ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 
ವಿದೇಶ

ಭಾರತ ಪ್ರತಿಭಾವಂತರ ಸಂಪದ್ಭರಿತ ರಾಷ್ಟ್ರ: ರಷ್ಯಾ ಅಧ್ಯಕ್ಷ ಪುಟಿನ್ ಮೆಚ್ಚುಗೆಯ ಸುರಿಮಳೆ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶುಕ್ರವಾರ ಭಾರತ ಪ್ರತಿಭಾವಂತರ ಸಂಪದ್ಬರಿತ ರಾಷ್ಟ್ರ ಎಂದು ಕರೆಯುವ ಮೂಲಕ ಮೆಚ್ಚುಗೆಯ ಸುರಿಮಳೆಗರೆದಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ಭಾರತವು ಅತ್ಯುತ್ತಮ ಹಂತ ತಲುಪುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅವರು ಹೇಳಿದ್ದಾರೆ.

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶುಕ್ರವಾರ ಭಾರತ ಪ್ರತಿಭಾವಂತರ ಸಂಪದ್ಬರಿತ ರಾಷ್ಟ್ರ ಎಂದು ಕರೆಯುವ ಮೂಲಕ ಮೆಚ್ಚುಗೆಯ ಸುರಿಮಳೆಗರೆದಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ಭಾರತವು ಅತ್ಯುತ್ತಮ ಹಂತ ತಲುಪುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅವರು ಹೇಳಿದ್ದಾರೆ.

ರಷ್ಯಾ ಏಕತಾ ದಿನಾಚರಣೆ ಅಂಗವಾಗಿ  ಮಾತನಾಡಿದ ರಷ್ಯಾ ಅಧ್ಯಕ್ಷರು, ಭಾರತ ಹೆಚ್ಚು ಸಾಮರ್ಥ್ಯ ಹೊಂದಿರುವ ರಾಷ್ಟ್ರವಾಗಿರುವುದಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತ ತನ್ನ ಅಭಿವೃದ್ಧಿಯ ವಿಷಯದಲ್ಲಿ ಉನ್ನತ ಮಟ್ಟ ತಲುಪಲಿದೆ. ಸುಮಾರು ಒಂದೂವರೆ ಶತಕೋಟಿ ಜನರಿರುವ ಭಾರತ, ಈಗ ಸಮರ್ಥ ರಾಷ್ಟ್ರವಾಗಿದೆ ಎಂದು ಅವರು ಭಾಷಣದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ರಷ್ಯಾದಿಂದ ನಿರ್ಣಯ, ಮತದಾನದಿಂದ ದೂರ ಉಳಿದ ಭಾರತ
 
ಆಫ್ರಿಕಾದ ವಸಾಹತುಷಾಹಿ, ಭಾರತದ ಸಾಮರ್ಥ್ಯ ಮತ್ತು ರಷ್ಯಾ ಹೇಗೆ ವಿಶಿಷ್ಟ ನಾಗರಿಕತೆ ಮತ್ತು ಸಂಸ್ಕೃತಿಯನ್ನು ಹೊಂದಿದೆ ಎಂಬುದರ ಬಗ್ಗೆ ಮಾತನಾಡಿದ ಪುಟಿನ್, ಭಾರತದೊಂದಿಗೆ ಉತ್ತಮ ಸ್ನೇಹ ಹೊಂದಿರುವುದಾಗಿ ತಿಳಿಸಿದರು. ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದ ವ್ಲಾಡಿಮಿರ್ ಪುಟಿನ್ ಅವರು, ಮೋದಿಯನ್ನು ನೈಜದೇಶ ಭಕ್ತ ಎಂದು ಕರೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT