ಯುಎನ್ಎಸ್ ಸಿ 
ವಿದೇಶ

ನಿರ್ಬಂಧಗಳಿಂದ ಮಾನವೀಯ ನೆರವುಗಳಿಗೆ ವಿನಾಯಿತಿ ನಿರ್ಣಯ: ಮತ ಚಲಾಯಿಸದೇ ತಟಸ್ಥವಾಗಿ ಉಳಿದ ಭಾರತ

ನಿರ್ಬಂಧ ಎದುರಿಸುತ್ತಿರುವವರಿಗೆ ಮಾನವೀಯ ನೆರವುಗಳಿಗೆ ವಿನಾಯಿತಿ ನೀಡುವ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯದಿಂದ ಭಾರತ ಮತಚಲಾವಣೆ ಮಾಡದೇ ತಟಸ್ಥವಾಗಿ ಉಳಿದಿದೆ.

ನವದೆಹಲಿ: ನಿರ್ಬಂಧ ಎದುರಿಸುತ್ತಿರುವವರಿಗೆ ಮಾನವೀಯ ನೆರವುಗಳಿಗೆ ವಿನಾಯಿತಿ ನೀಡುವ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯದಿಂದ ಭಾರತ ಮತಚಲಾವಣೆ ಮಾಡದೇ ತಟಸ್ಥವಾಗಿ ಉಳಿದಿದೆ.
 
ತನ್ನ ನೆರೆ ರಾಷ್ಟ್ರದಲ್ಲಿರುವ ಭಯೋತ್ಪಾದಕ ಗುಂಪು ಸೇರಿದಂತೆ ನಿರ್ಬಂಧ ಎದುರಿಸುತ್ತಿರುವ ಹಲವು ಭಯೋತ್ಪಾದಕ ಸಂಘಟನೆಗಳು ಇಂತಹ ವಿನಾಯಿತಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಹಾಗೂ ಈ ಮೂಲಕ ದೇಣಿಗೆ ಗಳಿಸಿ, ತನಗೆ ಬೇಕಾದವರನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಭಾರತ ಅಭಿಪ್ರಾಯ ವ್ಯಕ್ತಪಡಿಸಿದೆ.
 
15 ರಾಷ್ಟ್ರಗಳ ಮಂಡಳಿಯಲ್ಲಿ ಭಾರತ ಅಧ್ಯಕ್ಷತೆ ವಹಿಸಿದೆ. ನಿರ್ಣಯವನ್ನು ಅಮೇರಿಕ ಹಾಗೂ ಐರ್ಲೇಂಡ್ ಗಳು ಮಂಡಿಸಿದ್ದವು.
 
ಈ ನಿರ್ಣಯವನ್ನು ಅಂಗೀಕರಿಸಿದ ಬಳಿಕ ಹಲವು ಜೀವಗಳು ಉಳಿಯಲಿದೆ ಎಂದು ನಿರ್ಣಯ ಮಂಡಿಸಿದ ಅಮೇರಿಕ, ಐರ್ಲೆಂಡ್ ಹೇಳಿವೆ. 14 ಸದಸ್ಯ ರಾಷ್ಟ್ರಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ, ಭಾರತ ಒಂದೇ ತಟಸ್ಥವಾಗಿ ಉಳಿದ ರಾಷ್ಟ್ರವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ ‘ವಿಶ್ವಾಸಾರ್ಹ ಪಾಲುದಾರಿಕೆ’ ಅಗತ್ಯ: Quad ಸಭೆಯಲ್ಲಿ ಜೈಶಂಕರ್‌ ಮಹತ್ವದ ಕರೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ತಮಿಳುನಾಡು ಸರ್ಕಾರದಿಂದ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನೆ ಬೆಳೆ ಸಾಲ ಮನ್ನಾ!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

SCROLL FOR NEXT