಚಾರ ಮತ್ತು ಮಾನವ ಹಕ್ಕುಗಳ ರಕ್ಷಣೆಗೆ ಭಾರತದ ವಿಧಾನವು 'ಬಹುತ್ವ ಮತ್ತು ಅಂತರ್ಗತ ಸಮಾಜ ಮತ್ತು ರೋಮಾಂಚಕ ಪ್ರಜಾಪ್ರಭುತ್ವವಾಗಿ ನಮ್ಮ ಸ್ವಂತ ಅನುಭವ' ದ ಮೇಲೆ ಆಧಾರಿತವಾಗಿದೆ ಎಂದು ಸಂಧು ಹೇಳಿದರು. 

ರಾಜ್ಯಗಳ ನಡುವೆ ಮಾತುಕತೆ, ಸಮಾಲೋಚನೆ ಮತ್ತು ಸಹಕಾರದ ಮೂಲಕ ಮತ್ತು ತಾಂತ್ರಿಕ ನೆರವು ಮತ್ತು ಸಾಮರ್ಥ್ಯ ವೃದ್ಧಿಯ ಮೂಲಕ ಮಾನವ ಹಕ್ಕುಗಳ ಪ್ರಚಾರ ಮತ್ತು ರಕ್ಷಣೆಯನ್ನು ಉತ್ತಮವಾಗಿ ಅನುಸರಿಸಲಾಗುತ್ತದೆ ಎಂದು ಭಾರತ ನಂಬುತ್ತದೆ ಎಂದು ಹೇಳಿದರು. 

'ಮಾನವ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಯಾವುದೇ ನ್ಯೂನತೆಗಳನ್ನು ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿ ಪರಿಹರಿಸಬೇಕು. ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ರಾಜ್ಯಗಳ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಗೌರವಿಸಬೇಕು' ಎಂದು ಸಂಧು ಹೇಳಿದರು.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮೀಷನರ್ ಮಿಶೆಲ್ ಬ್ಯಾಚೆಲೆಟ್ ಸೋಮವಾರ, ಭಾರತವು ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆ ಬಳಕೆ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಆಗಾಗ್ಗೆ ಸಂವಹನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವುದು ಬಗ್ಗೆ ಚಿಂತಿಸುವಂತಾಗಿದೆ ಎಂದಿದ್ದರು.

ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 48ನೇ ಅಧಿವೇಶನದ ತಮ್ಮ ಆರಂಭಿಕ ಹೇಳಿಕೆಯಲ್ಲಿ ಬ್ಯಾಚೆಲೆಟ್, ಭಯೋತ್ಪಾದನೆಯನ್ನು ಎದುರಿಸಲು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ಉತ್ತೇಜಿಸಲು ಭಾರತೀಯ ಸರ್ಕಾರದ ಪ್ರಯತ್ನಗಳು ಸರಿ ಇವೆ. ಆದರೆ ಅಂತಹ 'ನಿರ್ಬಂಧಿತ' ಕ್ರಮಗಳು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಬಹುದು ಮತ್ತು ಮತ್ತಷ್ಟು ಉದ್ವಿಗ್ನತೆಯನ್ನು ಉಂಟುಮಾಡಬಹುದು ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT