ಭಾರತ- ಚೀನಾ ರಾಷ್ಟ್ರ ಧ್ವಜ 
ವಿದೇಶ

ಅರುಣಾಚಲ ಪ್ರದೇಶದಲ್ಲಿ ಇಬ್ಬರು ಯುವಕರ ನಾಪತ್ತೆ; ಚೀನಾದಿಂದ ಅಪಹರಣ ಶಂಕೆ 

ಅರುಣಾಚಲ ಪ್ರದೇಶದಲ್ಲಿ ಇಬ್ಬರು ಯುವಕರು ಆ.24 ರಿಂದ ಭಾರತ-ಚೀನಾ ಗಡಿಯ ಪ್ರದೇಶದಿಂದ ನಾಪತ್ತೆಯಾಗಿದ್ದು ಚೀನಾದಿಂದ ಅಪಹರಣಕ್ಕೆ ಒಳಗಾಗಿರುವ ಶಂಕೆ ವ್ಯಕ್ತವಾಗಿದೆ.

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದಲ್ಲಿ ಇಬ್ಬರು ಯುವಕರು ಆ.24 ರಿಂದ ಭಾರತ-ಚೀನಾ ಗಡಿಯ ಪ್ರದೇಶದಿಂದ ನಾಪತ್ತೆಯಾಗಿದ್ದು ಚೀನಾದಿಂದ ಅಪಹರಣಕ್ಕೆ ಒಳಗಾಗಿರುವ ಶಂಕೆ ವ್ಯಕ್ತವಾಗಿದೆ.

ಎರಡು ತಿಂಗಳಾದರೂ ಇಬ್ಬರು ಯುವಕರ ಪತ್ತೆಯಾಗಿಲ್ಲ. ಬ್ಯಾಟಿಲಂ ಟಿಕ್ರೊ (33) ವರ್ಷ ಹಾಗೂ ಬಾಯಿಂಗ್ಸೋ ಮನ್ಯು (35) ಆ.19 ರಂದು ಔಷಧೀಯ ಸಸ್ಯಗಳ ಶೋಧದಲ್ಲಿ ಮನೆಯಿಂದ ತೆರಳಿದ್ದರು, ಆತ ಆ.24 ರಂದು ಕೊನೆಯದಾಗಿ ಕೆಲವು ಗ್ರಾಮಸ್ಥರಿಗೆ ಕಾಣಿಸಿಕೊಂಡಿದ್ದರು. 

ಅರುಣಾಚಲ ಪ್ರದೇಶದಲ್ಲಿ ಸಾಮಾನ್ಯವಾಗಿ ಔಷಧೀಯ ಸಸ್ಯಗಳನ್ನು ಶೋಧಿಸುವವರು 15-20 ದಿನಗಳ ಕಾಲ ತಮಗೆ ಬೇಕಾಗುವ ಆಹಾರ ಪದಾರ್ಥಗಳನ್ನು ಹೊತ್ತು ಹೋಗಿರುತ್ತಾರೆ. ಕುಟುಂಬ ಸದಸ್ಯರು ಅ.09 ರಂದು ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿದ್ದ ಬಗ್ಗೆ ದೂರು ದಾಖಲಿಸಿದ್ದರು. 

ನಾಪತ್ತೆಯಾಗಿರುವ ಯುವಕರ ಕುಟುಂಬ ಸದಸ್ಯರಿಗೆ ತಮ್ಮ ಯುವಕರು ಅಚಾನಕ್ ಆಗಿ ಚೀನಾ ಗಡಿ ದಾಟಿರಬಹುದು ತತ್ಪರಿಣಾಮ ಅವರು ಚೀನಾದಿಂದ ಅಪಹರಣಕ್ಕೆ ಒಳಗಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT