ಸಾಂದರ್ಭಿಕ ಚಿತ್ರ 
ವಿದೇಶ

ಕೆನಡಾ: ಭಾರತೀಯ ಮೂಲದ ಸಿಖ್ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ

ಕೆನಡಾದ ಅಲ್ಬರ್ಟಾ ಪ್ರಾಂತ್ಯದಲ್ಲಿ 24 ವರ್ಷದ ಭಾರತೀಯ ಮೂಲದ ಸಿಖ್ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ತಿಂಗಳಲ್ಲಿ ಕೆನಡಾದಲ್ಲಿ ನಡೆದ ಎರಡನೇ ಘಟನೆಯಾಗಿದೆ.

ಅಲ್ಬರ್ಟಾ: ಕೆನಡಾದ ಅಲ್ಬರ್ಟಾ ಪ್ರಾಂತ್ಯದಲ್ಲಿ 24 ವರ್ಷದ ಭಾರತೀಯ ಮೂಲದ ಸಿಖ್ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ತಿಂಗಳಲ್ಲಿ ಕೆನಡಾದಲ್ಲಿ ನಡೆದ ಎರಡನೇ ಘಟನೆಯಾಗಿದೆ.

ಹತ್ಯೆಯಾದ ಸಿಖ್ ವ್ಯಕ್ತಿ ಸಂರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಪೊಲೀಸರು ಡಿಸೆಂಬರ್ 3 ರ ರಾತ್ರಿ ಈ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಎಡ್ಮಂಟನ್ ಪೊಲೀಸ್ ಪ್ರಕಟಣೆ ತಿಳಿಸಿದೆ.

ಪೊಲೀಸರ ಪ್ರಕಾರ, ಗುಂಡಿನ ದಾಳಿ ನಡೆಸಿದ ಬಳಿಕ ಶಂಕಿತರ ವಾಹನ ಈ ಪ್ರದೇಶವನ್ನು ಬಿಟ್ಟು ಹೋಗುತ್ತಿರುವುದು ಕಂಡುಬಂದಿದೆ ಮತ್ತು ಅದರ ಫೋಟೋಗಳನ್ನು ತನಿಖಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

ಡಿಸೆಂಬರ್ 3 ರ ರಾತ್ರಿ ನಡೆದ ಯಾವುದೇ ಅನುಮಾನಾಸ್ಪದ ಚಟುವಟಿಕೆಯ ಬಗ್ಗೆ ತಮ್ಮ ಸಿಸಿಟಿವಿ ಕ್ಯಾಮೆರಾಗಳು ಅಥವಾ ಡ್ಯಾಶ್‌ಕ್ಯಾಮ್ ದೃಶ್ಯಗಳನ್ನು ಪರಿಶೀಲಿಸುವಂತೆ ನಿವಾಸಿಗಳಿಗೆ ಸೂಚಿಸಲಾಗಿದೆ.

ಒಂಟಾರಿಯೊ ಪ್ರಾಂತ್ಯದಲ್ಲಿ ಕಳೆದ ಡಿಸೆಂಬರ್ 3 ರಂದು ನಡೆದ 'ಉದ್ದೇಶಿತ' ದಾಳಿಯಲ್ಲಿ 21 ವರ್ಷದ ಸಿಖ್ ಮಹಿಳೆ ಪವನ್‌ಪ್ರೀತ್ ಕೌರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT