ಸೀಮೆಎಣ್ಣೆಗಾಗಿ ಸಾಲುಗಟ್ಟಿ ನಿಂತಿರುವ ಜನ 
ವಿದೇಶ

ನಾಪತ್ತೆಯಾಗಿದ್ದ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಮತ್ತೆ ಕೆಲಸಕ್ಕೆ ಹಾಜರು; ಅಡುಗೆ ಅನಿಲ ವಿತರಣೆಗೆ ಆದೇಶ

ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಜನರ ಮೂಲಭೂತ ಅಗತ್ಯಗಳನ್ನು ಪೂರೈಸಲು ವಿಫಲವಾದ ಶ್ರೀಲಂಕಾ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಜನ ತಮ್ಮ ಕಚೇರಿ ಮತ್ತು ಅಧಿಕೃತ ನಿವಾಸ ಎರಡನ್ನೂ ಆಕ್ರಮಿಸಿಕೊಂಡ ನಂತರ...

ಕೊಲಂಬೊ: ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಜನರ ಮೂಲಭೂತ ಅಗತ್ಯಗಳನ್ನು ಪೂರೈಸಲು ವಿಫಲವಾದ ಶ್ರೀಲಂಕಾ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಜನ ತಮ್ಮ ಕಚೇರಿ ಮತ್ತು ಅಧಿಕೃತ ನಿವಾಸ ಎರಡನ್ನೂ ಆಕ್ರಮಿಸಿಕೊಂಡ ನಂತರ ನಾಪತ್ತೆಯಾಗಿದ್ದ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ಈಗ ಮತ್ತೆ ಕೆಲಸಕ್ಕೆ ಹಾಜರಾಗಿದ್ದು, ಅಡುಗೆ ಅನಿಲ ವಿತರಣೆಗೆ ಆದೇಶ ನೀಡಿದ್ದಾರೆ.

ಅದಾಗ್ಯೂ ಅಧ್ಯಕ್ಷರು ಎಲ್ಲಿದ್ದಾರೆ ಎಂದು ತಿಳಿದು ಬಂದಿಲ್ಲ. ಹಸಿವಿನಿಂದ ಬಳಲುತ್ತಿರುವ ದೇಶಕ್ಕೆ 3,700 ಮೆಟ್ರಿಕ್ ಟನ್ ಎಲ್‌ಪಿ ಗ್ಯಾಸ್ ದೊರೆತ ನಂತರ ಅಡುಗೆ ಅನಿಲವನ್ನು ಸುಗಮವಾಗಿ ವಿತರಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ ಎಂದು ಅವರ ಕಚೇರಿ ಭಾನುವಾರ ತಿಳಿಸಿದೆ.

ಇಂದು ಮಧ್ಯಾಹ್ನ ಮೊದಲ ಹಡಗು ಕೆರವಲಪಿಟಿಯಕ್ಕೆ ಆಗಮಿಸುತ್ತಿದ್ದಂತೆ ಅನಿಲ ಇಳಿಸುವಿಕೆ ಮತ್ತು ವಿತರಣೆ ಕೈಗೊಳ್ಳುವಂತೆ ಅಧ್ಯಕ್ಷ ರಾಜಪಕ್ಸೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.

3,740 ಮೆಟ್ರಿಕ್ ಟನ್ ಅನಿಲವನ್ನು ಸಾಗಿಸುವ ಎರಡನೇ ಹಡಗು ಜುಲೈ 11 ರಂದು ಬರಲಿದೆ ಮತ್ತು 3,200 ಮೆಟ್ರಿಕ್ ಟನ್ ಅನಿಲ ಹೊತ್ತ ಮೂರನೇ ಹಡಗು ಜುಲೈ 15 ರಂದು ತಲುಪಲಿದೆ ಎಂದು ಶ್ರೀಲಂಕಾ ಮಾಧ್ಯಮಗಳು ವರದಿ ಮಾಡಿವೆ.

ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಅವರ ನಿವಾಸವನ್ನು ವಶಪಡಿಸಿಕೊಂಡಿರುವ ಪ್ರತಿಭಟನಾಕಾರರು ಅವರ ಮನೆಯಲ್ಲಿ ಮನಬಂದಂತೆ ಎಂಜಾಯ್ ಮಾಡ್ತಿದ್ದಾರೆ. ಅಧ್ಯಕ್ಷರ ವಿರುದ್ಧ ಕೋಪಗೊಂಡಿರುವ ಪ್ರತಿಭಟನಾಕಾರರು ನಿನ್ನೆ ನಿವಾಸವನ್ನು ವಶಪಡಿಸಿಕೊಂಡಿದ್ದು, ಅವರ ಅರಮನೆಯು ಕೊಲಂಬೊದಲ್ಲಿ ಹೊಸ ಪ್ರವಾಸಿ ತಾಣವಾಗಿದೆ. ಇಂದು ಅರಮನೆಯಲ್ಲಿರುವ ಜಿಮ್‌ನಲ್ಲಿ ಜನಸಾಗರವೇ ಕಸರತ್ತು ನಡೆಸುತ್ತಿರುವುದು ಕಂಡುಬಂತು.

ಜಿಮ್‌ನಲ್ಲಿನ ಟ್ರೆಡ್‌ಮಿಲ್‌ಗಳ ಬಳಕೆ , ಕಾರ್ಡಿಯೋ ಮತ್ತು ತೂಕದ ಉಪಕರಣಗಳನ್ನು ಸಹ ಬಳಸುತ್ತಿದ್ದು ಮನಬಂದಂತೆ ವರ್ತಿಸುತ್ತಿದ್ದಾರೆ.  ಶನಿವಾರ  ಪ್ರತಿಭಟನಾಕಾರರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಸ್ನಾನ ಮಾಡುತ್ತಿರುವುದು, ಅಡುಗೆಮನೆಯಲ್ಲಿ ಊಟ ಮಾಡುವುದು ಮತ್ತು ಅಧ್ಯಕ್ಷರ ಮನೆಯಲ್ಲಿ ಮಲಗುವ ಕೋಣೆಗಳಲ್ಲಿ ವಿಶ್ರಾಂತಿ ಪಡೆಯುತ್ತಿರುವ ವೀಡಿಯೊಗಳು ಹೊರಬಿದ್ದ ಬೆನ್ನಲ್ಲೇ ಇಂದಿನ ವಿಡಿಯೋ ವೈರಲ್ ಆಗ್ತಿದೆ.

ಅಧ್ಯಕ್ಷ ರಾಜಪಕ್ಸೆ ಅವರು ಪಲಾಯನಗೈದಿದ್ದು ಪ್ರಸ್ತುತ ಶ್ರೀಲಂಕಾ ನೌಕಾಪಡೆಯ ಹಡಗಿನಲ್ಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ನಿನ್ನೆ ಜುಲೈ 13 ರಂದು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರಾಜಪಕ್ಸೆ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT