ಸಾಂದರ್ಭಿಕ ಚಿತ್ರ 
ವಿದೇಶ

ಗಾಜಾಪಟ್ಟಿ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ ಅವಘಡ: 7 ಮಕ್ಕಳು ಸೇರಿ 21 ಮಂದಿ ಸಜೀವ ದಹನ

ಗಾಜಾ ಪಟ್ಟಿಯಲ್ಲಿರುವ ನಿರಾಶ್ರಿತರ ಶಿಬಿರದಲ್ಲಿರುವ ವಸತಿ ಕಟ್ಟಡದಲ್ಲಿ ಗುರುವಾರ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಏಳು ಮಕ್ಕಳು ಸೇರಿದಂತೆ ಕನಿಷ್ಠ 21 ಜನರು ಸಜೀವ ದಹನಗೊಂಡಿದ್ದಾರೆ.

ಜೆರುಸಲೆಮ್: ಗಾಜಾ ಪಟ್ಟಿಯಲ್ಲಿರುವ ನಿರಾಶ್ರಿತರ ಶಿಬಿರದಲ್ಲಿರುವ ವಸತಿ ಕಟ್ಟಡದಲ್ಲಿ ಗುರುವಾರ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಏಳು ಮಕ್ಕಳು ಸೇರಿದಂತೆ ಕನಿಷ್ಠ 21 ಜನರು ಸಜೀವ ದಹನಗೊಂಡಿದ್ದಾರೆ.

ಉತ್ತರ ಗಾಜಾದಲ್ಲಿ ಜನನಿಬಿಡ ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಗಾಜಾದ ಆಂತರಿಕ ಸಚಿವಾಲಯ ತಿಳಿಸಿದೆ. ನಾಲ್ಕು ಅಂತಸ್ತಿನ ವಸತಿ ಕಟ್ಟಡದ ಮೇಲಿನ ಮಹಡಿಯಲ್ಲಿ ಕಾಣಿಸಿಕೊಂಡ ಬೃಹತ್ ಜ್ವಾಲೆಯನ್ನು ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿಗೆ ಒಂದು ಗಂಟೆಗೂ ಹೆಚ್ಚು ಸಮಯ ಬೇಕಾಯಿತು ಎಂದು ರಾಯಿಟರ್ಸ್ ವರದಿ ಮಾಡಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಕಟ್ಟಡದೊಳಗೆ ಹೆಚ್ಚಿನ ಪ್ರಮಾಣದ ಗ್ಯಾಸೋಲಿನ್ ಸಂಗ್ರಹಿಸಲಾಗಿದೆ, ಇದು ಬೆಂಕಿಯ ಉಲ್ಬಣಕ್ಕೆ ಕಾರಣವಾಗಿದೆ. ಕಟ್ಟಡದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

DK Shivakumar and cabinet swearing-in LIVE updates | ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕಾರ!

ನಿಮ್ಮ ಜೊತೆ ಕೇಂದ್ರ ಸರ್ಕಾರವಿದೆ: ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಪ್ರಧಾನಿ ಮೋದಿ ಅಭಿನಂದನೆ

ಕರ್ನಾಟಕದ 18ನೇ ಸಿಎಂ ಆಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್

ಡಿಕೆಶಿ ಪದಗ್ರಹಣಕ್ಕೆ ಆಗಮಿಸಿದ ನಟಿ ರಮ್ಯಾ; ಸಕ್ರಿಯೆ ರಾಜಕಾರಣಕ್ಕೆ ಮರಳುವ ಬಗ್ಗೆ ಮಾಜಿ ಸಂಸದೆ ಹೇಳಿದ್ದೇನು?

ವೈಮಾನಿಕ ಇಂಧನ ಬೆಲೆ ಸ್ಥಿರಗೊಳಿಸಲು ಕೇಂದ್ರ ಸರ್ಕಾರದಿಂದ 10,000 ಕೋಟಿ ರೂ. ನೆರವು

SCROLL FOR NEXT