ಕುವೈತ್‍ 
ವಿದೇಶ

ಪ್ರವಾದಿ ಕುರಿತ ಹೇಳಿಕೆಗೆ ಪ್ರತಿಭಟಿಸಿದ್ದ ವಲಸಿಗರನ್ನು ಗಡಿಪಾರು ಮಾಡಲಿರುವ ಕುವೈತ್ 

ಕುವೈತ್ ತನ್ನ ದೇಶದಲ್ಲಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟಿಸಿದ್ದ ವಲಸಿಗರನ್ನು ಗಡಿಪಾರು ಮಾಡಲು ಮುಂದಾಗಿದೆ. 

ಭಾರತದ ರಾಜಕಾರಣಿ ನೂಪುರ್ ಶರ್ಮಾ ಪ್ರವಾದಿ ಮೊಹಮದ್ ಕುರಿತು ನೀಡಿದ್ದ ಹೇಳಿಕೆಯನ್ನು ಪ್ರತಿಭಟಿಸಿದ್ದ ರಾಷ್ಟ್ರಗಳ ಪೈಕಿ ಕುವೈತ್ ಕೂಡ ಒಂದಾಗಿತ್ತು. ಈಗ ಅದೇ ಕುವೈತ್ ತನ್ನ ದೇಶದಲ್ಲಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟಿಸಿದ್ದ ವಲಸಿಗರನ್ನು ಗಡಿಪಾರು ಮಾಡಲು ಮುಂದಾಗಿದೆ. 

ಗಲ್ಫ್ ರಾಷ್ಟ್ರಗಳಲ್ಲಿ ಇಂತಹ ಪ್ರತಿಭಟನೆಗಳಿಗೆ ಅವಕಾಶವಿಲ್ಲದ ಹಿನ್ನೆಲೆಯಲ್ಲಿ ಕುವೈತ್ ಈ ನಿರ್ಧಾರ ಕೈಗೊಂಡಿದೆ. 

ಶುಕ್ರವಾರದ ಪ್ರಾರ್ಥನೆಯ ಬಳಿಕ ಪ್ರವಾದಿ ಮೊಹಮ್ಮದ್ ಪರ ಪ್ರತಿಭಟನೆ ನಡೆಸಿದ ವಲಸಿಗರನ್ನು ಬಂಧಿಸಿ ಗಡಿಪಾರು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು ಅವರ ದೇಶಗಳಿಗೆ ಗಡಿಪಾರು ಮಾಡಲಾಗುತ್ತದೆ.  

ಸೌದಿ ಅರೇಬಿಯಾ ಪತ್ರಿಕೆಯಲ್ಲಿ ಪ್ರಕಟವಾದ ವರದಿಯ ಪ್ರಕಾರ ಗಲ್ಫ್ ರಾಷ್ಟ್ರಗಳಲ್ಲಿ ವಲಸಿಗರಿಗೆ ಪ್ರತಿಭಟನೆ ನಡೆಸುವ ಅವಕಾಶವಿಲ್ಲ. ಈ ರೀತಿ ಪ್ರತಿಭಟನೆ ಮಾಡಿದವರನ್ನು ಗಡಿಪಾರು ಮಾಡಲಾಗುತ್ತದೆ ಹಾಗೂ ಮತ್ತೆ ಕುವೈತ್ ಗೆ ಬರುವುದಕ್ಕೆ ಅವಕಾಶವಿರುವುದಿಲ್ಲ.

ಪ್ರತಿಭಟನೆಯಲ್ಲಿ ಯಾವೆಲ್ಲಾ ರಾಷ್ಟ್ರದ ಮಂದಿ ಭಾಗಿಯಾಗಿದ್ದರು ಎಂಬ ಬಗ್ಗೆ ಮಾಹಿತಿ ಇಲ್ಲ. 

ಕುವೈತ್ ನಲ್ಲಿ ವಲಸೆ ಹೋಗಿರುವ ಭಾರತೀಯರ ಸಂಖ್ಯೆ 2019 ರಲ್ಲೇ 10 ಲಕ್ಷ ದಾಟಿತ್ತು. ಈ ದೇಶದಲ್ಲಿ ಭಾರತೀಯರ ಸಂಖ್ಯೆ ವಾರ್ಷಿಕ ಶೇ.5-6 ರಷ್ಟು ಏರಿಕೆಯಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT