ಫ್ಯೂಮಿಯೊ ಕಿಶಿದ 
ವಿದೇಶ

ಜಪಾನ್ ನ ಮುಂದಿನ ಪ್ರಧಾನಿ ಫ್ಯೂಮಿಯೊ ಕಿಶಿದ

ಫ್ಯೂಮಿಯೊ ಕಿಶಿದ ಅವರು ಜಪಾನ್‌ನ ಮುಂದಿನ ಪ್ರಧಾನಿಯಾಗಲಿದ್ದಾರೆ. ಆಡಳಿತ ಪಕ್ಷದ ನಾಯಕತ್ವದ ಚುನಾವಣೆಯಲ್ಲಿ ಬಂದ ಫಲಿತಾಂಶದ ಪ್ರಕಾರ ಫ್ಯೂಮಿಯೊ ಕಿಶಿದ ಅವರು ಜಪಾನ್ ನ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ. 

ಟೋಕಿಯೊ: ಫ್ಯೂಮಿಯೊ ಕಿಶಿದ ಅವರು ಜಪಾನ್‌ನ ಮುಂದಿನ ಪ್ರಧಾನಿಯಾಗಲಿದ್ದಾರೆ. ಆಡಳಿತ ಪಕ್ಷದ ನಾಯಕತ್ವದ ಚುನಾವಣೆಯಲ್ಲಿ ಬಂದ ಫಲಿತಾಂಶದ ಪ್ರಕಾರ ಫ್ಯೂಮಿಯೊ ಕಿಶಿದ ಅವರು ಜಪಾನ್ ನ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ. 

ಚುನಾವಣಾ ಸ್ಪರ್ಧೆಯಲ್ಲಿ ಜಪಾನ್ ನ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ (ಎಲ್ ಡಿಪಿ) ಮುಂಚೂಣಿಯಲ್ಲಿದ್ದು ಯೊಶಿಹಿಡೆ ಸುಗ ಅವರು ಪ್ರಧಾನಿ ಸ್ಥಾನದಿಂದ ಇಳಿದ ಬಳಿಕ ಕಿಶಿದ ಮುನ್ನಡೆಸಲಿದ್ದಾರೆ.

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್‌ಡಿಪಿಯನ್ನು ಗೆಲುವಿನತ್ತ ಮುನ್ನಡೆಸುವುದು ಪ್ರಧಾನಮಂತ್ರಿಯಾಗಿ ಅವರ ಮೊದಲ ಉದ್ದೇಶವಾಗಿದೆ. ಸಾರ್ವಜನಿಕ ವಿರೋಧದ ನಡುವೆಯೂ ಟೋಕಿಯೊ ಒಲಿಂಪಿಕ್ಸ್ ಆತಿಥ್ಯ ವಹಿಸಿದ ನಂತರ ಪಕ್ಷವು ಜನಪ್ರಿಯತೆಯಲ್ಲಿ ಕುಸಿತ ಕಂಡಿತು.

ಮಾಜಿ ವಿದೇಶಾಂಗ ಸಚಿವರಾದ ಕಿಶಿದ, ಟ್ಯಾರೋ ಕೊನೊ ಅವರನ್ನು ಸೋಲಿಸಿದರು, ಈ ಸ್ಥಾನವನ್ನು ಗೆಲ್ಲಲು ಅತ್ಯಂತ ಜನಪ್ರಿಯ ಅಭ್ಯರ್ಥಿ ಎಂದು ವ್ಯಾಪಕವಾಗಿ ಪರಿಗಣಿಸಲಾಗಿತ್ತು. ಸಂಸತ್ತಿನಲ್ಲಿ ಎಲ್ಡಿಪಿಯ ಬಹುಮತವನ್ನು ಗಮನಿಸಿದರೆ,  ಕಿಶಿದ ಅವರ ಪ್ರಧಾನ ಮಂತ್ರಿ ಸ್ಥಾನ ಭದ್ರವಾಗಿದೆ. 

ಕಿಶಿದ ಅವರು ಬಹಳ ಹಿಂದಿನಿಂದಲೂ ಪ್ರಧಾನ ಮಂತ್ರಿ ಸ್ಥಾನದ ಜನಪ್ರಿಯ ಮುಖಂಡರಾಗಿದ್ದರು, ಕಳೆದ ವರ್ಷದ ಸಮೀಕ್ಷೆಯಲ್ಲಿ ಅವರು ಈಗಿನ ಪ್ರಧಾನಿ ಸುಗ ವಿರುದ್ಧ ಸೋಲು ಕಂಡಿದ್ದರು. 

ಕೋವಿಡ್ ಸಾಂಕ್ರಾಮಿಕ ನಂತರದ ಆರ್ಥಿಕ ಚೇತರಿಕೆ ಮತ್ತು ಉತ್ತರ ಕೊರಿಯಾದಿಂದ ಬೆದರಿಕೆಗಳನ್ನು ಎದುರಿಸುವುದು ಸೇರಿದಂತೆ ಹಲವಾರು ಕಠಿಣ ಸಮಸ್ಯೆಗಳನ್ನು ನೂತನ ಪ್ರಧಾನಿ ಎದುರಿಸಲಿದ್ದಾರೆ. ಸಾಂಕ್ರಾಮಿಕ ರೋಗವನ್ನು ಎದುರಿಸಲು "ಆರೋಗ್ಯ ಬಿಕ್ಕಟ್ಟು ನಿರ್ವಹಣಾ ಸಂಸ್ಥೆ" ಸ್ಥಾಪಿಸಲು ಅವರು ಕರೆ ನೀಡಿದ್ದಾರೆ.

ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಪ್ರಧಾನಿ ಸುಗ ಅವರು ಸೋಲು ಕಂಡಿರುವುದರಿಂದ ಒಂದು ವರ್ಷದ ನಂತರ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT