ಪ್ರಚಾರದಲ್ಲಿ ತೊಡಗಿರುವ ರಿಷಿ ಸುನಕ್ 
ವಿದೇಶ

ಪ್ರಧಾನಿ ಹುದ್ದೆಗೆ ಯಾರನ್ನು ಬೇಕಾದರೂ ಬೆಂಬಲಿಸಿ, ಆದರೆ ರಿಷಿ ಸುನಕ್ ಬೇಡ: ಬೆಂಬಲಿಗರಿಗೆ ಬೋರಿಸ್ ಜಾನ್ಸನ್

ಬ್ರಿಟನ್ ಪ್ರಧಾನಿ ಹುದ್ದೆಗೆ ಪೈಪೋಟಿ ಇನ್ನೂ ತೀವ್ರಗೊಳ್ಳುತ್ತಿದ್ದು, ಯಾರನ್ನು ಬೇಕಾದರೂ ಬೆಂಬಲಿಸಿ ಆದರೆ ರಿಷಿ ಸುನಕ್ ನ್ನು ಬೇಡ ಎಂದು ಬ್ರಿಟನ್ ನ ಹಂಗಾಮಿ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಬೆಂಬಲಿಗರಿಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಲಂಡನ್: ಬ್ರಿಟನ್ ಪ್ರಧಾನಿ ಹುದ್ದೆಗೆ ಪೈಪೋಟಿ ಇನ್ನೂ ತೀವ್ರಗೊಳ್ಳುತ್ತಿದ್ದು, ಯಾರನ್ನು ಬೇಕಾದರೂ ಬೆಂಬಲಿಸಿ ಆದರೆ ರಿಷಿ ಸುನಕ್ ನ್ನು ಬೇಡ ಎಂದು ಬ್ರಿಟನ್ ನ ಹಂಗಾಮಿ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಬೆಂಬಲಿಗರಿಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಜಾನ್ಸನ್ ಅವರಿಗೆ ತಮ್ಮ ಪಕ್ಷದ ಸದಸ್ಯರಿಂದಲೇ ಬೆಂಬಲ ಕಳೆದುಕೊಳ್ಳುವುದಕ್ಕೆ ಕಾರಣ ಎಂದು ರಿಷಿ ಸುನಕ್ ಅವರನ್ನು ದೂಷಿಸಲಾಗುತ್ತಿದ್ದು, ರಿಷಿ ಬ್ರಿಟನ್ ಪ್ರಧಾನಿಯಾಗಬಾರದೆಂದು ಬೋರಿಸ್ ಜಾನ್ಸನ್ ತಮ್ಮ ಬೆಂಬಲಿಗರಲ್ಲಿ ಹೇಳಿದ್ದಾರೆ ಎಂದು ಟೈಮ್ಸ್ ವರದಿ ಪ್ರಕಟಿಸಿದೆ.

ಯಾವುದೇ ಅಭ್ಯರ್ಥಿಗಳನ್ನೂ ಬೆಂಬಲಿಸುವುದಿಲ್ಲ ಅಥವಾ ಚುನಾವಣೆಯಲ್ಲಿ ಸಾರ್ವಜನಿಕವಾಗಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದ ಜಾನ್ಸನ್ ಈಗ ಸೋತಿರುವ ಅಭ್ಯರ್ಥಿಗಳ ಬಳಿ ರಿಷಿ ಬ್ರಿಟನ್ ಪ್ರಧಾನಿಯಾಗಬಾರದು ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.

ಪ್ರಧಾನಿ ಹುದ್ದೆಗೆ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಅವರು ನೇಮಕವಾಗಬೇಕೆಂಬುದು ಬೋರಿಸ್ ಅಭಿಪ್ರಾಯವಾಗಿದೆ.

ಜೂನಿಯರ್ ಟ್ರೇಡ್ ಸಚಿವ ಪೆನ್ನಿ ಮೊರ್ಡಾಂಟ್ ಪ್ರಧಾನಿ  ಆದರೂ ಸರಿಯೇ ಅದರೆ ಸುನಕ್ ಮಾತ್ರ ತಮ್ಮ ಉತ್ತರಾಧಿಕಾರಿಯಾಗಬಾರದು ಎಂದು ಜಾನ್ಸನ್ ಬಲವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದು ಇಡೀ ನಂ.10 (ಡೌನಿಂಗ್ ಸ್ಟ್ರೀಟ್) ರಿಷಿ ಅವರನ್ನು ಇಷ್ಟಪಡುವುದಿಲ್ಲ. ಬೋರಿಸ್ ಕೆಳಗಿಳಿಯುವುದಕ್ಕೆ ಸಾಜ್ (ಸಾಜಿದ್ ಜಾವೆದ್) ಅವರನ್ನು ದೂಷಿಸುವುದಿಲ್ಲ. ಆಡರೆ ರಿಷಿ ಅವರನ್ನು ದೂಷಿಸುತ್ತಾರೆ. ಅವರ ಪ್ರಕಾರ ರಿಷಿ ಇದಕ್ಕಾಗಿ ಕೆಲವು ತಿಂಗಳುಗಳಿಂದ ಯೋಜನೆ ರೂಪಿಸುತ್ತಿದ್ದರಂತೆ ಎಂದು ಮೂಲಗಳು ಬೋರಿಸ್ ಮನದಾಳಾದ ಮಾತುಗಳನ್ನು ಉಲ್ಲೇಖಿಸಿರುವುದನ್ನು ಟೈಮ್ಸ್ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT