ಗಾಂಧಿ ಪ್ರತಿಮೆ ಸಾಂದರ್ಭಿಕ ಚಿತ್ರ 
ವಿದೇಶ

ನ್ಯೂಯಾರ್ಕ್: ಹಿಂದೂ ದೇವಾಲಯದ ಹೊರಗಿನ ಗಾಂಧಿ ಪ್ರತಿಮೆ ಧ್ವಂಸ

ಪ್ರಚೋದನಾಕಾರಿ ಅಪರಾಧವೊಂದರಲ್ಲಿ ಇದೇ ತಿಂಗಳ ಆರಂಭದಲ್ಲಿ ಧ್ವಂಸಗೊಳಿಸಲಾಗಿದ್ದ ಹಿಂದೂ ದೇವಾಲಯವೊಂದರಲ್ಲಿನ ಮಹಾತ್ಮ ಗಾಂಧಿಯ ಕರಕುಶಲ ಪ್ರತಿಮೆಯನ್ನು ಅಪರಿಚಿತ ದುಷ್ಕರ್ಮಿಗಳು ಸುತ್ತಿಗೆಯಿಂದ ಹೊಡೆದು ನಾಶಪಡಿಸಿದ್ದಾರೆ ಎಂದು ಮಾಧ್ಯಮ ವರದಿಗಳು ಶುಕ್ರವಾರ ತಿಳಿಸಿವೆ.

ನ್ಯೂಯಾರ್ಕ್:  ಪ್ರಚೋದನಾಕಾರಿ ಅಪರಾಧವೊಂದರಲ್ಲಿ ಇದೇ ತಿಂಗಳ ಆರಂಭದಲ್ಲಿ ಧ್ವಂಸಗೊಳಿಸಲಾಗಿದ್ದ ಹಿಂದೂ ದೇವಾಲಯವೊಂದರಲ್ಲಿನ ಮಹಾತ್ಮ ಗಾಂಧಿಯ ಕರಕುಶಲ ಪ್ರತಿಮೆಯನ್ನು ಅಪರಿಚಿತ ದುಷ್ಕರ್ಮಿಗಳು ಸುತ್ತಿಗೆಯಿಂದ ಹೊಡೆದು ನಾಶಪಡಿಸಿದ್ದಾರೆ ಎಂದು ಮಾಧ್ಯಮ ವರದಿಗಳು ಶುಕ್ರವಾರ ತಿಳಿಸಿವೆ.

ಸಿಬಿಎಸ್ ನ್ಯೂಸ್.ಕಾಮ್ ಪ್ರಕಾರ, ಮಂಗಳವಾರ ವ್ಯಕ್ತಿಯೊಬ್ಬ ಸುತ್ತಿಗೆಯಿಂದ ಮಹಾತ್ಮ ಗಾಂಧಿ ಪ್ರತಿಮೆಯನ್ನು  ಹೊಡೆಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲ ನಿಮಿಷಗಳ ನಂತರ, ಆರು ಜನರ ಗುಂಪು ಅದರ ಮೇಲೆ ಕಾಲಿಡುತ್ತದೆ ಮತ್ತು ಅಲ್ಲದೇ, ತೆಗೆದುಕೊಂಡು ಹೋಗುವ ಮೊದಲು ಸುತ್ತಿಗೆಯಿಂದ ಹೊಡೆದಿದ್ದಾರೆ ಎಂದು ಮಾಧ್ಯಮಗಳು ಹೇಳಿವೆ.  ಇದು ತುಂಬಾ ನೋವಿನ ವಿಚಾರವಾಗಿದೆ ಎಂದು ಸೌತ್ ರಿಚ್ಮಂಡ್ ಹಿಲ್ ನಲ್ಲಿರುವ ಶ್ರೀ ತುಳಸಿ ಮಂದಿರ ಸಂಸ್ಥಾಪಕ ಲಖ್ರಾಮ್ ಮಹಾರಾಜ್ ಹೇಳಿರುವುದಾಗಿ ವರದಿ ಹೇಳಿದೆ. 

ಬುಧವಾರ ಬೆಳಗ್ಗೆ ಗಾಂಧಿ ಪ್ರತಿಮೆ ಶಿಥಿಲಗೊಂಡಿರುವುದನ್ನು ಮಹಾರಾಜ್ ಪತ್ತೆ ಮಾಡಿದ್ದಾರೆ. ದೇವಾಲಯದ ಮುಂಭಾಗದಲ್ಲಿ  ನಾಯಿ ಎಂಬ ಪದವನ್ನು ಬರೆಯಲಾಗಿದೆ.  ಎರಡು ವಾರಗಳ ಹಿಂದೆ ಇದೇ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಸಮುದಾಯಕ್ಕೆ ತುಂಬಾ ತೊಂದರೆಯಾಗಿದೆ ಎಂದು ವಿಧಾನಸಭೆ ಸದಸ್ಯೆ ಜೆನಿಫರ್ ರಾಜ್‌ಕುಮಾರ್ ಹೇಳಿರುವುದಾಗಿ ವರದಿಯಲ್ಲಿ ತಿಳಿಸಿದ್ದಾರೆ. 

ಈ ಎರಡು ಘಟನೆಗಳನ್ನು ವಿಚಾರಣೆ ನಡೆಸಿದ ನ್ಯೂಯಾರ್ಕ್ ಪೊಲೀಸ್ ಡಿಪಾರ್ಟ್ ಮೆಂಟ್, ಇದು ಪ್ರಚೋದನಕಾರಿ ಅಪರಾಧವಾಗಿದೆ  ಎಂದು ಮಾಧ್ಯಮಗಳು ವರದಿ ಮಾಡಿದೆ. ಗಾಂಧಿ ಪ್ರತಿಮೆ ಕರಕುಶಲ ವಸ್ತುವಿನಿಂದ ಮಾಡಿದ್ದು, ಸುಮಾರು 4,000 ಅಮೆರಿಕನ್ ಡಾಲರ್ ವೆಚ್ಚವಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ. ಡಿಸೆಂಬರ್ 2020 ರಲ್ಲಿ, ಖಲಿಸ್ತಾನಿ ಬೆಂಬಲಿಗರು ವಾಷಿಂಗ್ಟನ್ ಡಿಸಿಯಲ್ಲಿ ಭಾರತೀಯ ರಾಯಭಾರ ಕಚೇರಿಯ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆಯನ್ನು ಅಪವಿತ್ರಗೊಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT