ಯುಎನ್ಎಸ್ ಸಿ 
ವಿದೇಶ

ನಿರ್ಬಂಧಗಳಿಂದ ಮಾನವೀಯ ನೆರವುಗಳಿಗೆ ವಿನಾಯಿತಿ ನಿರ್ಣಯ: ಮತ ಚಲಾಯಿಸದೇ ತಟಸ್ಥವಾಗಿ ಉಳಿದ ಭಾರತ

ನಿರ್ಬಂಧ ಎದುರಿಸುತ್ತಿರುವವರಿಗೆ ಮಾನವೀಯ ನೆರವುಗಳಿಗೆ ವಿನಾಯಿತಿ ನೀಡುವ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯದಿಂದ ಭಾರತ ಮತಚಲಾವಣೆ ಮಾಡದೇ ತಟಸ್ಥವಾಗಿ ಉಳಿದಿದೆ.

ನವದೆಹಲಿ: ನಿರ್ಬಂಧ ಎದುರಿಸುತ್ತಿರುವವರಿಗೆ ಮಾನವೀಯ ನೆರವುಗಳಿಗೆ ವಿನಾಯಿತಿ ನೀಡುವ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯದಿಂದ ಭಾರತ ಮತಚಲಾವಣೆ ಮಾಡದೇ ತಟಸ್ಥವಾಗಿ ಉಳಿದಿದೆ.
 
ತನ್ನ ನೆರೆ ರಾಷ್ಟ್ರದಲ್ಲಿರುವ ಭಯೋತ್ಪಾದಕ ಗುಂಪು ಸೇರಿದಂತೆ ನಿರ್ಬಂಧ ಎದುರಿಸುತ್ತಿರುವ ಹಲವು ಭಯೋತ್ಪಾದಕ ಸಂಘಟನೆಗಳು ಇಂತಹ ವಿನಾಯಿತಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಹಾಗೂ ಈ ಮೂಲಕ ದೇಣಿಗೆ ಗಳಿಸಿ, ತನಗೆ ಬೇಕಾದವರನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಭಾರತ ಅಭಿಪ್ರಾಯ ವ್ಯಕ್ತಪಡಿಸಿದೆ.
 
15 ರಾಷ್ಟ್ರಗಳ ಮಂಡಳಿಯಲ್ಲಿ ಭಾರತ ಅಧ್ಯಕ್ಷತೆ ವಹಿಸಿದೆ. ನಿರ್ಣಯವನ್ನು ಅಮೇರಿಕ ಹಾಗೂ ಐರ್ಲೇಂಡ್ ಗಳು ಮಂಡಿಸಿದ್ದವು.
 
ಈ ನಿರ್ಣಯವನ್ನು ಅಂಗೀಕರಿಸಿದ ಬಳಿಕ ಹಲವು ಜೀವಗಳು ಉಳಿಯಲಿದೆ ಎಂದು ನಿರ್ಣಯ ಮಂಡಿಸಿದ ಅಮೇರಿಕ, ಐರ್ಲೆಂಡ್ ಹೇಳಿವೆ. 14 ಸದಸ್ಯ ರಾಷ್ಟ್ರಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ, ಭಾರತ ಒಂದೇ ತಟಸ್ಥವಾಗಿ ಉಳಿದ ರಾಷ್ಟ್ರವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಭಕ್ತಿ ಗೀತೆ ಹಾಡಿದ್ದಕ್ಕೆ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿ ಮೇಲೆ ಮೆಹಬೂಬ್ ಮಲ್ಲಿಕ್‌ನಿಂದ ಹಲ್ಲೆಗೆ ಯತ್ನ, Video Viral

ಆರೋಗ್ಯ ತಪಾಸಣೆಯೋ ಅಥವಾ ರಾಜಕೀಯವೋ? ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ದೆಹಲಿ ಭೇಟಿ

U-19 Asia Cup ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಹೀನಾಯ ಸೋಲು!

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿನ ವೀಸಾ ಕೇಂದ್ರ ಸ್ಥಗಿತಗೊಳಿಸಿದ ಭಾರತ

SCROLL FOR NEXT