ಯೋಗ ದಿನಾಚರಣೆ ವೇಳೆ ಪ್ರತಿಭಟನಾಕಾರರಿಂದ ದಾಳಿ 
ವಿದೇಶ

ಮಾಲ್ಡೀವ್ಸ್ ನ ಭಾರತೀಯ ರಾಯಭಾರ ಕಚೇರಿಯಲ್ಲಿ ಯೋಗ ದಿನಾಚರಣೆ ವೇಳೆ ಪ್ರತಿಭಟನಾಕಾರರಿಂದ ಅಡ್ಡಿ

ಮಾಲ್ಡೀವ್ಸ್ ನ ಮಾಲೆಯಲ್ಲಿ ಭಾರತೀಯ ರಾಯಭಾರ ಕಚೇರಿ ಆಯೋಜಿಸಿದ್ದ ಯೋಗ ಕಾರ್ಯಕ್ರಮಕ್ಕೆ ಪ್ರತಿಭಟನಾಕಾರರ ಗುಂಪೊಂದು ಅಡ್ಡಿಪಡಿಸಿರುವ ಘಟನೆ ವರದಿಯಾಗಿದೆ.

ಮಾಲೆ: ಮಾಲ್ಡೀವ್ಸ್ ನ ಮಾಲೆಯಲ್ಲಿ ಭಾರತೀಯ ರಾಯಭಾರ ಕಚೇರಿ ಆಯೋಜಿಸಿದ್ದ ಯೋಗ ಕಾರ್ಯಕ್ರಮಕ್ಕೆ ಪ್ರತಿಭಟನಾಕಾರರ ಗುಂಪೊಂದು ಅಡ್ಡಿಪಡಿಸಿರುವ ಘಟನೆ ವರದಿಯಾಗಿದೆ. ಮಂಗಳವಾರ ಬೆಳಗ್ಗೆ ರಾಜಧಾನಿ ಮಾಲೆಯಲ್ಲಿ ಭಾರತೀಯ ಹೈಕಮಿಷನ್ ನಲ್ಲಿ ಯೋಗ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಜನರ ಗುಂಪನ್ನು ನಿಯಂತ್ರಿಸಲು ಮಾಲ್ಡೀವ್ಸ್  ಪೊಲೀಸರು ಅಶ್ರುವಾಯು ಮತ್ತು ಪೆಪ್ಪರ್ ಸ್ಪ್ರೇ ಬಳಸಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸುವ ಕಾರ್ಯಕ್ರಮದಲ್ಲಿ ರಾಜತಾಂತ್ರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಸೇರಿದಂತೆ 150 ಕ್ಕೂ ಹೆಚ್ಚು ಜನರು ಭಾಗವಹಿಸುತ್ತಿದ್ದ ಕ್ರೀಡಾಂಗಣಕ್ಕೆ ನುಗ್ಗಿದ ಕೆಲವರು ಯೋಗ ಮಾಡಲು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಯೋಗದಲ್ಲಿ ಭಾಗವಹಿಸಿದ್ದವರ ಮೇಲೆ ದಾಳಿ ಮಾಡಿ, ಆಸ್ತಿಯನ್ನು ಧ್ವಂಸಗೊಳಿಸಿದರು ಎಂದು ಆಯೋಜಕರು ತಿಳಿಸಿದ್ದಾರೆ.

ದಾಳಿಗೂ ಮುನ್ನ ಪ್ರತಿಭಟನಾಕಾರರು ಯೋಗ, ಇಸ್ಲಾಂ ತತ್ವಕ್ಕೆ ವಿರುದ್ಧವಾಗಿದೆ ಎಂಬ ಫಲಕಗಳನ್ನು ಹಿಡಿದು ವಿರೋಧಿಸಿದ್ದರು ಎಂದು ವರದಿಯಾಗಿದೆ. ಇಸ್ಲಾಂ ಮಾಲ್ಡೀವ್ಸ್ ನಲ್ಲಿ ರಾಜ್ಯ ಧರ್ಮವಾಗಿದೆ. ಸುಮಾರು ಅರ್ಧ ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಮಾಲ್ಡೀವ್ಸ್ ಹಿಂದೂ ಮಹಾಸಾಗರದಲ್ಲಿನ ದ್ವೀಪ ರಾಷ್ಟ್ರವಾಗಿದೆ.

ಗಲಭೆಗೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಘಟನೆಯ ಕುರಿತು ಪೊಲೀಸ್ ತನಿಖೆ ಆರಂಭವಾಗಿದೆ ಎಂದು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರು ಹೇಳಿದ್ದಾರೆ.

ಪ್ರಕರಣವನ್ನ ಗಂಭೀರ ವಿಷಯವಾಗಿ ಪರಿಗಣಿಸಲಾಗುತ್ತಿದೆ ಮತ್ತು ಹೊಣೆಗಾರರನ್ನು ಶೀಘ್ರವಾಗಿ ಕಾನೂನಿನ ಮುಂದೆ ತರಲಾಗುವುದು ಎಂದು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್  ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT