ಯುಎನ್ಎಸ್ ಸಿ 
ವಿದೇಶ

ನಿರ್ಬಂಧಗಳಿಂದ ಮಾನವೀಯ ನೆರವುಗಳಿಗೆ ವಿನಾಯಿತಿ ನಿರ್ಣಯ: ಮತ ಚಲಾಯಿಸದೇ ತಟಸ್ಥವಾಗಿ ಉಳಿದ ಭಾರತ

ನಿರ್ಬಂಧ ಎದುರಿಸುತ್ತಿರುವವರಿಗೆ ಮಾನವೀಯ ನೆರವುಗಳಿಗೆ ವಿನಾಯಿತಿ ನೀಡುವ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯದಿಂದ ಭಾರತ ಮತಚಲಾವಣೆ ಮಾಡದೇ ತಟಸ್ಥವಾಗಿ ಉಳಿದಿದೆ.

ನವದೆಹಲಿ: ನಿರ್ಬಂಧ ಎದುರಿಸುತ್ತಿರುವವರಿಗೆ ಮಾನವೀಯ ನೆರವುಗಳಿಗೆ ವಿನಾಯಿತಿ ನೀಡುವ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯದಿಂದ ಭಾರತ ಮತಚಲಾವಣೆ ಮಾಡದೇ ತಟಸ್ಥವಾಗಿ ಉಳಿದಿದೆ.
 
ತನ್ನ ನೆರೆ ರಾಷ್ಟ್ರದಲ್ಲಿರುವ ಭಯೋತ್ಪಾದಕ ಗುಂಪು ಸೇರಿದಂತೆ ನಿರ್ಬಂಧ ಎದುರಿಸುತ್ತಿರುವ ಹಲವು ಭಯೋತ್ಪಾದಕ ಸಂಘಟನೆಗಳು ಇಂತಹ ವಿನಾಯಿತಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಹಾಗೂ ಈ ಮೂಲಕ ದೇಣಿಗೆ ಗಳಿಸಿ, ತನಗೆ ಬೇಕಾದವರನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಭಾರತ ಅಭಿಪ್ರಾಯ ವ್ಯಕ್ತಪಡಿಸಿದೆ.
 
15 ರಾಷ್ಟ್ರಗಳ ಮಂಡಳಿಯಲ್ಲಿ ಭಾರತ ಅಧ್ಯಕ್ಷತೆ ವಹಿಸಿದೆ. ನಿರ್ಣಯವನ್ನು ಅಮೇರಿಕ ಹಾಗೂ ಐರ್ಲೇಂಡ್ ಗಳು ಮಂಡಿಸಿದ್ದವು.
 
ಈ ನಿರ್ಣಯವನ್ನು ಅಂಗೀಕರಿಸಿದ ಬಳಿಕ ಹಲವು ಜೀವಗಳು ಉಳಿಯಲಿದೆ ಎಂದು ನಿರ್ಣಯ ಮಂಡಿಸಿದ ಅಮೇರಿಕ, ಐರ್ಲೆಂಡ್ ಹೇಳಿವೆ. 14 ಸದಸ್ಯ ರಾಷ್ಟ್ರಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ, ಭಾರತ ಒಂದೇ ತಟಸ್ಥವಾಗಿ ಉಳಿದ ರಾಷ್ಟ್ರವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT