ಇಮ್ರಾನ್ ಖಾನ್ 
ವಿದೇಶ

ಆಫ್ಘನ್ ನಲ್ಲಿ ಅಮೆರಿಕ ಬೆಂಬಲಿಸಿ ತಪ್ಪು ಮಾಡಿದೆವು, ತಾಲಿಬಾನಿಗಳೊಂದಿಗೆ ಚರ್ಚಿಸುತ್ತಿದ್ದೇನೆ: ಪಾಕ್‌ ಪ್ರಧಾನಿ ಇಮ್ರಾನ್ ಖಾನ್

ಅಫ್ಘಾನಿಸ್ತಾನದಲ್ಲಿ ಎಲ್ಲಾ ಸಮುದಾಯಗಳನ್ನು ಒಳಗೊಂಡ ಸಮ್ಮಿಶ್ರ ಸರ್ಕಾರ ಇರಬೇಕು ಎಂಬುದೇ ತಮ್ಮ ಆಶಯವಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. 

ಇಸ್ಲಾಮಾಬಾದ್: ಅಫ್ಘಾನಿಸ್ತಾನದಲ್ಲಿ ಎಲ್ಲಾ ಸಮುದಾಯಗಳನ್ನು ಒಳಗೊಂಡ ಸಮ್ಮಿಶ್ರ ಸರ್ಕಾರ ಇರಬೇಕು ಎಂಬುದೇ ತಮ್ಮ ಆಶಯವಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. 

ಇದಕ್ಕಾಗಿ ತಾಲಿಬಾನಿಗಳ ಜೊತೆ ಮಾತುಕತೆ ಆರಂಭಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. ತಜಿಕಿಗಳು, ಹಜಾರಗಳು, ಉಜ್ಬೆಕ್‌ಗಳಿಗೆ ಸರ್ಕಾರದಲ್ಲಿ ಪಾಲು ನೀಡಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಈ ಸಂಬಂಧ ಅವರು ಶನಿವಾರ ಟ್ವೀಟ್ ಮಾಡಿದ್ದು, ಮಾತುಕತೆಯ ವಿವರಗಳನ್ನು ಬಹಿರಂಗಪಡಿಸಿಲ್ಲ. ಜನರ ಹಕ್ಕುಗಳನ್ನು ಗೌರವಿಸುವಂತಹ ಕ್ರಮಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ ಎಂದು ತಾಲಿಬಾನಿಗಳಿಗೆ ಇಮ್ರಾನ್ ಖಾನ್‌ ಸಲಹೆ ನೀಡಿದ್ದಾರೆ. ಅಫ್ಘಾನ್ ನೆಲ ಮತ್ತೊಮ್ಮೆ ಭಯೋತ್ಪಾದಕರ ಸ್ವರ್ಗವಾಗಿ ಪರಿವರ್ತನೆಗೊಳ್ಳಬಾರದು ಎಂದು ಅವರು ಸೂಚನೆ ನೀಡಿದ್ದಾರೆ. 

ಅಫ್ಘಾನಿಸ್ತಾನದ ಹೊಸ ಸರ್ಕಾರದಲ್ಲಿ ಎಲ್ಲಾ ಸಮುದಾಯಗಳಿಗೆ ಪ್ರಾತಿನಿತ್ಯ ಲಭಿಸುವುದನ್ನು ಖಚಿತಪಡಿಸಲು ಪಾಕಿಸ್ತಾನ ಮುಂದಾಗಬೇಕೆಂದು ಶಾಂಘೈ ಸಹಕಾರ ಸಂಸ್ಥೆ (SCO) ಸದಸ್ಯ ರಾಷ್ಟ್ರಗಳು ಕರೆ ನೀಡಿದ ಮರುದಿನವೇ ಇಮ್ರಾನ್ ಖಾನ್ ಈ ಹೇಳಿಕೆ ನೀಡಿದ್ದಾರೆ. ತಾಲಿಬಾನ್ ಸರ್ಕಾರದ ಮಂತ್ರಿ ಮಂಡಲದ 33 ಮಂದಿಯಲ್ಲಿ ತಜಿಕಿಗಳು, ಮಹಿಳೆಯರಿಗೆ ಯಾವುದೇ ಪ್ರಾತಿನಿಧ್ಯವಿಲ್ಲದಿರುವುದು ಗಮನಾರ್ಹವಾಗಿದೆ.

ಅಮೆರಿಕವನ್ನು ಬೆಂಬಲಿಸಿ ದೊಡ್ಡ ತಪ್ಪು ಮಾಡಿದೆವು
ಇದೇ ವೇಳೆ ಒಬ್ಬ ಪಾಕಿಸ್ತಾನಿಯಾಗಿ, ಅಮೆರಿಕ ಸೆನೆಟರ್‌ಗಳು ಮಾಡಿದ ಕೆಲವು ಟೀಕೆಗಳಿಂದ ನನಗೆ ತುಂಬಾ ನೋವಾಗಿದೆ. ಅಫ್ಘಾನಿಸ್ತಾನದಲ್ಲಿನ ಈ ಸೋಲಿಗೆ ಪಾಕಿಸ್ತಾನವನ್ನು ದೂಷಿಸುವುದು ಅತ್ಯಂತ ನೋವಿನ ಸಂಗತಿ. ಪಾಕಿಸ್ತಾನವು ತನ್ನ ಅಫ್ಘಾನಿಸ್ತಾನ ಆಕ್ರಮಣದಲ್ಲಿ ಅಮೆರಿಕದ ಪರವಾಗಿ ನಿಂತು "ಭಾರೀ ಬೆಲೆ" ತೆತ್ತಿದೆ ಎಂದು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT