ಪಾಕ್ ವಿದೇಶಾಂಗ ಸಚಿವ ಬಿಲಾವಲ್ 
ವಿದೇಶ

ಎಸ್ ಸಿಒ ಸಭೆ: 2019 ರ ನಂತರ ಭಾರತದೊಂದಿಗೆ ರಚನಾತ್ಮಕ ಮಾತುಕತೆ ಕಷ್ಟವಾಗಿದೆ:  ಪಾಕ್ ವಿದೇಶಾಂಗ ಸಚಿವ ಬಿಲಾವಲ್

2019ರ ನಂತರ ಭಾರತದ ಜೊತೆಗೆ ರಚನಾತ್ಮಕ ಮಾತುಕತೆ ಕಷ್ಟಕರವಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಇಸ್ಲಾಮಾಬಾದ್: 2019ರ ನಂತರ ಭಾರತದ ಜೊತೆಗೆ ರಚನಾತ್ಮಕ ಮಾತುಕತೆ ಕಷ್ಟಕರವಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ತಾಷ್ಕೆಂಟ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಘದ(ಎಸ್ ಸಿಒ) ವಿದೇಶಾಂಗ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ಉಭಯ ರಾಷ್ಟ್ರಗಳು ಸಂಘಟನೆಯ ಉದ್ದೇಶದ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ ಎಂದರು. ಭಾರತ ನಮ್ಮ ನೆರೆಯ ರಾಷ್ಟ್ರವಾಗಿದ್ದು, ನಾವು ಅವರೊಂದಿಗೆ ಬದುಕಲು ಒಗ್ಗಿಕೊಳ್ಳಬೇಕು ಎಂದಿದ್ದಾರೆ.

ಭಾರತ ಸರ್ಕಾರ ಜಮ್ಮು-ಕಾಶ್ನೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಹಿಂಪಡೆದು ಕೇಂದ್ರಾಡಳಿತ ಪ್ರದೇಶವಾಗಿ ಪರಿವರ್ತಿಸಿದ್ದನ್ನು ಉಲ್ಲೇಖಿಸಿದ ಬಿಲಾವಲ್, 2019ರ ನಂತರ ರಚನಾತ್ಮಕ ಮಾತುಕತೆ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.

ಭಯೋತ್ಪಾದನೆ, ಹಗೆತನ ಮತ್ತು ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಇಸ್ಲಾಮಾಬಾದ್‌ನೊಂದಿಗೆ ಸಾಮಾನ್ಯ ನೆರೆಯ ಸಂಬಂಧಗಳನ್ನು ಬಯಸುವುದಾಗಿ ಭಾರತವು ಪಾಕಿಸ್ತಾನಕ್ಕೆ ಪದೇ ಪದೇ ಹೇಳುತ್ತಿದೆ. ಭಯೋತ್ಪಾದನೆ ಮತ್ತು ಹಗೆತನ ಮುಕ್ತ ವಾತಾವರಣ ನಿರ್ಮಿಸುವ ಜವಾಬ್ದಾರಿ ಪಾಕಿಸ್ತಾನದ ಮೇಲಿದೆ ಎಂದು ಭಾರತ ಹೇಳಿದೆ.

ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಮತ್ತು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಶಾಂಘೈ ಸಹಕಾರ ಸಭೆಯಲ್ಲಿ ಪಾಲ್ಗೊಂಡರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಯೋತ್ಪಾದನೆ ಬಗ್ಗೆ ಭಾರತ ಯಾವುದೇ ದ್ವಿಮುಖ ನೀತಿಯನ್ನು ಹೊಂದಿಲ್ಲ, ರಾಜಿಯ ಪ್ರಶ್ನೆಯೇ ಇಲ್ಲ: ಪ್ರಧಾನಿ ಮೋದಿ-Video

ಟಿ20 ವಿಶ್ವಕಪ್ ಇತಿಹಾಸದಲ್ಲೇ ಭಾರತದ ವಿರುದ್ಧ ಹೀನಾಯ ದಾಖಲೆ ಬರೆದ ಸೌರಭ್ ನೇತ್ರವಲ್ಕರ್

'Mr CM, ನಾಟಕ ನಿಲ್ಲಿಸಿ': ಸಂಸದ ತೇಜಸ್ವೀ ಸೂರ್ಯ

ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬರಲೇ ಇಲ್ಲ! ಮೋಹನ್ ಭಾಗವತ್ ಅಚ್ಚರಿಯ ಹೇಳಿಕೆ

ಆಪ್ತ ಮಿತ್ರನಿಗೆ ಕೈ ಕೊಟ್ಟ ಭಾರತ?; ಅಮೆರಿಕಾ ಹೇಳಿದ್ದೇ ನಿಜವಾಯ್ತಾ?

SCROLL FOR NEXT