ಉಗ್ರರು (ಸಂಗ್ರಹ ಚಿತ್ರ) 
ವಿದೇಶ

ಉಗ್ರರಿಂದ ಪಾಕಿಸ್ತಾನದ ಹಿರಿಯ ಸಚಿವನ ಅಪಹರಣ; ಜೈಲಿನಲ್ಲಿರುವ ಭಯೋತ್ಪಾದಕರ ಬಿಡುಗಡೆಗೆ ಆಗ್ರಹ  

ಪಾಕಿಸ್ತಾನದ ಹಿರಿಯ ಸಚಿವನನ್ನು ಅಪಹರಣ ಮಾಡಿರುವ ಅಲ್ಲಿನ ಭಯೋತ್ಪಾದಕರು ತಮ್ಮ ಸಹಚರರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. 

ಇಸ್ಲಾಮಾಬಾದ್: ಪಾಕಿಸ್ತಾನದ ಹಿರಿಯ ಸಚಿವನನ್ನು ಅಪಹರಣ ಮಾಡಿರುವ ಅಲ್ಲಿನ ಭಯೋತ್ಪಾದಕರು ತಮ್ಮ ಸಹಚರರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. 

ತಮ್ಮ ಬೇಡಿಕೆ ಈಡೇರಿಕೆಗೆ ಸಚಿವರನ್ನು ಅಪಹರಣ ಮಾಡುವುದಷ್ಟೇ ಅಲ್ಲದೇ ಉಗ್ರರು ಖೈಬರ್ ಪಖ್ತುನ್ಖ್ವಾ, ಗಿಲ್ಗಿಟ್ ಬಾಲ್ಟಿಸ್ಥಾನ್ ನ್ನು ಸಂಪರ್ಕಿಸುವ ರಸ್ತೆಯನ್ನು ಬಂದ್ ಮಾಡಿದ್ದು ಹಲವು ಪ್ರವಾಸಿಗರನ್ನೂ ಅಪಹರಿಸಿದ್ದಾರೆ.
 
ಉಗ್ರರ ಎದುರು ಸರ್ಕಾರ ಮಂಡಿಯೂರಿದ್ದು ಸಂಧಾನದ ನಂತರ ಭಯೋತ್ಪಾದಕರು ನಂಗ ಪರ್ಬತ್ ನಲ್ಲಿ ವಿದೇಶಿಗರನ್ನು ಹತ್ಯೆ ಮಾಡಿರುವ ಭಯೋತ್ಪಾದಕರನ್ನು ಬಿಡುಗಡೆ ಮಾಡುವಂತೆ ಮನವಿ ಮುಂದಿಟ್ಟು ಸಚಿವರನ್ನು ಬಿಡುಗಡೆ ಮಾಡಿದ್ದಾರೆ. 

ಸ್ವತಃ ಸಚಿವ ತನ್ನನ್ನು ಉಗ್ರರು ಬಿಡುಗಡೆ ಮಾಡಿರುವುದನ್ನು ಖಚಿತಪಡಿದ್ದಾರೆ. ನಂಗ ಪರ್ಬತ್ ನಲ್ಲಿ 10 ಮಂದಿ ವಿದೇಶಿಗರನ್ನು ಹತ್ಯೆ ಮಾಡಿರುವ ಆರೋಪ ಎದುರಿಸುತ್ತಿರುವ ಹಬಿಬುರ್ ರೆಹಮಾನ್ ಹಾಗೂ ಆತನ ಸಹಚರರು ಶುಕ್ರವಾರ ಸಂಜೆ 4 ರ ವೇಳೆಗೆ ರಸ್ತೆ ಬಂದ್ ಮಾಡಿದ್ದರು ಎಂದು ತಿಳಿದುಬಂದಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT