ಚೀನಾದ ವಿದೇಶಾಂಗ ವಕ್ತಾರ ವಾಂಗ್ ವೆನ್ಬಿನ್ 
ವಿದೇಶ

ತವಾಂಗ್ ನಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಅರುಣಾಚಲ ಗಡಿಯಲ್ಲಿ ಪರಿಸ್ಥಿತಿ 'ಸ್ಥಿರವಾಗಿದೆ' ಎಂದ ಚೀನಾ

ಕಳೆದ ವಾರ ಅರುಣಾಚಲ ಗಡಿಯ ಯಾಂಗ್ಟ್ಸೆ ಪ್ರದೇಶದಲ್ಲಿ ಭಾರತ - ಚೀನಾ ಸೇನಿಕರ ನಡುವೆ ಘರ್ಷಣೆ ನಡೆದಿದೆ ಎಂದು ವರದಿಯಾದ ನಂತರ ಭಾರತದೊಂದಿಗಿನ ತನ್ನ ಗಡಿಯಲ್ಲಿ ಪರಿಸ್ಥಿತಿ "ಸ್ಥಿರವಾಗಿದೆ" ಎಂದು ಚೀನಾ ಮಂಗಳವಾರ ಹೇಳಿದೆ.

ಬೀಜಿಂಗ್: ಕಳೆದ ವಾರ ಅರುಣಾಚಲ ಗಡಿಯ ಯಾಂಗ್ಸ್ಟೆ  ಪ್ರದೇಶದಲ್ಲಿ ಭಾರತ - ಚೀನಾ ಸೇನಿಕರ ನಡುವೆ ಘರ್ಷಣೆ ನಡೆದಿದೆ ಎಂದು ವರದಿಯಾದ ನಂತರ ಭಾರತದೊಂದಿಗಿನ ತನ್ನ ಗಡಿಯಲ್ಲಿ ಪರಿಸ್ಥಿತಿ "ಸ್ಥಿರವಾಗಿದೆ" ಎಂದು ಚೀನಾ ಮಂಗಳವಾರ ಹೇಳಿದೆ.

ಆದರೆ ಇಂದು ನಡೆದ ಘರ್ಷಣೆಯ ಬಗ್ಗೆ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್‌ಬಿನ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, "ನಮಗೆ ತಿಳಿದಿರುವಂತೆ, ಚೀನಾ-ಭಾರತದ ಗಡಿ ಪರಿಸ್ಥಿತಿ ಒಟ್ಟಾರೆ ಸ್ಥಿರವಾಗಿದೆ" ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

"ಉಭಯ ದೇಶಗಳು ರಾಜತಾಂತ್ರಿಕ ಮತ್ತು ಮಿಲಿಟರಿ ಚಾನೆಲ್‌ಗಳ ಮೂಲಕ ಗಡಿ ಸಮಸ್ಯೆಯ ಕುರಿತು ಮಾತುಕತೆ ಮೂಲಕ ಪರಿಹರಿಸಿಕೊಳ್ಳಲಿವೆ. ಭಾರತ ಸಹ ಚೀನಾದ ದಿಕ್ಕಿನಲ್ಲಿಯೇ ಮುನ್ನಡೆಯುತ್ತದೆ ಎಂದು ಭಾವಿಸುವುದಾಗಿ" ಎಂದು ಅವರು ಹೇಳಿದ್ದಾರೆ.

"ಉಭಯ ದೇಶಗಳ ನಾಯಕರು ಮಾಡಿಕೊಂಡ ಒಪ್ಪಂದವನ್ನು ಶ್ರದ್ಧೆಯಿಂದ ಜಾರಿಗೆ ತರಬೇಕು ಎಂದು  ಒತ್ತಾಯಿಸಿದ ವಾಂಗ್ ವೆನ್‌ಬಿನ್, ಎರಡೂ ಕಡೆಯವರು ಸಹಿ ಮಾಡಿದ ಒಪ್ಪಂದಗಳು ಮತ್ತು ಒಪ್ಪಂದಗಳ ಮನೋಭಾವವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಚೀನಾ-ಭಾರತ ಒಟ್ಟಾಗಿ ಗಡಿ ಪ್ರದೇಶದ ಶಾಂತಿ ಮತ್ತು ನೆಮ್ಮದಿಯನ್ನು ಎತ್ತಿಹಿಡಿಯಬೇಕು" ಎಂದು ಹೇಳಿದ್ದಾರೆ.

ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಕಳೆದ ಶುಕ್ರವಾರ ನಡೆದ ಮುಖಾಮುಖಿ ಸಂಘರ್ಷದಲ್ಲಿ ಭಾರತೀಯ ಸೈನಿಕರಿಗಿಂತ ಚೀನಾ ಸೈನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT