ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ 
ವಿದೇಶ

ಉಕ್ರೇನ್‌ನ 4 ಪ್ರದೇಶಗಳನ್ನು ಸ್ವಾಧೀನಪಡಿಸಿಕೊಳ್ಳುವ ಕಾನೂನಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಹಿ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್‌ನ ನಾಲ್ಕು ಪ್ರದೇಶಗಳನ್ನು ರಷ್ಯಾಕ್ಕೆ ಸೇರಿಸಿಕೊಳ್ಳುವ ಕಾನೂನುಗಳಿಗೆ ಸಹಿ ಹಾಕಿದ್ದಾರೆ. ಆದರೆ, ಈ ಕ್ರಮವು ಅಂತರರಾಷ್ಟ್ರೀಯ ಕಾನೂನನ್ನು ಧಿಕ್ಕರಿಸಿ ನಡೆಸುತ್ತಿರುವ ಸ್ವಾಧೀನವಾಗಿದೆ.

ಕೀವ್: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್‌ನ ನಾಲ್ಕು ಪ್ರದೇಶಗಳನ್ನು ರಷ್ಯಾಕ್ಕೆ ಸೇರಿಸಿಕೊಳ್ಳುವ ಕಾನೂನುಗಳಿಗೆ ಸಹಿ ಹಾಕಿದ್ದಾರೆ. ಆದರೆ, ಈ ಕ್ರಮವು ಅಂತರರಾಷ್ಟ್ರೀಯ ಕಾನೂನನ್ನು ಧಿಕ್ಕರಿಸಿ ನಡೆಸುತ್ತಿರುವ ಸ್ವಾಧೀನವಾಗಿದೆ.

ಈ ಬಗ್ಗೆ ಬುಧವಾರ ಬೆಳಿಗ್ಗೆ ರಷ್ಯಾದ ಸರ್ಕಾರದ ವೆಬ್‌ಸೈಟ್‌ನಲ್ಲಿ ದಾಖಲೆಗಳನ್ನು ಪ್ರಕಟಿಸಲಾಗಿದೆ.
ಈ ವಾರದ ಆರಂಭದಲ್ಲಿ, ರಷ್ಯಾದ ಸಂಸತ್ತಿನ ಉಭಯ ಸದನಗಳು ಉಕ್ರೇನ್‌ನಿಂದ ವಶಪಡಿಸಿಕೊಂಡ ಡೊನೆಟ್‌ಸ್ಕ್, ಲುಹಾನ್‌ಸ್ಕ್, ಖೆರ್ಸನ್ ಮತ್ತು ಜಪೋರಿಝಿಯಾ ಪ್ರದೇಶಗಳನ್ನು ರಷ್ಯಾದ ಭಾಗವನ್ನಾಗಿ ಮಾಡುವ ಒಪ್ಪಂದಗಳನ್ನು ಅಂಗೀಕರಿಸಿದವು.

ಉಕ್ರೇನ್‌ನಲ್ಲಿ ರಷ್ಯಾದ ಯುದ್ಧವು ಹೊಸ, ಹೆಚ್ಚು ಅಪಾಯಕಾರಿ ಹಂತವನ್ನು ಪ್ರವೇಶಿಸಿರುವುದರಿಂದ ಈ ಕ್ರಮವು ಬಂದಿದೆ. ರಷ್ಯಾ ಯುದ್ಧಭೂಮಿಯಲ್ಲಿ ಹೆಚ್ಚು ಹಿನ್ನಡೆಗಳನ್ನು ಅನುಭವಿಸುತ್ತಿದೆ. ರಷ್ಯಾದ ಸೇನೆಗಳು ಸುತ್ತುವರಿದಿದ್ದ ಪೂರ್ವ ಮತ್ತು ದಕ್ಷಿಣದಲ್ಲಿ ಹೆಚ್ಚು ಹೆಚ್ಚು ಭೂಮಿಯನ್ನು ಉಕ್ರೇನ್ ಪಡೆಗಳು ಹಿಂತೆಗೆದುಕೊಳ್ಳುತ್ತಿವೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು NATO ಗೆ ಸೇರಲು ಫಾಸ್ಟ್-ಟ್ರ್ಯಾಕ್ ಅರ್ಜಿಯನ್ನು ಘೋಷಿಸುವ ಮೂಲಕ ರಷ್ಯಾದೊಂದಿಗೆ ಮಾತುಕತೆಗಳು ಇಲ್ಲ ಎಂದು ಔಪಚಾರಿಕವಾಗಿ ತಳ್ಳಿಹಾಕುವ ಮೂಲಕ ತನ್ನ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಂಡಿರುವುದಕ್ಕೆ ಪ್ರತಿಕ್ರಿಯಿಸಿದರು.

ಉಕ್ರೇನ್‌ನ ನಾಲ್ಕು ಪ್ರದೇಶಗಳನ್ನು ಸ್ವಾಧೀನಪಡಿಸಿಕೊಳ್ಳುವ ನಿರ್ಧಾರದ ನಂತರ ಪುಟಿನ್ ಅವರೊಂದಿಗೆ ಮಾತುಕತೆ ನಡೆಸುವುದು ಅಸಾಧ್ಯ ಎಂದು ಮಂಗಳವಾರ ಬಿಡುಗಡೆಯಾದ ಹೇಳಿಕೆಯನ್ನು ಝೆಲೆನ್‌ಸ್ಕಿ ತಿಳಿಸಿದ್ದಾರೆ.

ಉಕ್ರೇನ್‌ನೊಂದಿಗಿನ ಏಳು ತಿಂಗಳ ಸಂಘರ್ಷದ ಸಮಯದಲ್ಲಿ ನಾಲ್ಕು ಪ್ರದೇಶಗಳನ್ನು ಮಾಸ್ಕೋದ ಪಡೆಗಳು ಭಾಗಶಃ ವಶಪಡಿಸಿಕೊಂಡಿದ್ದವು. ಆಕ್ರಮಿತ ಪ್ರದೇಶಗಳಲ್ಲಿ ಜನಾಭಿಪ್ರಾಯ ಸಂಗ್ರಹಣೆ ನಡೆಸಿದ ನಂತರ ರಷ್ಯಾ ಸ್ವಾಧೀನಪಡಿಸಿಕೊಂಡಿತು. ಇದೇ ವೇಳೆ ಪಾಶ್ಚಿಮಾತ್ಯ ಸರ್ಕಾರಗಳು ಮತ್ತು ಕೀವ್, ಇದು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು ಹೇಳಿವೆ.

ಎಂಟು ವರ್ಷಗಳ ಹಿಂದೆ ದಕ್ಷಿಣ ಉಕ್ರೇನ್‌ನ ಕ್ರಿಮಿಯಾವನ್ನು ರಷ್ಯಾ ಸ್ವಾಧೀನಪಡಿಸಿಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT