ಮೊಹಮ್ಮದ್ ಜುಬೇರ್-ಪ್ರತೀಕ್ ಸಿನ್ಹಾ 
ವಿದೇಶ

ನೊಬೆಲ್ ಶಾಂತಿ ಪ್ರಶಸ್ತಿ ಸ್ಪರ್ಧಿಗಳ ಪಟ್ಟಿಯಲ್ಲಿ ಫ್ಯಾಕ್ಟ್ ಚೆಕ್'ನ ಮೊಹಮ್ಮದ್ ಜುಬೇರ್, ಪ್ರತೀಕ್ ಸಿನ್ಹಾ

2022ರ ನೊಬೆಲ್ ಶಾಂತಿ ಪ್ರಶಸ್ತಿ ಸ್ಪರ್ಧಿಗಳ ಪಟ್ಟಿಯಲ್ಲಿ ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್ ಮತ್ತು ಪ್ರತೀಕ್ ಸಿನ್ಹಾರ ಹೆಸರಿದೆ ಎಂದು ವರದಿಯಾಗಿದೆ.

ನವದೆಹಲಿ: 2022ರ ನೊಬೆಲ್ ಶಾಂತಿ ಪ್ರಶಸ್ತಿ ಸ್ಪರ್ಧಿಗಳ ಪಟ್ಟಿಯಲ್ಲಿ ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್ ಮತ್ತು ಪ್ರತೀಕ್ ಸಿನ್ಹಾರ ಹೆಸರಿದೆ ಎಂದು ವರದಿಯಾಗಿದೆ.

ಟೈಮ್ ಪ್ರಕಾರ, ಫ್ಯಾಕ್ಟ್ ಚೆಕಿಂಗ್ ವೆಬ್ ಸೈಟ್ ಆಲ್ಟ್‌ನ್ಯೂಸ್‌ನ ಸಹ-ಸಂಸ್ಥಾಪಕರಾದ ಪ್ರತೀಕ್ ಸಿನ್ಹಾ ಮತ್ತು ಮೊಹಮ್ಮದ್ ಜುಬೇರ್ ಅವರು ನಾರ್ವೇಜಿಯನ್ ಶಾಸಕರು, ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ ಓಸ್ಲೋ (PRIO) ಬಹಿರಂಗಪಡಿಸಿದ ನಾಮನಿರ್ದೇಶನಗಳ ಆಧಾರದ ಮೇಲೆ ಬಹುಮಾನವನ್ನು ಗೆಲ್ಲುವ ಸ್ಪರ್ಧಿಗಳಾಗಿದ್ದಾರೆ.

ದೆಹಲಿ ಪೊಲೀಸರ ಎಫ್‌ಐಆರ್ ಪ್ರಕಾರ, 2018ರ ಟ್ವೀಟ್‌ಗಾಗಿ ಮೊಹಮ್ಮದ್ ಜುಬೇರ್ ನನ್ನು 2022ರ ಜೂನ್‌ನಲ್ಲಿ ಬಂಧಿಸಲಾಗಿತ್ತು. ಜುಬೇರ್ ಮಾಡಿದ ಟ್ವೀಟ್ ಹೆಚ್ಚು ಪ್ರಚೋದನಕಾರಿ ಮತ್ತು ದ್ವೇಷದ ಭಾವನೆಗಳನ್ನು ಪ್ರಚೋದಿಸುತ್ತದೆ ಎಂಬುದು ಆರೋಪವಾಗಿತ್ತು. ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಲು ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಕೃತ್ಯಗಳಿಗಾಗಿ ದೆಹಲಿ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮೊಹಮ್ಮದ್ ಜುಬೇರ್ ಬಂಧನ ಜಾಗತಿಕ ಮಟ್ಟದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಟು ಪ್ರೊಟೆಕ್ಟ್ ಜರ್ನಲಿಸ್ಟ್ಸ್ ಅಮೆರಿಕದ ನಾನ್ ಪ್ರಾಫಿಟ್ ಕಮಿಟಿ, ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ ಮತ್ತೊಮ್ಮೆ ಕೆಳಮಟ್ಟಕ್ಕೆ ತಲುಪಿದೆ. ಅಲ್ಲಿ ಸರ್ಕಾರವು ಪಂಥೀಯ ವಿಷಯಗಳ ಬಗ್ಗೆ ವರದಿ ಮಾಡುವ ಪತ್ರಿಕಾ ಸದಸ್ಯರಿಗೆ ಪ್ರತಿಕೂಲ ಮತ್ತು ಅಸುರಕ್ಷಿತ ವಾತಾವರಣವನ್ನು ಸೃಷ್ಟಿಸಿದೆ ಎಂದು ಹೇಳಿದೆ.

ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದ ಒಂದು ತಿಂಗಳ ನಂತರ, ಜುಬೇರ್ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದರು.

ಸುಮಾರು 343 ಅಭ್ಯರ್ಥಿಗಳು, 251 ವ್ಯಕ್ತಿಗಳು ಮತ್ತು 92 ಸಂಸ್ಥೆಗಳು 2022ರ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಸ್ಪರ್ಧಿಸುತ್ತಿವೆ. 2022ರ ನೊಬೆಲ್ ಶಾಂತಿ ಪ್ರಶಸ್ತಿಯ ವಿಜೇತರನ್ನು ಓಸ್ಲೋದಲ್ಲಿ ಅಕ್ಟೋಬರ್ 7ರಂದು ಸ್ಥಳೀಯ ಸಮಯ 11 ಗಂಟೆಗೆ ಘೋಷಿಸಲಾಗುವುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT