ಶ್ರೀಲಂಕಾ ಪ್ರಧಾನಿ ರನೀಲ್ ವಿಕ್ರಮ ಸಿಂಘೆ 
ವಿದೇಶ

ಶ್ರೀಲಂಕಾ ನೂತನ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ಆಯ್ಕೆ

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಆಯ್ಕೆಯಾಗಿದ್ದಾರೆ.

ಕೊಲಂಬೊ: ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಆಯ್ಕೆಯಾಗಿದ್ದಾರೆ.

ಬುಧವಾರ ಶ್ರೀಲಂಕಾ ಸಂಸತ್ತಿನಲ್ಲಿ ನಡೆದ ಚುನಾವಣೆಯಲ್ಲಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.

73 ವರ್ಷದ ಮತ್ತು ಆರು ಬಾರಿ ಪ್ರಧಾನಿಯಾಗಿದ್ದ ವಿಕ್ರಮ ಸಿಂಘೆ ಅವರು 225 ಸದಸ್ಯರ ಶ್ರೀಲಂಕಾ ಸಂಸತ್ ನಲ್ಲಿ 134 ಮತಗಳನ್ನು ಪಡೆದು ಜಯಶಾಲಿಯಾಗಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಮತ್ತು ಭಿನ್ನಮತೀಯ ಆಡಳಿತ ಪಕ್ಷದ ನಾಯಕ ಡಲ್ಲಾಸ್ ಅಲಹಪ್ಪೆರುಮಾ ಅವರು 82 ಮತಗಳನ್ನು ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಎಡಪಕ್ಷ ಜನತಾ ವಿಮುಕ್ತಿ ಪೆರಮುನ (ಜೆವಿಪಿ) ನಾಯಕ ಅನುರ ಕುಮಾರ ಡಿಸ್ಸಾನಾಯಕ ಕೇವಲ ಮೂರು ಮತಗಳನ್ನು ಪಡೆದರು. ನವೆಂಬರ್ 2024 ರಲ್ಲಿ ಕೊನೆಗೊಳ್ಳುವ ರಾಜಪಕ್ಸೆ ಅವರ ಉಳಿದ ಅವಧಿಯನ್ನು ಪೂರೈಸಲು ಹೊಸ ಅಧ್ಯಕ್ಷರು ಜನಾದೇಶವನ್ನು ಹೊಂದಿರುತ್ತಾರೆ.

ಇದಕ್ಕೂ ಮೊದಲು, ಅಭೂತಪೂರ್ವ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನಿಂದ ದ್ವೀಪ ರಾಷ್ಟ್ರದಲ್ಲಿ ಉಂಟಾದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯ ನಡುವೆ ರಹಸ್ಯ ಮತದಾನ ನಡೆಯಿತು. ಈ ನಿರ್ಣಾಯಕ ಚುನಾವಣೆಯಲ್ಲಿ 223 ಶಾಸಕರು ಮತ ಚಲಾಯಿಸಿದರೆ ಇಬ್ಬರು ಸಂಸದರು ಗೈರಾಗಿದ್ದರು. ನಾಲ್ಕು ಮತಗಳು ತಿರಸ್ಕೃತಗೊಂಡಿದ್ದು, ಒಟ್ಟು 219 ಮತಗಳು ಮಾತ್ರ ಮಾನ್ಯವಾಗಿದ್ದವು. 44 ವರ್ಷಗಳಲ್ಲಿ ಶ್ರೀಲಂಕಾ ಸಂಸತ್ತು ನೇರವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡುತ್ತಿರುವುದು ಇದೇ ಮೊದಲು.

1982, 1988, 1994, 1999, 2005, 2010, 2015 ಮತ್ತು 2019 ರ ಅಧ್ಯಕ್ಷೀಯ ಚುನಾವಣೆಗಳು ಜನಪ್ರಿಯ ಮತದಿಂದ ಅವರನ್ನು ಆಯ್ಕೆ ಮಾಡಲಾಗಿತ್ತು. 1993 ರಲ್ಲಿ ಅಧ್ಯಕ್ಷ ರಣಸಿಂಗೆ ಪ್ರೇಮದಾಸ ಹತ್ಯೆಯಾದಾಗ ಅಧ್ಯಕ್ಷ ಸ್ಥಾನವು ಮಧ್ಯಾವಧಿ ಖಾಲಿಯಾದ ಏಕೈಕ ಸಂದರ್ಭವಾಗಿತ್ತು. ಪ್ರೇಮದಾಸ ಅವರ ಅವಧಿಯ ಬಾಕಿ ಅವಧಿಯನ್ನು ಚಲಾಯಿಸಲು ಡಿ.ಬಿ.ವಿಜೇತುಂಗ ಅವರನ್ನು ಸಂಸತ್ತು ಸರ್ವಾನುಮತದಿಂದ ಅನುಮೋದಿಸಿತ್ತು. 

ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಗಿದ್ದ ರಾಜಪಕ್ಸೆ ಆಡಳಿತ
ಇನ್ನು ಹೈ-ವೋಲ್ಟೇಜ್ ರಾಜಕೀಯ ನಾಟಕಕ್ಕೆ ವೇದಿಕೆಯಾಗಿದ್ದ ಲಂಕಾ ರಾಜಧಾನಿ ಕೊಲಂಬೋ ವ್ಯಾಪಕ ಹಿಂಸಾಚಾರ ಕಂಡಿತ್ತು. ಜನರ ಪ್ರತಿಭಟನೆಗೆ ಹೆದರಿ ಹಿಂದಿನ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ದೇಶದಿಂದ ಪಲಾಯನ ಮಾಡಿದ್ದರು. ಆರ್ಥಿಕತೆಯನ್ನು ತಪ್ಪಾಗಿ ನಿರ್ವಹಿಸುತ್ತಿದ್ದಾರೆಂದು ಅವರ ಸರ್ಕಾರದ ವಿರುದ್ಧ ಜನ ದಂಗೆ ಎದ್ದ ಬಳಿಕ ಅವರು ರಾಜೀನಾಮೆ ನೀಡಿದ್ದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT