ಬಿಲ್ ಗೇಟ್ಸ್ ಮತ್ತು ಪ್ರಧಾನಿ ಮೋದಿ 
ವಿದೇಶ

ಆರೋಗ್ಯ ರಕ್ಷಣೆಗೆ ಆದ್ಯತೆ: ಪ್ರಧಾನಿ ಮೋದಿ ಶ್ಲಾಘಿಸಿದ 'ಟೆಕ್ ದೈತ್ಯ' ಬಿಲ್ ಗೇಟ್ಸ್

ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿರುವ ಪ್ರಧಾನಿ ಮೋದಿ ಅವರಿಗೆ ಟೆಕ್ ದೈತ್ಯ ಮೈಕ್ರೋಸಾಫ್ಟ್ ಸಂಸ್ಥೆಯ ಸಂಸ್ಥಾಪಕ ಬಿಲ್ ಗೇಟ್ಸ್ ಶ್ಲಾಘಿಸಿದ್ದಾರೆ.

ನವದೆಹಲಿ: ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿರುವ ಪ್ರಧಾನಿ ಮೋದಿ ಅವರಿಗೆ ಟೆಕ್ ದೈತ್ಯ ಮೈಕ್ರೋಸಾಫ್ಟ್ ಸಂಸ್ಥೆಯ ಸಂಸ್ಥಾಪಕ ಬಿಲ್ ಗೇಟ್ಸ್ ಶ್ಲಾಘಿಸಿದ್ದಾರೆ.

ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಮತ್ತು ಬಿಲಿಯನೇರ್ ಬಿಲ್ ಗೇಟ್ಸ್ ಅವರು ಸೋಮವಾರ ಭಾರತದ ಅಭಿವೃದ್ಧಿಯ ಮುನ್ನಡೆಯಲ್ಲಿ ಆರೋಗ್ಯ ರಕ್ಷಣೆ ಮತ್ತು ಡಿಜಿಟಲ್ ರೂಪಾಂತರಕ್ಕೆ ಆದ್ಯತೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.

ಇದನ್ನೂ ಓದಿ: 'ಭ್ರಷ್ಟಾಚಾರ, ವಂಶ ಆಳ್ವಿಕೆ ಭಾರತದ 2 ದೊಡ್ಡ ಸವಾಲುಗಳು': ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಕಾಂಗ್ರೆಸ್ ಗೆ ತಿವಿದ ಪ್ರಧಾನಿ ಮೋದಿ
  
ಭಾರತದ 76 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಆರೋಗ್ಯ ರಕ್ಷಣೆ ಮತ್ತು ಡಿಜಿಟಲ್ ರೂಪಾಂತರಕ್ಕೆ ಆದ್ಯತೆ ನೀಡುವಂತೆ ಕರೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಲ್ ಗೇಟ್ಸ್ ಪ್ರಧಾನಿ ಮೋದಿ ನಡೆಯನ್ನು ಸ್ವಾಗತಿಸಿದ್ದಾರೆ.

"ಭಾರತದ ಅಭಿವೃದ್ಧಿಯನ್ನು ಮುನ್ನಡೆಸುವಾಗ ಆರೋಗ್ಯ ರಕ್ಷಣೆ ಮತ್ತು ಡಿಜಿಟಲ್ ಪರಿವರ್ತನೆಗೆ ಆದ್ಯತೆ ನೀಡಿದ್ದಕ್ಕಾಗಿ ನರೇಂದ್ರ ಅವರನ್ನು ನಾನು ಅಭಿನಂದಿಸುತ್ತೇನೆ. ಈ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯು ಸ್ಪೂರ್ತಿದಾಯಕವಾಗಿದೆ ಮತ್ತು ಈ ಪ್ರಯಾಣದಲ್ಲಿ ಪಾಲುದಾರರಾಗಲು ನಾವು ಅದೃಷ್ಟವಂತರು" ಎಂದು ಅವರು 'ಅಮೃತಮಹೋತ್ಸವ' ಹ್ಯಾಶ್‌ಟ್ಯಾಗ್ ಬಳಸಿ ಬಿಲ್ ಗೇಟ್ಸ್ ಟ್ವೀಟ್ ಮಾಡಿದ್ದಾರೆ.

ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಗುರುತಿಸಲು ಭಾರತವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸುತ್ತಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ