ಕಾಬೂಲ್ ಸ್ಫೋಟ 
ವಿದೇಶ

ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ; ಧರ್ಮಗುರು ಸೇರಿ ಕನಿಷ್ಠ 21 ಸಾವು

ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌‌ನಲ್ಲಿ ಬುಧವಾರ ಸಂಜೆ ಪ್ರಾರ್ಥನೆಯ ವೇಳೆ ನಡೆದ ಬಾಂಬ್ ದಾಳಿಯಲ್ಲಿ ಪ್ರಮುಖ ಧರ್ಮಗುರು ಸೇರಿದಂತೆ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಾಬೂಲ್: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌‌ನಲ್ಲಿ ಬುಧವಾರ ಸಂಜೆ ಪ್ರಾರ್ಥನೆಯ ವೇಳೆ ನಡೆದ ಬಾಂಬ್ ದಾಳಿಯಲ್ಲಿ ಪ್ರಮುಖ ಧರ್ಮಗುರು ಸೇರಿದಂತೆ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸಂಜೆಯ ಪ್ರಾರ್ಥನೆಯ ಸಮಯದಲ್ಲಿ ಮಸೀದಿಯೊಂದರಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಪ್ರಮುಖ ಧರ್ಮಗುರು ಸೇರಿದಂತೆ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 40 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮತ್ತು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಇದೊಂದು ಆತ್ಮಾಹುತಿ ದಾಳಿಯಾಗಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದು, ಘಟನೆಯಲ್ಲಿ ಮುಸ್ಲಿಂ ಧರ್ಮಗುರು ಮುಲ್ಲಾ ಅಮೀರ್ ಮೊಹಮ್ಮದ್ ಕಾಬೂಲಿ ಮೃತಪಟ್ಟಿದ್ದಾರೆ. ಕಾಬೂಲ್‌ನ ತಾಲಿಬಾನ್ ಪೊಲೀಸ್ ಮುಖ್ಯಸ್ಥರ ವಕ್ತಾರ ಖಾಲಿದ್ ಜದ್ರಾನ್ ಅವರು ನಗರದ ಖೇರ್ ಖನ್ನಾ ನೆರೆಹೊರೆಯಲ್ಲಿರುವ ಸಿದ್ದಿಕಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟದ ಮಾಹಿತಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಗಾಯಾಳುಗಳಲ್ಲಿ ಬಹುತೇಕ ಮಕ್ಕಳಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಉತ್ತರ ಕಾಬೂಲ್‌ನ ಖೈರ್ ಖಾನಾ ಪ್ರದೇಶದಲ್ಲಿರುವ ಮಸೀದಿಯಲ್ಲಿ ಸಂಭವಿಸಿದ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಹತ್ತಿರದ ಕಟ್ಟಡಗಳಿಗೂ ಹಾನಿಯಾಗಿವೆ.

ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಸ್ಫೋಟವನ್ನು ಖಂಡಿಸಿದ್ದು, 'ಇಂತಹ ಅಪರಾಧಗಳ ಅಪರಾಧಿಗಳನ್ನು ಶೀಘ್ರದಲ್ಲೇ ನ್ಯಾಯಾಂಗಕ್ಕೆ ತರಲಾಗುವುದು ಮತ್ತು ಶಿಕ್ಷಿಸಲಾಗುವುದು ಎಂದು ಪ್ರತಿಜ್ಞೆ ಮಾಡಿದ್ದಾರೆ.

ಅಫ್ಗಾನಿಸ್ತಾನದಲ್ಲಿ ಸಂಪೂರ್ಣ ನಿಯಂತ್ರಣ ಸಾಧಿಸಿದ್ದೇವೆ ಎಂದು ತಾಲಿಬಾನ್ ಹೇಳಿಕೊಳ್ಳುತ್ತಿದೆ. ಇನ್ನೊಂದೆಡೆ ನಾಗರಿಕರನ್ನು ಗುರಿಯಾಗಿಸಿ ಇಸ್ಲಾಮಿಕ್ ಸ್ಟೇಟ್ ನಿರಂತರ ದಾಳಿ ನಡೆಸುತ್ತಲೇ ಇದೆ ಎಂದು ವರದಿಯಾಗಿದೆ. ಇಸ್ಲಾಮಿಕ್ ಸ್ಟೇಟ್ ಗುಂಪಿನ ಸ್ಥಳೀಯ ಅಂಗಸಂಸ್ಥೆಯು ಕಳೆದ ಆಗಸ್ಟ್‌ನಲ್ಲಿ ಮಾಜಿ ದಂಗೆಕೋರ ಸಂಸ್ಥೆ ತಾಲಿಬಾನ್ ಆಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರ ತಾಲಿಬಾನ್ ಮತ್ತು ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ಹೆಚ್ಚಿಸಿದೆ. ಪ್ರಸ್ತುತ ಅಮೆರಿಕ ಮತ್ತು ನ್ಯಾಟೋ ಪಡೆಗಳು ದೇಶದಿಂದ ಹಿಂತೆಗೆದುಕೊಳ್ಳುವ ಅಂತಿಮ ಹಂತದಲ್ಲಿದೆ. 

ಕಳೆದ ವಾರ, ಕಾಬೂಲ್‌ನಲ್ಲಿರುವ ಅವರ ಧಾರ್ಮಿಕ ಕೇಂದ್ರದಲ್ಲಿ ಪ್ರಮುಖ ತಾಲಿಬಾನ್ ಧರ್ಮಗುರುವನ್ನು ಕೊಂದ ಉಗ್ರರು ಹೊಣೆಗಾರಿಕೆಯನ್ನು ಹೊತ್ತುಕೊಂಡಿದ್ದರು. ಎರಡು ವಾರಗಳ ಹಿಂದೆಯಷ್ಟೇ ಕಾಬೂಲ್‌ನಲ್ಲಿ ನಡೆದ ಅವಳಿ ಬಾಂಬ್ ಸ್ಫೋಟದಲ್ಲಿ 10 ಮಂದಿ ಮೃತಪಟ್ಟಿದ್ದರು.

ಕಳೆದ ವರ್ಷ ಅಫ್ಗಾನಿಸ್ತಾನದಿಂದ ತನ್ನ ಸೇನೆಯನ್ನು ಅಮೆರಿಕ ಹಿಂತೆಗೆದುಕೊಂಡಿತ್ತು. ಈ ವೇಳೆ ತಾನಿಬಾನ್‌‌ಗಳು ಅಫ್ಗಾನಿಸ್ತಾನವನ್ನು ವಶಕ್ಕೆ ತೆಗೆದುಕೊಂಡಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT