ಜಿಯೋ ಪೈಲಿ-ಶಾಜಿ ವರ್ಗೀಸ್ 
ವಿದೇಶ

ಕೆನಡಾದಲ್ಲಿ ಬೋಟ್ ದುರಂತ: ಕೇರಳದ ಇಬ್ಬರು ಸಾವು; ಓರ್ವ ನಾಪತ್ತೆ

ಕೆನಡಾದ ಕ್ಯಾನ್ಮೋರ್, ಕ್ಯಾಲ್ಗರಿದಲ್ಲಿ ನಡೆದ ದೋಣಿ ದುರಂತದಲ್ಲಿ ಭಾರತದ ಇಬ್ಬರು ಸಾವನ್ನಪ್ಪಿದ್ದು ಓರ್ವ ನಾಪತ್ತೆಯಾಗಿದ್ದಾರೆ.

ಕೆನಡಾ: ಕೆನಡಾದ ಕ್ಯಾನ್ಮೋರ್, ಕ್ಯಾಲ್ಗರಿದಲ್ಲಿ ನಡೆದ ದೋಣಿ ದುರಂತದಲ್ಲಿ ಭಾರತದ ಇಬ್ಬರು ಸಾವನ್ನಪ್ಪಿದ್ದು ಓರ್ವ ನಾಪತ್ತೆಯಾಗಿದ್ದಾರೆ.ಮೃತಪಟ್ಟ ಇಬ್ಬರು ಎರ್ನಾಕುಲಂ ಜಿಲ್ಲೆಯವರಾಗಿದ್ದು, ಅವರನ್ನು ಪೈಲಿ ಮತ್ತು ಜಾನ್ಸಿ ಅವರ ಪುತ್ರ ಜಿಯೋ ಪೈಲಿ (33) ಹಾಗೂ ಶಾಜಿ ವರ್ಗೀಸ್ ಮತ್ತು ಲಿಲ್ಲಿ ಅವರ ಪುತ್ರ ಕೆವಿನ್ ವರ್ಗೀಸ್ (21) ಎಂದು ಗುರುತಿಸಲಾಗಿದೆ. 

ಕೆನಡಾದಲ್ಲಿರುವ ಮಲಯಾಳಿ ಅಸೋಸಿಯೇಷನ್ ನ   ಸಾಮಾಜಿಕ ಜಾಲತಾಣದ ಪೋಸ್ಟ್ ನ ಪ್ರಕಾರ, ಲಿಯೊ ಮ್ಯಾಥ್ಯೂ (41) ಇನ್ನೂ ನಾಪತ್ತೆಯಾಗಿದ್ದು, ಶೋಧಕಾರ್ಯಾಚರಣೆ ಮುಂದುವರೆದಿದೆ. ಘಟನೆಯಲ್ಲಿ ತ್ರಿಶೂರ್ ಮೂಲದ ಜೀಜೋ ಜೋಸೆಫ್ ಅವರನ್ನು ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಪ್ರೇ ಲೇಕ್ ಜಲಾಶಯದಲ್ಲಿ ಈ ಅವಘಡ ಸಂಭವಿಸಿದ್ದು, ಅಲ್ಲಿನ ಸ್ಥಳೀಯ ಸಮಯದ ಪ್ರಕಾರ ಬೆಳಿಗ್ಗೆ 10:30 ರ ವೇಳೆಗೆ ನಡೆದಿದೆ.

ಜಿಯೋ ಅವರಿಗೆ ಸೇರಿದ ಬೋಟ್ ನಲ್ಲಿ ಎಲ್ಲಾ ನಾಲ್ಕೂ ಮಂದಿ ಮೀನು ಹಿಡಿಯುವುದಕ್ಕೆ ಹೋಗಿದ್ದರು. ದೋಣಿ ಆಕಸ್ಮಿಕವಾಗಿ ತಲೆಕೆಳಗಾಗಿ ಜಲಾಶಯದ ಶೀತಲೀಕರಣಗೊಂಡಿದ್ದ ನೀರಿಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಜಿಯೋ 7 ವರ್ಷಗಳಿಂದ ಕೆನಡಾದಲ್ಲೇ ಇದ್ದು, ಆಟೋಮೊಬೈಲ್ ವರ್ಕ್ ಶಾಪ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT