ವ್ಲಾಡಿಮಿರ್ ಪುಟಿನ್ 
ವಿದೇಶ

ರಷ್ಯಾ- ಉಕ್ರೇನ್ ಸಂಘರ್ಷ: ಪರಮಾಣು ಯುದ್ಧದ ಬೆದರಿಕೆ ಹೆಚ್ಚುತ್ತಿದೆ ಎಂದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ಪರಮಾಣು ಯುದ್ಧದ ಬೆದರಿಕೆ ಹೆಚ್ಚುತ್ತಿದೆ. ಆದರೆ, ಮಾಸ್ಕೋ ಅಂತಹ 'ಹುಚ್ಚುತನಕ್ಕೆ ಮುಂದಾಗಿಲ್ಲ' ಮತ್ತು ತನ್ನ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವುದಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಿಳಿಸಿದರು.

ಮಾಸ್ಕೊ: ಪರಮಾಣು ಯುದ್ಧದ ಬೆದರಿಕೆ ಹೆಚ್ಚುತ್ತಿದೆ. ಆದರೆ, ಮಾಸ್ಕೋ ಅಂತಹ 'ಹುಚ್ಚುತನಕ್ಕೆ ಮುಂದಾಗಿಲ್ಲ' ಮತ್ತು ತನ್ನ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವುದಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಿಳಿಸಿದರು.

ರಷ್ಯಾದ ಮಾನವ ಹಕ್ಕುಗಳ ಮಂಡಳಿಯ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಅವರು, ಉಕ್ರೇನ್‌ನಲ್ಲಿನ ಯುದ್ಧವು 'ಸುದೀರ್ಘ ಪ್ರಕ್ರಿಯೆ' ಆಗಿರಬಹುದು ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ.

'ಅಂತಹ ಬೆದರಿಕೆ ಬೆಳೆಯುತ್ತಿದೆ, ಅದನ್ನು ಮರೆಮಾಡುವುದು ತಪ್ಪಾಗುತ್ತದೆ' ಎಂದು ಮಾಸ್ಕೋದಿಂದ ವಿಡಿಯೋ ಲಿಂಕ್ ಮೂಲಕ ಪರಮಾಣು ಯುದ್ಧದ ಭವಿಷ್ಯದ ಬಗ್ಗೆ ಮಾತನಾಡುವಾಗ ಪುಟಿನ್ ಎಚ್ಚರಿಸಿದ್ದಾರೆ. ಆದರೆ, ರಷ್ಯಾವು ಯಾವುದೇ ಸಂದರ್ಭದಲ್ಲಿಯೂ ಮೊದಲು ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವುದಿಲ್ಲ ಮತ್ತು ಪರಮಾಣು ಶಸ್ತ್ರಾಗಾರದಿಂದ ಯಾರಿಗೂ ಬೆದರಿಕೆ ಹಾಕುವುದಿಲ್ಲ ಎಂದರು.

'ನಾವೇನು ಹುಚ್ಚರಲ್ಲ, ಪರಮಾಣು ಶಸ್ತ್ರಾಸ್ತ್ರಗಳ ಬಗ್ಗೆ ನಮಗೆ ಅರಿವಿದೆ. ಈ ಅಸ್ತ್ರವನ್ನು ಕತ್ತಿಯಂತೆ ಝಳಪಿಸುತ್ತಾ ನಾವು ಪ್ರಪಂಚದಾದ್ಯಂತ ಓಡಲು ಹೊರಟಿಲ್ಲ. ರಷ್ಯಾವು ವಿಶ್ವದ ಅತ್ಯಂತ ಆಧುನಿಕ ಮತ್ತು ಸುಧಾರಿತ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿದೆ ಮತ್ತು ಅದರ ಪರಮಾಣು ತಂತ್ರವು ಯುಎಸ್‌ಗೆ ವ್ಯತಿರಿಕ್ತವಾಗಿದೆ. ಅಮೆರಿಕದವರು ಇತರ ಪ್ರದೇಶಗಳಲ್ಲಿ ತನ್ನ ಪರಮಾಣು ಶಸ್ತ್ರಾಸ್ತ್ರಗಳನ್ನು ಇರಿಸುವ ಮೂಲಕ ರಷ್ಯಾಕ್ಕಿಂತ ಮುಂದೆ ಹೋಗಿದ್ದಾರೆ ಎಂದು ಅವರು ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಇತರ ದೇಶಗಳ ಭೂಪ್ರದೇಶದಲ್ಲಿ ನಾವು ಯುದ್ಧತಂತ್ರ ಸೇರಿದಂತೆ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಿಲ್ಲ. ಆದರೆ, ಅಮೆರಿಕನ್ನರು ಟರ್ಕಿಯಲ್ಲಿ ಮತ್ತು ಇತರ ಹಲವಾರು ಯುರೋಪಿಯನ್ ದೇಶಗಳಲ್ಲಿ ಹೊಂದಿದ್ದಾರೆ ಎಂದರು.

ರಷ್ಯಾದ ಪರಮಾಣು ಸಿದ್ಧಾಂತವು ಪರಮಾಣು ಶಸ್ತ್ರಾಸ್ತ್ರಗಳ ರಕ್ಷಣಾತ್ಮಕ ಬಳಕೆಗೆ ಮಾತ್ರ ಅವಕಾಶ ನೀಡುತ್ತದೆ ಎಂದು ಪುಟಿನ್ ಈ ಹಿಂದೆ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT