ನೀರವ್ ಮೋದಿ 
ವಿದೇಶ

ಭಾರತಕ್ಕೆ ಹಸ್ತಾಂತರದ ವಿರುದ್ಧ ಬ್ರಿಟನ್‌ನ ಉನ್ನತ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲು ಅನುಮತಿ ಕೋರಿದ ನೀರವ್ ಮೋದಿ

ವಿದೇಶಕ್ಕೆ ಪರಾರಿಯಾಗಿರುವ ವಜ್ರ ವ್ಯಾಪಾರಿ ನೀರವ್ ಮೋದಿ, ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ನಿರ್ಧಾರದ ವಿರುದ್ಧ ಯುಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ಕೋರಿ ಇಲ್ಲಿನ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಲಂಡನ್‌: ವಿದೇಶಕ್ಕೆ ಪರಾರಿಯಾಗಿರುವ ವಜ್ರ ವ್ಯಾಪಾರಿ ನೀರವ್ ಮೋದಿ, ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ನಿರ್ಧಾರದ ವಿರುದ್ಧ ಯುಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ಕೋರಿ ಇಲ್ಲಿನ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ಸಾವಿರಾರು ಕೋಟಿ ವಂಚನೆ ಪ್ರಕರಣ ಮತ್ತು ಹಣ ಅಕ್ರಮ ವರ್ಗಾವಣೆ ಆರೋಪ ಎದುರಿಸುತ್ತಿದ್ದಾರೆ.

ಈ ತಿಂಗಳ ಆರಂಭದಲ್ಲಿ ಮಾನಸಿಕ ಆರೋಗ್ಯದ ಆಧಾರದ ಮೇಲೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲಿ ವಿಚಾರಣೆ ಎದುರಿಸಲು ಭಾರತಕ್ಕೆ ಮರಳಿ ಕಳಿಸುವುದರ ವಿರುದ್ಧ 51 ವರ್ಷದ ಉದ್ಯಮಿ ಸಲ್ಲಿಸಿದ್ದ ಮೇಲ್ಮನವಿ ತಿರಸ್ಕೃತವಾಗಿದೆ.

ಇಬ್ಬರು ನ್ಯಾಯಾಧೀಶರನ್ನೊಳಗೊಂಡ ಹೈಕೋರ್ಟ್ ಪೀಠವು, 'ನೀರವ್ ಮೋದಿ ಅವರು ಆತ್ಮಹತ್ಯೆಯ ಅಪಾಯಕ್ಕೆ ಒಳಗಾಗಬಹುದು ಎನ್ನುವ ವಾದವು ಅವರನ್ನು ಗಡಿಪಾರು ಮಾಡದಿರುವುದಕ್ಕೆ ಕಾರಣವಾಗುವುದಿಲ್ಲ. ಅವರನ್ನು ಭಾರತಕ್ಕೆ ಹಸ್ತಾಂತರಿಸುವುದು ಅನ್ಯಾಯ ಅಥವಾ ದಬ್ಬಾಳಿಕೆಯಾಗುತ್ತದೆ ಎನ್ನುವುದಕ್ಕೆ ಪೂರಕ ಅಂಶಗಳಿಲ್ಲ' ಎಂದು ತಿಳಿಸಿದೆ.

ಆಗ್ನೇಯ ಲಂಡನ್‌ನ ವಾಂಡ್ಸ್‌ವರ್ತ್ ಜೈಲಿನಲ್ಲಿರುವ ನೀರವ್, ಸಾಮಾನ್ಯ ಸಾರ್ವಜನಿಕ ಪ್ರಾಮುಖ್ಯತೆಯ ಕಾನೂನಿನ ಅಡಿಯಲ್ಲಿ ನೀರವ್ ಮೇಲ್ಮನವಿ ಸಲ್ಲಿಸಲು ಎರಡು ವಾರಗಳ ಕಾಲಾವಕಾಶವಿದೆ.

ನೀರವ್ ಮೋದಿ ಅವರ ಮುಂದೆ ಇನ್ನೂ ಕಾನೂನು ಸವಾಲುಗಳು ಮುಂದಿರುವುದರಿಂದ ಭಾರತಕ್ಕೆ ಹಸ್ತಾಂತರವು ಯಾವಾಗ ನಡೆಯುತ್ತದೆ ಎಂಬುದು ತಿಳಿದಿಲ್ಲ ಎಂದು ಯುಕೆ ಗೃಹ ಕಚೇರಿ ಮೂಲಗಳು ತಿಳಿಸಿವೆ.

ಭಾರತೀಯ ಅಧಿಕಾರಿಗಳ ಪರವಾಗಿ ಕಾರ್ಯನಿರ್ವಹಿಸುವ ಕ್ರೌನ್ ಪ್ರಾಸಿಕ್ಯೂಷನ್ ಸರ್ವಿಸ್ (CPS) ಇದೀಗ ಇತ್ತೀಚಿನ ಅರ್ಜಿಗೆ ಪ್ರತಿಕ್ರಿಯಿಸುವ ನಿರೀಕ್ಷೆಯಿದೆ. ಇದನ್ನು ಅನುಸರಿಸಿ ಹೈಕೋರ್ಟ್ ನ್ಯಾಯಾಧೀಶರು ಪೂರ್ಣ ವಿಚಾರಣೆಯಿಲ್ಲದೆ ತೀರ್ಪು ನೀಡುತ್ತಾರೆ.

ಇಡೀ ಪ್ರಕ್ರಿಯೆಯು ಅಂತಿಮವಾಗಿ ಮುಂದಿನ ವರ್ಷ ನಡೆಯಬಹುದು. ಏಕೆಂದರೆ, ಮುಂದಿನ ತಿಂಗಳು ಕ್ರಿಸ್ಮಸ್ ರಜೆಯ ಅವಧಿಯನ್ನು ನೀಡಲಾಗಿದೆ.

2019ರ ಮಾರ್ಚ್‌ನಲ್ಲಿ ನೀರವ್ ಮೋದಿ ಬಂಧನವಾಗಿದ್ದು, ಆಗಿನಿಂದಲೂ ಲಂಡನ್ ಜೈಲಿನಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇವನಹಳ್ಳಿಯ 1,777 ಎಕರೆ ಜಮೀನು 'ಶಾಶ್ವತ ವಿಶೇಷ ಕೃಷಿ ವಲಯ'; ಭೂಮಿ ಮಾರಾಟಕ್ಕೆ ಕಡಿವಾಣ ಇಲ್ಲ: ಸರ್ಕಾರ

ಟಿ20 ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 101 ರನ್‌ಗಳ ದಾಖಲೆಯ ಜಯ; ಕಟಕ್‌ನಲ್ಲಿ ಹರಿಣರಿಗೆ ಮೊದಲ ಸೋಲು!

Indigo ವಿರುದ್ಧ ದಿಟ್ಟ ಕ್ರಮ: ವಿಮಾನ ಕಾರ್ಯಾಚರಣೆಯಲ್ಲಿ ಶೇ.10ರಷ್ಟು ಕಡಿತಕ್ಕೆ ಕೇಂದ್ರ ಸರ್ಕಾರ ಆದೇಶ!

Microsoft ಮೆಗಾ ಹೂಡಿಕೆ: 'AI 1st ಫ್ಯೂಚರ್'ಗಾಗಿ 1.5 ಲಕ್ಷ ಕೋಟಿ ರೂ ಬಂಡವಾಳ; ಬೆಂಗಳೂರಿನಲ್ಲಿ AI ಘಟಕ!

1st T20I: ಹಾರ್ದಿಕ್ ಪಾಂಡ್ಯಾ ಏಕಾಂಗಿ ಹೋರಾಟ; ದಕ್ಷಿಣ ಆಫ್ರಿಕಾ ಗೆ 176 ರನ್ ಗುರಿ!

SCROLL FOR NEXT