ಸಾಂದರ್ಭಿಕ ಚಿತ್ರ 
ವಿದೇಶ

ಕೆನಡಾ: ಭಾರತೀಯ ಮೂಲದ ಸಿಖ್ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ

ಕೆನಡಾದ ಅಲ್ಬರ್ಟಾ ಪ್ರಾಂತ್ಯದಲ್ಲಿ 24 ವರ್ಷದ ಭಾರತೀಯ ಮೂಲದ ಸಿಖ್ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ತಿಂಗಳಲ್ಲಿ ಕೆನಡಾದಲ್ಲಿ ನಡೆದ ಎರಡನೇ ಘಟನೆಯಾಗಿದೆ.

ಅಲ್ಬರ್ಟಾ: ಕೆನಡಾದ ಅಲ್ಬರ್ಟಾ ಪ್ರಾಂತ್ಯದಲ್ಲಿ 24 ವರ್ಷದ ಭಾರತೀಯ ಮೂಲದ ಸಿಖ್ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ತಿಂಗಳಲ್ಲಿ ಕೆನಡಾದಲ್ಲಿ ನಡೆದ ಎರಡನೇ ಘಟನೆಯಾಗಿದೆ.

ಹತ್ಯೆಯಾದ ಸಿಖ್ ವ್ಯಕ್ತಿ ಸಂರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಪೊಲೀಸರು ಡಿಸೆಂಬರ್ 3 ರ ರಾತ್ರಿ ಈ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಎಡ್ಮಂಟನ್ ಪೊಲೀಸ್ ಪ್ರಕಟಣೆ ತಿಳಿಸಿದೆ.

ಪೊಲೀಸರ ಪ್ರಕಾರ, ಗುಂಡಿನ ದಾಳಿ ನಡೆಸಿದ ಬಳಿಕ ಶಂಕಿತರ ವಾಹನ ಈ ಪ್ರದೇಶವನ್ನು ಬಿಟ್ಟು ಹೋಗುತ್ತಿರುವುದು ಕಂಡುಬಂದಿದೆ ಮತ್ತು ಅದರ ಫೋಟೋಗಳನ್ನು ತನಿಖಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

ಡಿಸೆಂಬರ್ 3 ರ ರಾತ್ರಿ ನಡೆದ ಯಾವುದೇ ಅನುಮಾನಾಸ್ಪದ ಚಟುವಟಿಕೆಯ ಬಗ್ಗೆ ತಮ್ಮ ಸಿಸಿಟಿವಿ ಕ್ಯಾಮೆರಾಗಳು ಅಥವಾ ಡ್ಯಾಶ್‌ಕ್ಯಾಮ್ ದೃಶ್ಯಗಳನ್ನು ಪರಿಶೀಲಿಸುವಂತೆ ನಿವಾಸಿಗಳಿಗೆ ಸೂಚಿಸಲಾಗಿದೆ.

ಒಂಟಾರಿಯೊ ಪ್ರಾಂತ್ಯದಲ್ಲಿ ಕಳೆದ ಡಿಸೆಂಬರ್ 3 ರಂದು ನಡೆದ 'ಉದ್ದೇಶಿತ' ದಾಳಿಯಲ್ಲಿ 21 ವರ್ಷದ ಸಿಖ್ ಮಹಿಳೆ ಪವನ್‌ಪ್ರೀತ್ ಕೌರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

Siddaramaiah ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದೆಹಲಿಗೆ ಬದಲು ಜೈಪುರದಲ್ಲಿ ಲ್ಯಾಂಡಿಂಗ್! ಆಗಿದ್ದೇನು?

Siddaramaiah Resign: ಇನ್ಮುಂದೆ ಗ್ಯಾರಂಟಿ ಯೋಜನೆಗಳು ಇರಲ್ಲ, 2028ರಲ್ಲಿ ಕಾಂಗ್ರೆಸ್ 40 ಸ್ಥಾನ ಕೂಡಾ ಗೆಲ್ಲಲ್ಲ- ಲಖನ್ ಜಾರಕಿಹೊಳಿ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

SCROLL FOR NEXT