ಫಿಲಿಪೈನ್ಸ್‌ನಲ್ಲಿ ಭಾರಿ ಮಳೆಯಿಂದ ಪ್ರವಾಹ, ರಕ್ಷಣಾ ಕಾರ್ಯಾಚರಣೆ 
ವಿದೇಶ

ಫಿಲಿಪೈನ್ಸ್‌ನಲ್ಲಿ ಭಾರಿ ಮಳೆ: ಪ್ರವಾಹದಿಂದಾಗಿ 32 ಮಂದಿ ಸಾವು, 24 ಜನರು ನಾಪತ್ತೆ

ಕ್ರಿಸ್‌ಮಸ್ ವಾರಾಂತ್ಯದಲ್ಲಿ ಫಿಲಿಪೈನ್ಸ್‌ನ ಕೆಲವು ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿದ್ದು, ಭಾರಿಯಿಂದಾಗಿ ಉಂಟಾಗಿರುವ ಪ್ರವಾಹದಿಂದ ಕನಿಷ್ಠ 32 ಮಂದಿ ಸಾವಿಗೀಡಾಗಿದ್ದಾರೆ ಮತ್ತು 24 ಮಂದಿ ಕಾಣೆಯಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಸಂಸ್ಥೆ ಗುರುವಾರ ತಿಳಿಸಿದೆ.

ಮನಿಲಾ: ಕ್ರಿಸ್‌ಮಸ್ ವಾರಾಂತ್ಯದಲ್ಲಿ ಫಿಲಿಪೈನ್ಸ್‌ನ ಕೆಲವು ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿದ್ದು, ಭಾರಿಯಿಂದಾಗಿ ಉಂಟಾಗಿರುವ ಪ್ರವಾಹದಿಂದ ಕನಿಷ್ಠ 32 ಮಂದಿ ಸಾವಿಗೀಡಾಗಿದ್ದಾರೆ ಮತ್ತು 24 ಮಂದಿ ಕಾಣೆಯಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಸಂಸ್ಥೆ ಗುರುವಾರ ತಿಳಿಸಿದೆ.

ಪೂರ್ವ, ಮಧ್ಯ ಮತ್ತು ದಕ್ಷಿಣ ಫಿಲಿಪೈನ್ಸ್‌ನಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಕ್ರಿಸ್‌ಮಸ್‌ ಆಚರಣೆಗೆ ಅಡ್ಡಿಯುಂಟಾಗಿದ್ದು, ಮಳೆಯಿಂದಾಗಿ 56,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ.

ಮಿಸಾಮಿಸ್ ಆಕ್ಸಿಡೆಂಟಲ್‌ನ ದಕ್ಷಿಣ ಪ್ರಾಂತ್ಯದಲ್ಲಿನ ಫೋಟೊಗಳಲ್ಲಿ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ತಂಡವು ವಯಸ್ಸಾದ ಮಹಿಳೆಯನ್ನು ಪ್ಲಾಸ್ಟಿಕ್ ಕುರ್ಚಿಯ ಮೇಲೆ ಕೂರಿಸಿ ಹೊತ್ತುಕೊಂಡು ಪ್ರವಾಹಕ್ಕೆ ಸಿಲುಕಿದ ಬೀದಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು.

ಕರಾವಳಿ ಕಾವಲು ಪಡೆಯು ಹಗ್ಗವನ್ನು ಬಳಸಿ ಎದೆಯ ಆಳದ ಪ್ರವಾಹಕ್ಕೆ ಅಡ್ಡಲಾಗಿ ಎಳೆದು ಪ್ರಾಂತ್ಯದ ಕೆಲವು ನಿವಾಸಿಗಳನ್ನು ರಕ್ಷಿಸುತ್ತಿರುವುದು ಕಂಡುಬಂದಿದೆ.

ಸಾವಿಗೀಡಾದ 32 ಮಂದಿಯಲ್ಲಿ 18 ಮಂದಿ ಉತ್ತರ ಮಿಂಡಾನಾವೊ ಪ್ರದೇಶದಲ್ಲಿ ವರದಿಯಾಗಿವೆ. ನಾಪತ್ತೆಯಾಗಿರುವ 24 ಮಂದಿಯ ಪೈಕಿ 22 ಜನ ಮಧ್ಯ ಫಿಲಿಪೈನ್ಸ್ ಮತ್ತು ಪೂರ್ವ ಬಿಕೋಲ್ ಪ್ರದೇಶದ ವಿಸಾಯಾಸ್‌ನಿಂದ ಬಂದವರು ಎಂದು ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಮಂಡಳಿ ತಿಳಿಸಿದೆ.

ಹೆಚ್ಚಿನ ಸಾವುಗಳು ಪ್ರವಾಹದಲ್ಲಿ ಮುಳುಗುವಿಕೆಯಿಂದ ಸಂಭವಿಸಿದ್ದು, ನಾಪತ್ತೆಯಾದವರಲ್ಲಿ ದೋಣಿಗಳು ಮುಳುಗಿದ ಮೀನುಗಾರರು ಎಂದು ಸಂಸ್ಥೆ ತಿಳಿಸಿದೆ.

ರಸ್ತೆಗಳು ಮತ್ತು ಸೇತುವೆಗಳ ಜೊತೆಗೆ 4,000 ಕ್ಕೂ ಹೆಚ್ಚು ಮನೆಗಳು ಪ್ರವಾಹದಿಂದ ಹಾನಿಗೊಳಗಾಗಿವೆ ಮತ್ತು ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಅಥವಾ ನೀರಿನ ಸಂಪರ್ಕ ಕಡಿತಗೊಂಡಿದೆ ಎಂದು ಸಂಸ್ಥೆ ವರದಿ ಮಾಡಿದೆ.

'ಬೆಚ್ಚಗಿನ ಮತ್ತು ತಣ್ಣನೆಯ ಗಾಳಿಯು ಸಂಧಿಸುವ ಬಿಂದು'ವಿನ ಶಿಯರ್ ರೇಖೆಯು ದೇಶದ ಕೆಲವು ಭಾಗಗಳಲ್ಲಿ ಮಳೆಗೆ ಕಾರಣವಾಯಿತು. ಪ್ರವಾಹದಿಂದ ಪೀಡಿತವಾಗಿರುವ ಕೆಲವು ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಲಘುವಾರಿ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಬ್ಯೂರೋ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT