ಸಾಂದರ್ಭಿಕ ಚಿತ್ರ 
ವಿದೇಶ

ಆಸ್ಪತ್ರೆ ಸಿಬ್ಬಂದಿ ಎಡವಟ್ಟು: ನವಜಾತ ಶಿಶುವಿನ ತಲೆಯನ್ನು ತಾಯಿಯ ಗರ್ಭದಲ್ಲಿಯೇ ಬಿಟ್ಟ ವೈದ್ಯಕೀಯ ಸಿಬ್ಬಂದಿ!

ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರವು ವೈದ್ಯಕೀಯ ನಿರ್ಲಕ್ಷ್ಯದ ಘಟನೆಗೆ ಸಾಕ್ಷಿಯಾಗಿದ್ದು, ಇಲ್ಲಿನ ಸಿಬ್ಬಂದಿಯೊಬ್ಬರು ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದೊಳಗೆ ಬಿಟ್ಟಿರುವ ಆತಂಕದ ಘಟನೆ ನಡೆದಿದೆ.

ಸಿಂಧ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರವು ವೈದ್ಯಕೀಯ ನಿರ್ಲಕ್ಷ್ಯದ ಘಟನೆಗೆ ಸಾಕ್ಷಿಯಾಗಿದ್ದು, ಇಲ್ಲಿನ ಸಿಬ್ಬಂದಿಯೊಬ್ಬರು ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದೊಳಗೆ ಬಿಟ್ಟಿರುವ ಆತಂಕದ ಘಟನೆ ನಡೆದಿದೆ.

ತಾರ್ಪಾರ್ಕರ್ ಜಿಲ್ಲೆಯ ಗ್ರಾಮದ ಭೀಲ್ ಹಿಂದೂ ಮಹಿಳೆ, ಮೊದಲು ತನ್ನ ಪ್ರದೇಶದಲ್ಲಿನ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಹೋಗಿದ್ದರು. ಆದರೆ ಮಹಿಳಾ ಸ್ತ್ರೀರೋಗತಜ್ಞರು ಲಭ್ಯವಿರಲಿಲ್ಲ. ಆದ ಕಾರಣ ಯಾವುದೇ ಅನುಭವವಿಲ್ಲದ ಆರ್‌ಎಚ್‌ಸಿ ಸಿಬ್ಬಂದಿ ಶಸ್ತ್ರಚಿಕಿತ್ಸೆ ನಡೆಸಿ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ  ತಾಯಿಯ ಗರ್ಭದೊಳಗೆ ಬಿಟ್ಟಿದ್ದಾರೆ.

ಮಹಿಳೆಗೆ ಪ್ರಾಣಾಪಾಯ ಎದುರಾದಾಗ, ಆಕೆಗೆ ಚಿಕಿತ್ಸೆ ನೀಡಲು ಯಾವುದೇ ಸೌಲಭ್ಯಗಳಿಲ್ಲದ ಮಿಥಿಯ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಅಂತಿಮವಾಗಿ, ಆಕೆಯ ಕುಟುಂಬವು ಅವಳನ್ನು ಯೂನಿವರ್ಸಿಟಿ ಆಫ್ ಮೆಡಿಕಲ್ ಅಂಡ್ ಹೆಲ್ತ್ ಸೈನ್ಸಸ್ ಗೆ ಕರೆತಂದಾಗ  ಘಟನೆ ಬೆಳಕಿಗೆ ಬಂದಿದೆ.

ನಂತರ ಪರೀಕ್ಷಿಸಿ ನವಜಾತ ಶಿಶುವಿನ ಉಳಿದ ದೇಹವನ್ನು ತಾಯಿಯ ಗರ್ಭದಿಂದ ಹೊರತೆಗೆದು ಅವಳ ಜೀವವನ್ನು ಉಳಿಸಿತು ಎಂದು ಜಮ್ಶೊರೊದಲ್ಲಿರುವ ಲಿಯಾಕತ್ ಯೂನಿವರ್ಸಿಟಿ ಆಫ್ ಮೆಡಿಕಲ್ ಅಂಡ್ ಹೆಲ್ತ್ ಸೈನ್ಸಸ್ ನ ಸ್ತ್ರೀರೋಗ ಶಾಸ್ತ್ರ ಘಟಕದ ಮುಖ್ಯಸ್ಥ ರಾಹೀಲ್ ಸಿಕಂದರ್ ತಿಳಿಸಿದ್ದಾರೆ.

ಮಗುವಿನ ತಲೆ ಒಳಗೆ ಸಿಕ್ಕಿಹಾಕಿಕೊಂಡಿತ್ತು. ತಾಯಿಯ ಗರ್ಭಾಶಯವು ಛಿದ್ರವಾಗಿತ್ತು ಮತ್ತು ಆಕೆಯ ಜೀವವನ್ನು ಉಳಿಸಲು ಶಸ್ತ್ರಚಿಕಿತ್ಸೆ ನಡೆಸಿ ತಲೆಯನ್ನು ಹೊರತೆಗೆದು, ತಾಯಿ ಜೀವವನ್ನು ಉಳಿಸಲಾಯಿತು ಎಂದು ಸಿಕಂದರ್ ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!