ಭಾರತೀಯ ಮೂಲದ ಕುಟುಂಬ 
ವಿದೇಶ

ಕ್ಯಾಲಿಫೋರ್ನಿಯಾ: ಕಿಡ್ನಾಪ್ ಆಗಿದ್ದ ಭಾರತೀಯ ಮೂಲದ ಕುಟುಂಬದ ನಾಲ್ಕು ಮಂದಿ ಶವವಾಗಿ ಪತ್ತೆ!

ಸೋಮವಾರ ಕಿಡ್ನಾಪ್ ಆಗಿದ್ದ ಎಂಟು ತಿಂಗಳ ಮಗು ಸೇರಿದಂತೆ  ಕುಟುಂಬದ ನಾಲ್ಕು ಮಂದಿ ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯ ಹಣ್ಣಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕ್ಯಾಲಿಫೋರ್ನಿಯಾ: ಸೋಮವಾರ ಕಿಡ್ನಾಪ್ ಆಗಿದ್ದ ಎಂಟು ತಿಂಗಳ ಮಗು ಸೇರಿದಂತೆ  ಕುಟುಂಬದ ನಾಲ್ಕು ಮಂದಿ ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯ ಹಣ್ಣಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಅಮೆರಿಕಾದಲ್ಲಿ ನೆಲೆಸಿದ್ದ ಭಾರತೀಯ ಮೂಲದ ಕುಟುಂಬದ ನಾಲ್ಕು ಮಂದಿಯನ್ನು ಸೋಮವಾರ ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಿಂದ ಅಪಹರಿಸಲಾಗಿತ್ತು. 8 ತಿಂಗಳ ಮಗು ಅರೂಹಿ ಧೇರಿ ಮತ್ತು ಆಕೆಯ ಪೋಷಕರಾದ 27 ವರ್ಷದ ಜಸ್ಲೀನ್ ಕೌರ್ ಮತ್ತು 36 ವರ್ಷದ ಜಸ್ದೀಪ್ ಸಿಂಗ್  ಹಾಗೂ ಮಗುವಿನ ಚಿಕ್ಕಪ್ಪ, 39 ವರ್ಷದ ಅಮನದೀಪ್ ಸಿಂಗ್ ಅವರನ್ನು ಅಪಹರಿಸಲಾಗಿತ್ತು.

ಮರ್ಸಿಡ್ ಕೌಂಟಿ ಶೆರಿಫ್ ವೆರ್ನ್ ವಾರ್ನ್ಕೆ ಅವರು ನಾಲ್ವರ ಶವಗಳು ಇಂಡಿಯಾನಾ ರಸ್ತೆ ಮತ್ತು ಹಚಿನ್ಸನ್ ರಸ್ತೆ ಬಳಿಯ ಹಣ್ಣಿನ ತೋಟದಲ್ಲಿ ಬುಧವಾರ ಸಂಜೆ ಪತ್ತೆಯಾಗಿವೆ. ಪೊಲೀಸರ ಪ್ರಕಾರ, ಅಧಿಕಾರಿಗಳನ್ನು ಸಂಪರ್ಕಿಸುವ ಮೊದಲು ತೋಟದ ಬಳಿಯ ರೈತ ಕಾರ್ಮಿಕರು ಶವಗಳನ್ನು ಪತ್ತೆ ಮಾಡಿದ್ದಾರೆ.

ಈ ಕುಟುಂಬವನ್ನು ಅಪಹರಿಸಿದ ಒಂದು ದಿನದ ನಂತರ, ಪೊಲೀಸರು ಶಂಕಿತ ಅಪಹರಣಕಾರನನ್ನು ಪತ್ತೆ ಮಾಡಿದ್ದರು. 48 ವರ್ಷದ ಜೀಸಸ್ ಮ್ಯಾನುಯೆಲ್ ಸಲ್ಗಾಡೊನನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಜಸ್ದೀಪ್ ಸಿಂಗ್ ಕುಟುಂಬದ ಮೇಲೆ ಈ ವ್ಯಕ್ತಿಗೆ ದ್ವೇಷವಿತ್ತು ಎಂದು ಹೇಳಲಾಗಿದೆ.

ಸ್ಯಾನ್ ಫ್ರಾನ್ಸಿಸ್ಕೋದ ಆಗ್ನೇಯದಲ್ಲಿರುವ ಸ್ಯಾನ್ ಜೊವಾಕ್ವಿನ್ ವ್ಯಾಲಿಯಲ್ಲಿರುವ ಮರ್ಸಿಡ್‌ನಲ್ಲಿ ಸೋಮವಾರ ಎಂಟು ತಿಂಗಳ ಮಗು ಅರೂಹಿ ಧೇರಿ, ಅವರ ಪೋಷಕರು ಮತ್ತು ಚಿಕ್ಕಪ್ಪನನ್ನು ಅಪಹರಿಸಿದ ವ್ಯಕ್ತಿಯ ವೀಡಿಯೊವನ್ನು ಅಧಿಕಾರಿಗಳು ಬಿಡುಗಡೆ ಮಾಡಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಕಿಡ್ನಾಪ್ ಮಾಡಿದ್ದವನು ಯಾವುದೇ ರೀತಿಯ ಹಣಕ್ಕೆ ಬೇಡಿಕೆ ಇಟ್ಟಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT