ಆತ್ಮಾಹುತಿ ಬಾಂಬ್ ದಾಳಿ 
ವಿದೇಶ

ಪಾಕಿಸ್ತಾನ: ತಾಲಿಬಾನ್ ನಿಂದ ಆತ್ಮಾಹುತಿ ಬಾಂಬ್ ದಾಳಿ, ಮೂವರು ಸಾವು, 23 ಮಂದಿಗೆ ಗಾಯ

ಪಶ್ಚಿಮ ಪಾಕಿಸ್ತಾನದಲ್ಲಿ ಪೊಲೀಸ್ ವಾಹನವನ್ನು ಗುರಿಯಾಗಿಸಿಕೊಂಡು ಬುಧವಾರ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 23 ಮಂದಿ ಗಾಯಗೊಂಡಿದ್ದಾರೆ.

ಕ್ವೆಟ್ಟಾ: ಪಶ್ಚಿಮ ಪಾಕಿಸ್ತಾನದಲ್ಲಿ ಪೊಲೀಸ್ ವಾಹನವನ್ನು ಗುರಿಯಾಗಿಸಿಕೊಂಡು ಬುಧವಾರ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 23 ಮಂದಿ ಗಾಯಗೊಂಡಿದ್ದಾರೆ. ತಾಲಿಬಾನ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

ಬಲೂಚಿಸ್ತಾನ ಬಳಿಯ ಕ್ವೆಟ್ಟಾದ ಬಲೇಲಿ ಪ್ರದೇಶದಲ್ಲಿ ಪೊಲೀಸ್ ಟ್ರಕ್ ಅನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಓರ್ವ ಪೊಲೀಸ್, ಮಹಿಳೆ ಮತ್ತು ಮಗು ಮೃತಪಟ್ಟಿದ್ದು, 20 ಪೊಲೀಸ್ ಅಧಿಕಾರಿಗಳು ಸೇರಿದಂತೆ 23 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಜರ್ ಮೆಹೆಸರ್ ಅವರು ತಿಳಿಸಿದ್ದಾರೆ.

ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್(ಟಿಟಿಪಿ) ದಾಳಿಯ ಹೊಣೆ ಹೊತ್ತುಕೊಂಡಿದ್ದು, ಒಂದು ದಿನದ ಹಿಂದೆಯಷ್ಟೇ ಉಗ್ರಗಾಮಿ ಗುಂಪು ಸರ್ಕಾರದೊಂದಿಗೆ ತನ್ನ ಕದನ ವಿರಾಮವನ್ನು ಹಿಂತೆಗೆದುಕೊಂಡಿತ್ತು. ಬಳಿಕ ದೇಶಾದ್ಯಂತ ದಾಳಿಗಳನ್ನು ನಡೆಸುವಂತೆ ತನ್ನ ಸೈನಿಕರಿಗೆ ತಿಳಿಸಿರುವುದಾಗಿ ವರದಿಯಾಗಿದೆ. 

ಕದನ ವಿರಾಮದ ಸಮಯದಲ್ಲಿ ಸಂಸ್ಥಾಪಕ ಸದಸ್ಯ ಉಮರ್ ಖಾಲಿದ್ ಖುರಾಸಾನಿ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಕಸ್ಟಮ್ಸ್ ಪೋಸ್ಟ್ ಬಳಿ ತಮ್ಮ "ಪವಿತ್ರ ಯೋಧ" ಕಾರ್ ಬಾಂಬ್ ಸ್ಫೋಟಿಸಿರುವುದಾಗಿ ಎಂದು ಟಿಟಿಪಿ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ "ತಮ್ಮ ಸೇಡಿನ ಕಾರ್ಯಾಚರಣೆಗಳು ಮುಂದುವರೆಯುತ್ತವೆ" ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT