ಭಾರತ- ಚೀನಾ ರಾಷ್ಟ್ರ ಧ್ವಜ 
ವಿದೇಶ

ಅರುಣಾಚಲ ಪ್ರದೇಶದಲ್ಲಿ ಇಬ್ಬರು ಯುವಕರ ನಾಪತ್ತೆ; ಚೀನಾದಿಂದ ಅಪಹರಣ ಶಂಕೆ 

ಅರುಣಾಚಲ ಪ್ರದೇಶದಲ್ಲಿ ಇಬ್ಬರು ಯುವಕರು ಆ.24 ರಿಂದ ಭಾರತ-ಚೀನಾ ಗಡಿಯ ಪ್ರದೇಶದಿಂದ ನಾಪತ್ತೆಯಾಗಿದ್ದು ಚೀನಾದಿಂದ ಅಪಹರಣಕ್ಕೆ ಒಳಗಾಗಿರುವ ಶಂಕೆ ವ್ಯಕ್ತವಾಗಿದೆ.

ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶದಲ್ಲಿ ಇಬ್ಬರು ಯುವಕರು ಆ.24 ರಿಂದ ಭಾರತ-ಚೀನಾ ಗಡಿಯ ಪ್ರದೇಶದಿಂದ ನಾಪತ್ತೆಯಾಗಿದ್ದು ಚೀನಾದಿಂದ ಅಪಹರಣಕ್ಕೆ ಒಳಗಾಗಿರುವ ಶಂಕೆ ವ್ಯಕ್ತವಾಗಿದೆ.

ಎರಡು ತಿಂಗಳಾದರೂ ಇಬ್ಬರು ಯುವಕರ ಪತ್ತೆಯಾಗಿಲ್ಲ. ಬ್ಯಾಟಿಲಂ ಟಿಕ್ರೊ (33) ವರ್ಷ ಹಾಗೂ ಬಾಯಿಂಗ್ಸೋ ಮನ್ಯು (35) ಆ.19 ರಂದು ಔಷಧೀಯ ಸಸ್ಯಗಳ ಶೋಧದಲ್ಲಿ ಮನೆಯಿಂದ ತೆರಳಿದ್ದರು, ಆತ ಆ.24 ರಂದು ಕೊನೆಯದಾಗಿ ಕೆಲವು ಗ್ರಾಮಸ್ಥರಿಗೆ ಕಾಣಿಸಿಕೊಂಡಿದ್ದರು. 

ಅರುಣಾಚಲ ಪ್ರದೇಶದಲ್ಲಿ ಸಾಮಾನ್ಯವಾಗಿ ಔಷಧೀಯ ಸಸ್ಯಗಳನ್ನು ಶೋಧಿಸುವವರು 15-20 ದಿನಗಳ ಕಾಲ ತಮಗೆ ಬೇಕಾಗುವ ಆಹಾರ ಪದಾರ್ಥಗಳನ್ನು ಹೊತ್ತು ಹೋಗಿರುತ್ತಾರೆ. ಕುಟುಂಬ ಸದಸ್ಯರು ಅ.09 ರಂದು ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿದ್ದ ಬಗ್ಗೆ ದೂರು ದಾಖಲಿಸಿದ್ದರು. 

ನಾಪತ್ತೆಯಾಗಿರುವ ಯುವಕರ ಕುಟುಂಬ ಸದಸ್ಯರಿಗೆ ತಮ್ಮ ಯುವಕರು ಅಚಾನಕ್ ಆಗಿ ಚೀನಾ ಗಡಿ ದಾಟಿರಬಹುದು ತತ್ಪರಿಣಾಮ ಅವರು ಚೀನಾದಿಂದ ಅಪಹರಣಕ್ಕೆ ಒಳಗಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ