ಪಾನಿ ಪುರಿ (ಸಂಗ್ರಹ ಚಿತ್ರ) 
ವಿದೇಶ

ಕಠ್ಮಂಡು ಕಣಿವೆಯಲ್ಲಿ ಪಾನಿ ಪುರಿ ಮಾರಾಟ ನಿರ್ಬಂಧ: ಕಾರಣ ಏನು ಗೊತ್ತೇ?

ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಪಾನಿಪುರಿ ಮಾರಾಟವನ್ನು ನಿರ್ಬಂಧಿಸಲಾಗಿದೆ. 

ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಪಾನಿಪುರಿ ಮಾರಾಟವನ್ನು ನಿರ್ಬಂಧಿಸಲಾಗಿದೆ. 

ಕಣಿವೆಯ ಲಲಿತ್ ಪುರ್ ಮೆಟ್ರೋಪಾಲಿಟನ್ ಸಿಟಿಯಲ್ಲಿ ಕಾಲರಾ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.  ಈ ವರೆಗೂ ಈ ಪ್ರದೇಶದಲ್ಲಿ 12 ಮಂದಿಗೆ ಕಾಲರಾ ದೃಢಪಟ್ಟಿದೆ. 

ಪಾನಿಪುರಿ ತಯಾರಿಸುತ್ತಿದ್ದ ನೀರಿನಲ್ಲಿ ಕಾಲರಾ ಬ್ಯಾಕ್ಟೀರಿಯಾಗಳು ಪತ್ತೆಯಾದ ಹಿನ್ನೆಲೆಯಲ್ಲಿ ಲಲಿತ್ ಪುರ್ ಮೆಟ್ರೋಪಾಲಿಟನ್ ಸಿಟಿ (ಎಲ್ಎಂಸಿ) ಪಾನಿಪುರಿ ಮಾರಾಟವನ್ನು ನಿರ್ಬಂಧಿಸುವಂತೆ ಸೂಚನೆ ನೀಡಿದೆ.

ಕಾರಿಡಾರ್ ಪ್ರದೇಶಗಳಲ್ಲಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಪಾನಿಪುರಿ ನಿರ್ಬಂಧಕ್ಕೆ ತಯಾರಿ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಮುಖ್ಯಸ್ಥ ಸೀತಾರಾಮ್ ಹಚೇತು ಹೇಳಿದ್ದಾರೆ. 

ಕಾಲರ ಹೆಚ್ಚು ಹರಡುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಅಲ್ಲಿನ ಆರೋಗ್ಯ ಸಚಿವಾಲಯ ಜನತೆಗೆ ಮನವಿ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT