ಬಾಂಬ್ ಸ್ಫೋಟದ ನಂತರ ವಾಹನ ಹೊತ್ತು ಉರಿಯಿತು 
ವಿದೇಶ

ಅಫ್ಘಾನಿಸ್ತಾನ: ಮಜರ್-ಇ-ಶರೀಫ್‌ನಲ್ಲಿ ರಸ್ತೆಬದಿ ಬಾಂಬ್ ಸ್ಫೋಟ; ಹೊತ್ತಿ ಉರಿದ ಬಸ್, ಏಳು ಮಂದಿ ಸಾವು

ಉತ್ತರ ಅಫ್ಘಾನಿಸ್ತಾನದಲ್ಲಿ ಮಂಗಳವಾರ ರಸ್ತೆಬದಿಯ ಬಾಂಬ್ ಸ್ಫೋಟದಲ್ಲಿ ಬಸ್‌ನಲ್ಲಿದ್ದ ಏಳು ಪೆಟ್ರೋಲಿಯಂ ಕಂಪನಿಯೊಂದರ ಉದ್ಯೋಗಿಗಳು ಸಾವಿಗೀಡಾಗಿದ್ದಾರೆ ಎಂದು ಪ್ರಾಂತೀಯ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಮಜರ್-ಇ-ಶರೀಫ್: ಉತ್ತರ ಅಫ್ಘಾನಿಸ್ತಾನದಲ್ಲಿ ಮಂಗಳವಾರ ರಸ್ತೆಬದಿಯ ಬಾಂಬ್ ಸ್ಫೋಟದಲ್ಲಿ ಬಸ್‌ನಲ್ಲಿದ್ದ ಏಳು ಪೆಟ್ರೋಲಿಯಂ ಕಂಪನಿಯೊಂದರ ಉದ್ಯೋಗಿಗಳು ಸಾವಿಗೀಡಾಗಿದ್ದಾರೆ ಎಂದು ಪ್ರಾಂತೀಯ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

'ಬಾಂಬ್ ಅನ್ನು ರಸ್ತೆಬದಿಯ ಕಾರ್ಟ್‌ನಲ್ಲಿ ಇರಿಸಲಾಗಿತ್ತು. ಬಸ್ ಅಲ್ಲಿಗೆ ಬರುತ್ತಿದ್ದಂತೆ ಅದನ್ನು ಸ್ಫೋಟಿಸಲಾಗಿದೆ. ಸ್ಫೋಟದಿಂದಾಗಿ ಬಸ್ ಹೊತ್ತಿ ಉರಿದಿದೆ' ಎಂದು ಮಜಾರ್-ಇ-ಶರೀಫ್‌ನಲ್ಲಿರುವ ಬಾಲ್ಖ್ ಪೊಲೀಸ್ ಇಲಾಖೆಯ ಆಸಿಫ್ ವಜಿರಿ ಹೇಳಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಮತ್ತೆ ತಾಲಿಬಾನ್ ಅಧಿಕಾರಕ್ಕೆ ಬಂದ ನಂತರ ದೇಶದಾದ್ಯಂತ ಭದ್ರತೆಯನ್ನು ಸುಧಾರಿಸಲಾಗಿದೆ ಎಂದು ಹೇಳಿಕೊಂಡರೂ, ಹಲವಾರು ಬಾಂಬ್ ಸ್ಫೋಟಗಳು ಮತ್ತು ದಾಳಿಗಳು ನಡೆದಿವೆ. ಈ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಗುಂಪಿನ ಸ್ಥಳೀಯ ಸಂಘಟನೆಯು ಹೊತ್ತಿದೆ.

ಈ ತಿಂಗಳ ಆರಂಭದಲ್ಲಿ ಮಜರ್-ಇ-ಶರೀಫ್‌ನ ಆಗ್ನೇಯದಲ್ಲಿರುವ ಅಯ್ಬಕ್‌ನಲ್ಲಿರುವ ಮದರಸಾದಲ್ಲಿ ನಡೆದ ಸ್ಫೋಟದಿಂದ ಕನಿಷ್ಠ 19 ಜನರು ಮೃತಪಟ್ಟಿದ್ದರು ಮತ್ತು 24 ಮಂದಿ ಗಾಯಗೊಂಡಿದ್ದರು.

ನಗರದ ಸಯ್ಯದ್ ಅಬಾದ್ ಚೌಕದ ಬಳಿ ಮಂಗಳವಾರ ಬೆಳಿಗ್ಗೆ ಸ್ಥಳೀಯ ಕಾಲಮಾನ 7 ಗಂಟೆ ಸುಮಾರಿಗೆ ಸಂಭವಿಸಿದೆ. ಸ್ಫೋಟದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವಜೀರಿ ಸುದ್ದಿಸಂಸ್ಥೆ ಎಎಫ್‌ಪಿಗೆ ತಿಳಿಸಿದ್ದಾರೆ.

ಈ ಬಗ್ಗೆ ಹೆಚ್ಚಿನ ವಿವರಗಳು ತಕ್ಷಣವೇ ಲಭ್ಯವಿಲ್ಲ ಮತ್ತು ಈ ದಾಳಿಯ ಹೊಣೆಯನ್ನು ಇನ್ನೂ ಯಾರೊಬ್ಬರೂ ಹೊತ್ತುಕೊಂಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT