ಯುಎನ್ಎಸ್ ಸಿ 
ವಿದೇಶ

ನಿರ್ಬಂಧಗಳಿಂದ ಮಾನವೀಯ ನೆರವುಗಳಿಗೆ ವಿನಾಯಿತಿ ನಿರ್ಣಯ: ಮತ ಚಲಾಯಿಸದೇ ತಟಸ್ಥವಾಗಿ ಉಳಿದ ಭಾರತ

ನಿರ್ಬಂಧ ಎದುರಿಸುತ್ತಿರುವವರಿಗೆ ಮಾನವೀಯ ನೆರವುಗಳಿಗೆ ವಿನಾಯಿತಿ ನೀಡುವ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯದಿಂದ ಭಾರತ ಮತಚಲಾವಣೆ ಮಾಡದೇ ತಟಸ್ಥವಾಗಿ ಉಳಿದಿದೆ.

ನವದೆಹಲಿ: ನಿರ್ಬಂಧ ಎದುರಿಸುತ್ತಿರುವವರಿಗೆ ಮಾನವೀಯ ನೆರವುಗಳಿಗೆ ವಿನಾಯಿತಿ ನೀಡುವ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯದಿಂದ ಭಾರತ ಮತಚಲಾವಣೆ ಮಾಡದೇ ತಟಸ್ಥವಾಗಿ ಉಳಿದಿದೆ.
 
ತನ್ನ ನೆರೆ ರಾಷ್ಟ್ರದಲ್ಲಿರುವ ಭಯೋತ್ಪಾದಕ ಗುಂಪು ಸೇರಿದಂತೆ ನಿರ್ಬಂಧ ಎದುರಿಸುತ್ತಿರುವ ಹಲವು ಭಯೋತ್ಪಾದಕ ಸಂಘಟನೆಗಳು ಇಂತಹ ವಿನಾಯಿತಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಹಾಗೂ ಈ ಮೂಲಕ ದೇಣಿಗೆ ಗಳಿಸಿ, ತನಗೆ ಬೇಕಾದವರನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಭಾರತ ಅಭಿಪ್ರಾಯ ವ್ಯಕ್ತಪಡಿಸಿದೆ.
 
15 ರಾಷ್ಟ್ರಗಳ ಮಂಡಳಿಯಲ್ಲಿ ಭಾರತ ಅಧ್ಯಕ್ಷತೆ ವಹಿಸಿದೆ. ನಿರ್ಣಯವನ್ನು ಅಮೇರಿಕ ಹಾಗೂ ಐರ್ಲೇಂಡ್ ಗಳು ಮಂಡಿಸಿದ್ದವು.
 
ಈ ನಿರ್ಣಯವನ್ನು ಅಂಗೀಕರಿಸಿದ ಬಳಿಕ ಹಲವು ಜೀವಗಳು ಉಳಿಯಲಿದೆ ಎಂದು ನಿರ್ಣಯ ಮಂಡಿಸಿದ ಅಮೇರಿಕ, ಐರ್ಲೆಂಡ್ ಹೇಳಿವೆ. 14 ಸದಸ್ಯ ರಾಷ್ಟ್ರಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ, ಭಾರತ ಒಂದೇ ತಟಸ್ಥವಾಗಿ ಉಳಿದ ರಾಷ್ಟ್ರವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT