ಗುರುದ್ವಾರದ ಮೇಲೆ ದಾಳಿ 
ವಿದೇಶ

ಕಾಬೂಲ್ ನಲ್ಲಿ ಗುರುದ್ವಾರದ ಮೇಲೆ ದಾಳಿ: ಇಬ್ಬರು ಭಕ್ತಾದಿಗಳ ಸಾವು

ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಗುರುದ್ವಾರದ ಮೇಲೆ ದಾಳಿ ನಡೆದಿದ್ದು, ಸ್ಫೋಟ, ಗುಂಡಿನ ದಾಳಿಯಲ್ಲಿ ಇಬ್ಬರು ಭಕ್ತಾದಿಗಳು ಸಾವನ್ನಪ್ಪಿದ್ದರೆ, 7 ಮಂದಿಗೆ ಗಾಯಗಳಾಗಿವೆ ಎಂದು ತಾಲೀಬಾನ್ ಅಧಿಕಾರಿಗಳು ಹೇಳಿದ್ದಾರೆ.

ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಗುರುದ್ವಾರದ ಮೇಲೆ ದಾಳಿ ನಡೆದಿದ್ದು, ಸ್ಫೋಟ, ಗುಂಡಿನ ದಾಳಿಯಲ್ಲಿ ಇಬ್ಬರು ಭಕ್ತಾದಿಗಳು ಸಾವನ್ನಪ್ಪಿದ್ದರೆ, 7 ಮಂದಿಗೆ ಗಾಯಗಳಾಗಿವೆ ಎಂದು ತಾಲೀಬಾನ್ ಅಧಿಕಾರಿಗಳು ಹೇಳಿದ್ದಾರೆ.

ಸಿಖ್ ಭಕ್ತಾದಿ ಹಾಗೂ ತಾಲೀಬಾನ್ ನ ಭದ್ರತಾ ಪಡೆಯ ಅಧಿಕಾರಿ ದಾಳಿಯಲ್ಲಿ ಮೃತಪಟ್ಟಿದ್ದು, ತಕ್ಷಣಕ್ಕೆ ಯಾವುದೇ ಸಂಘಟನೆಗಳು ಹೊಣೆ ಹೊತ್ತುಕೊಂಡಿಲ್ಲ. 

ಗುರುದ್ವಾರದ ಮೇಲೆ ಗನ್ ಮ್ಯಾನ್ ದಾಳಿ ನಡೆಸಿದ್ದು, ತಾಲಿಬಾನ್ ಫೈಟರ್ ಗಳು ಹಾಗೂ ಕಾಬೂಲ್ ನಲ್ಲಿನ ದಾಳಿಕೋರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಆಂತರಿಕ ಸಚಿವಾಲಯದ ವಕ್ತಾರರಾಗಿರುವ ತಾಲಿಬಾನ್ ನೇಮಿತ ವ್ಯಕ್ತಿ ಅಬ್ದುಲ್ ನಫಿ ಟಾಕೋರ್ ಹೇಳಿದ್ದಾರೆ. 

ಗುರುದ್ವಾರದ ಹೊರ ಭಾಗದಲ್ಲಿ ಸ್ಫೋಟಕಗಳನ್ನು ತುಂಬಿದ್ದ ವಾಹನವನ್ನು ಸ್ಫೋಟಿಸಲಾಯಿತು. ಆ ಘಟನೆಯಲ್ಲಿ ಯಾವುದೇ ಸಾವು ಸಂಭವಿಸಲಿಲ್ಲ. ಮೊದಲು ಗನ್ ಮ್ಯಾನ್ ಹ್ಯಾಂಡ್ ಗ್ರೆನೇಡ್ ನ್ನು ಗೇಟ್ ಬಳಿ ಎಸೆದ ಇದರಿಂದ ಬೆಂಕಿ ಹೊತ್ತಿಕೊಂಡಿತು ಎಂದು ತಾಲೀಬಾನ್ ವಕ್ತಾರರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ವೈರಲ್ ಆಗತೊಡಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT