ಇಮ್ರಾನ್ ಖಾನ್ 
ವಿದೇಶ

ಸ್ವತಂತ್ರ ದೇಶವೆಂದರೆ ಇದು: ವಿದೇಶಾಂಗ ಸಚಿವ ಜೈಶಂಕರ್ ವಿಡಿಯೋ ತೋರಿಸಿ ಮತ್ತೆ ಭಾರತ ಕೊಂಡಾಡಿದ ಇಮ್ರಾನ್ ಖಾನ್

ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಮತ್ತೊಮ್ಮೆ ಶ್ಲಾಘಿಸಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ವಿದೇಶಾಂಗ ಸಚಿವ ಜೈಶಂಕರ್ ವಿಡಿಯೋ ತೋರಿಸಿ ಮತ್ತೆ ಭಾರತವನ್ನು ಕೊಂಡಾಡಿದ್ದಾರೆ.

ಇಸ್ಲಾಮಾಬಾದ್: ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಮತ್ತೊಮ್ಮೆ ಶ್ಲಾಘಿಸಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ವಿದೇಶಾಂಗ ಸಚಿವ ಜೈಶಂಕರ್ ವಿಡಿಯೋ ತೋರಿಸಿ ಮತ್ತೆ ಭಾರತವನ್ನು ಕೊಂಡಾಡಿದ್ದಾರೆ.

ಲಾಹೋರ್‌ನಲ್ಲಿ ಸೇರಿದ್ದ ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಇಮ್ರಾನ್ ಖಾನ್, ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವುದಕ್ಕೆ ಭಾರತವನ್ನು ಟೀಕಿಸುತ್ತಿರುವ ಪಾಶ್ಚಿಮಾತ್ಯ ದೇಶಗಳ ವಿರುದ್ಧ ಕಿಡಿಕಾರಿದರು. ಅಲ್ಲದೆ ಈ ಸಂಬಂಧ ಸ್ಲೋವಾಕಿಯಾದಲ್ಲಿ ನಡೆದ ಬ್ರಟಿಸ್ಲಾವಾ ವೇದಿಕೆಯ ಕಾರ್ಯಕ್ರಮದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಮಾತುಗಳ ವಿಡಿಯೋ ತುಣುಕನ್ನು ಹಂಚಿಕೊಂಡಿದ್ದಾರೆ. ರಷ್ಯಾದಿಂದ ಅಗ್ಗದ ದರದಲ್ಲಿ ತೈಲ ಖರೀದಿ ಮಾಡುವುದರ ವಿರುದ್ಧ ಅಮೆರಿಕದ ಒತ್ತಡವನ್ನು ಲೆಕ್ಕಿಸದೆ ದೃಢವಾಗಿ ನಿಂತಿದ್ದಕ್ಕೆ ಜೈಶಂಕರ್ ಅವರನ್ನು ಹೊಗಳಿದ್ದಾರೆ.

"ಪಾಕಿಸ್ತಾನದ ಸಂದರ್ಭದಲ್ಲಿಯೇ ಭಾರತ ಸ್ವಾತಂತ್ರ್ಯ ಪಡೆದಿದ್ದಾಗ, ಹೊಸದಿಲ್ಲಿಯು ದೃಢವಾಗಿ ನಿಂತು ತನ್ನ ಜನರ ಅಗತ್ಯಕ್ಕೆ ಅನುಗುಣವಾಗಿ ವಿದೇಶಾಂಗ ನೀತಿಯನ್ನು ರೂಪಿಸಲು ಸಾಧ್ಯವಾಗುವುದಾದರೆ, ದಾರಿ ತಪ್ಪುತ್ತಿರುವ ಅವರು (ಪ್ರಧಾನಿ ಶೆಹಬಾಜ್ ಷರೀಫ್ ಸರ್ಕಾರ) ಯಾರು?". ರಷ್ಯಾದಿಂದ ತೈಲ ಖರೀದಿಸದಂತೆ ಭಾರತಕ್ಕೆ ಅಮೆರಿಕ ಆದೇಶ ನೀಡಿತ್ತು. ಭಾರತವು ಅಮೆರಿಕ ಕಾರ್ಯತಂತ್ರ ಮಿತ್ರ ದೇಶ. ಪಾಕಿಸ್ತಾನ ಅಲ್ಲ. ಆದರೆ ರಷ್ಯಾದಿಂದ ತೈಲ ಖರೀದಿಸಬೇಡಿ ಎಂದು ಅಮೆರಿಕ ಸೂಚಿಸಿದಾಗ ಭಾರತದ ವಿದೇಶಾಂಗ ಸಚಿವರು ಹೇಳಿದ್ದೇನು ನೋಡಿ ಎಂದು ಎಸ್ ಜೈಶಂಕರ್ ಅವರ ವಿಡಿಯೋ ತುಣುಕನ್ನು ಹಂಚಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ನೀವು ಯಾರು ಎಂದು ಜೈಶಂಕರ್ ಪ್ರಶ್ನಿಸುತ್ತಾರೆ. ರಷ್ಯಾದಿಂದ ಯುರೋಪ್ ಅನಿಲ ಖರೀದಿ ಮಾಡುತ್ತಿದೆ. ನಮ್ಮ ಜನರಿಗೆ ಅಗತ್ಯ ಇರುವುದರಿಂದ ನಾವೂ ಖರೀದಿ ಮಾಡುತ್ತೇವೆ ಎಂದು ಜೈಶಂಕರ್ ಹೇಳುತ್ತಾರೆ. ಇದೇ ವಿಡಿಯೋ ತೋರಿಸಿ ಇಮ್ರಾನ್ ಖಾನ್, ಸ್ವತಂತ್ರ ದೇಶವೆಂದರೆ ಇದು" ಎಂದು ಭಾರತವನ್ನು ಕೊಂಡಾಡಿದ್ದಾರೆ. ಅಂತೆಯೇ ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಅಮೆರಿಕದ ಒತ್ತಡಕ್ಕೆ ತಲೆಬಾಗಿದ ಶೆಹಬಾಜ್ ಷರೀಫ್ ಸರ್ಕಾರವನ್ನು ಇಮ್ರಾನ್ ಖಾನ್ ಟೀಕಿಸಿದ್ದಾರೆ.

"ರಷ್ಯಾದಿಂದ ಅಗ್ಗದ ತೈಲ ಖರೀದಿಗಾಗಿ ನಾವು ರಷ್ಯಾ ಜತೆ ಮಾತುಕತೆ ನಡೆಸಿದ್ದೆವು. ಆದರೆ ಅಮೆರಿಕದ ಒತ್ತಡಕ್ಕೆ ಇಲ್ಲ ಎನ್ನುವ ಧೈರ್ಯ ಈ ಸರ್ಕಾರಕ್ಕೆ ಇಲ್ಲ. ಇಂಧನ ದರಗಳು ಗಗನಕ್ಕೆ ಏರುತ್ತಿವೆ. ಜನರು ಬಡತನ ರೇಖೆಗಿಂತ ಕಡಿಮೆ ಇದ್ದಾರೆ. ನಾನು ಗುಲಾಮಗಿರಿಯ ವಿರುದ್ಧವಿದ್ದೇನೆ ಎಂದು ಹೇಳಿದ್ದಾರೆ. 

ಇಮ್ರಾನ್ ಖಾನ್ ಅವರು ಭಾರತವನ್ನು ಹೊಗಳುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆ ತಾವು ಅಧಿಕಾರ ಕಳೆದುಕೊಳ್ಳುವ ಸನ್ನಿವೇಶ ಸೃಷ್ಟಿಯಾದ ಸಂದರ್ಭದಿಂದಲೂ ಅವರು ಭಾರತ ಮತ್ತು ಅದರ ವಿದೇಶಾಂಗ ನೀತಿಯನ್ನು ಪಾಕಿಸ್ತಾನದ ನೀತಿ ಜತೆ ಹೋಲಿಸಿ ಹೊಗಳುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT