ಲಂಕಾದಲ್ಲಿ ಪ್ರತಿಭಟನೆ 
ವಿದೇಶ

ಮುಂದಿನ ವಾರ ಶ್ರೀಲಂಕಾ ಸಂಸತ್ತಿನಲ್ಲಿ ನೂತನ ಅಧ್ಯಕ್ಷರ ನೇಮಕ

ಶ್ರೀಲಂಕಾ ಸಂಸತ್ ಜುಲೈ 20 ರಂದು ನೂತನ ಅಧ್ಯಕ್ಷರನ್ನು ನೇಮಕ ಮಾಡಲಿದೆ ಎಂದು ಸ್ಪೀಕರ್ ಮಹಿಂದಾ ಯಪ ಅಬೇವರ್ಧನ ಜು.11 ರಂದು ಘೋಶಿಸಿದ್ದಾರೆ. 

ಕೊಲಂಬೋ: ಶ್ರೀಲಂಕಾ ಸಂಸತ್ ಜುಲೈ 20 ರಂದು ನೂತನ ಅಧ್ಯಕ್ಷರನ್ನು ನೇಮಕ ಮಾಡಲಿದೆ ಎಂದು ಸ್ಪೀಕರ್ ಮಹಿಂದಾ ಯಪ ಅಬೇವರ್ಧನ ಜು.11 ರಂದು ಘೋಶಿಸಿದ್ದಾರೆ. ಲಂಕಾದ ಆರ್ಥಿಕ ಬಿಕ್ಕಟ್ಟು ತೀವ್ರಗೊಂಡಿದ್ದು, ಜನ ದಂಗೆ ಎದ್ದಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ರಾಜಪಕ್ಸ ರಾಜೀನಾಮೆಗೆ ಒತ್ತಡ ಹೆಚ್ಚಿದೆ. 

ಲಂಕಾ ಅಧ್ಯಕ್ಷ ಗೋಟಾಬಾಯ ರಾಜಪಕ್ಸ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಸಂಬಂಧ ಸರ್ವಪಕ್ಷ ಸಭೆಯಲ್ಲಿ ನಾಯಕರು ನಿರ್ಧಾರ ಕೈಗೊಂಡಿದ್ದರು. ಅಧ್ಯಕ್ಷ ರಾಜಪಕ್ಸ ಅಧಿಕೃತವಾಗಿ ಇನ್ನಷ್ಟೇ ರಾಜೀನಾಮೆ ನೀಡಬೇಕಿದ್ದು, ಜು.13 ರಂದು ರಾಜೀನಾಮೆ ನೀಡುವುದಾಗಿ ಸ್ಪೀಕರ್ ಗೆ ತಿಳಿಸಿದ್ದಾರೆ.

ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವ ನಿಟ್ಟಿನಲ್ಲಿ ಲಂಕಾದಲ್ಲಿ ಸರ್ವಪಕ್ಷಗಳ ಸದಸ್ಯರನ್ನೊಳಗೊಂಡ ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು ನಡೆಯುತ್ತಿದ್ದು, ಪ್ರಧಾನಿ ರನಿಲ್ ವಿಕ್ರಮಸಿಂಘೆ ಸಹ ಹೊಸ ಸರ್ಕಾರಕ್ಕೆ ದಾರಿ ಮಾಡಿಕೊಡಲು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.
 
ರಾಜಪಕ್ಸ ರಾಜೀನಾಮೆ ಬಳಿಕ ಸಂಸತ್ ಜು.15 ರಂದು ಸೇರಲಿದ್ದು,  ಹೊಸ ಅಧ್ಯಕ್ಷರ ಹುದ್ದೆಗೆ ನೇಮಕದ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಹಾಗೂ ಜು.19 ರಂದು ನಾಪಪತ್ರಗಳನ್ನು ಅಂಗೀಕರಿಸಲು ಮತ್ತೆ ಸಂಸತ್ ಸೇರಲಿದೆ ಎಂದು ಸ್ಪೀಕರ್ ಅಬೇವರ್ಧನ ಹೇಳಿದ್ದಾರೆ. 

ಜು.20 ರಂದು ಹೊಸ ಅಧ್ಯಕ್ಷರ ನೇಮಕಕ್ಕೆ ಚುನಾವಣೆ ನಡೆಯಲಿದೆ ಎಂದು ಸ್ಪೀಕರ್ ತಿಳಿಸಿದ್ದಾರೆ. ಲಂಕಾದ ಸಂವಿಧಾನದ ಪ್ರಕಾರ ಲಂಕಾದ ಪ್ರಧಾನಿ ಹಾಗೂ ಅಧ್ಯಕ್ಷರು ಏಕಕಾಲದಲ್ಲಿ ರಾಜೀನಾಮೆ ನೀಡಿದರೆ ಸಂಸತ್ ನ ಸ್ಪೀಕರ್ ಅವರು ಲಂಕಾದ ಹಂಗಾಮಿ ಅಧ್ಯಕ್ಷರಾಗಿ ಗರಿಷ್ಠ 30 ದಿನಗಳ ಕಾಲ ಕಾರ್ಯನಿರ್ವಹಿಸಲು ಅವಕಾಶವಿದೆ. ಈ 30 ದಿನಗಳಲ್ಲಿ ಸಂಸತ್ ನ ಸದಸ್ಯರ ಪೈಕಿ ಒಬ್ಬರನ್ನು ಹೊಸ ಅಧ್ಯಕ್ಷರನ್ನಾಗಿ ಸಂಸತ್ ನೇಮಕ ಮಾಡಬೇಕಾಗುತ್ತದೆ. ಹೊಸ ಅಧ್ಯಕ್ಷರು ಈಗಿನ ಅಧ್ಯಕ್ಷರ ಉಳಿದ ಅವಧಿಗೆ (2 ವರ್ಷಗಳ ಅವಧಿಗೆ) ನೇಮಕಗೊಳ್ಳಲಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT