ಎಲ್ನಾಜ್ ರೆಕಾಬಿ 
ವಿದೇಶ

ಹಿಜಾಬ್ ಧರಿಸದೆ ಸ್ಪರ್ಧಿಸಿದ ಅಥ್ಲೀಟ್ ಎಲ್ನಾಜ್ ರೆಕಾಬಿಗೆ ಇರಾನ್‌ನಲ್ಲಿ ಭವ್ಯ ಸ್ವಾಗತ, ವಿಡಿಯೋ ವೈರಲ್!

ಕ್ರೀಡಾಕೂಟದಲ್ಲಿ ಹಿಜಾಬ್ ಧರಿಸದೆ ಸ್ಪರ್ಧಿಸುವ ಮೂಲಕ ಸಂಚಲನ ಮೂಡಿಸಿದ್ದ ಇರಾನ್ ಪರ್ವತಾರೋಹಿಯೊಬ್ಬರು ಕಳೆದ ರಾತ್ರಿ ಟೆಹ್ರಾನ್‌ಗೆ ಆಗಮಿಸಿದ್ದು ಆಟಗಾರ್ತಿಯ ನಡೆಯನ್ನು ಶ್ಲಾಘಿಸಿದ ಬೆಂಬಲಿಗರು ವೀರೋಚಿತ ಸ್ವಾಗತವನ್ನು ನೀಡಿದರು.

ಪ್ಯಾರಿಸ್: ಕ್ರೀಡಾಕೂಟದಲ್ಲಿ ಹಿಜಾಬ್ ಧರಿಸದೆ ಸ್ಪರ್ಧಿಸುವ ಮೂಲಕ ಸಂಚಲನ ಮೂಡಿಸಿದ್ದ ಇರಾನ್ ಪರ್ವತಾರೋಹಿಯೊಬ್ಬರು ಕಳೆದ ರಾತ್ರಿ ಟೆಹ್ರಾನ್‌ಗೆ ಆಗಮಿಸಿದ್ದು ಆಟಗಾರ್ತಿಯ ನಡೆಯನ್ನು ಶ್ಲಾಘಿಸಿದ ಬೆಂಬಲಿಗರು ವೀರೋಚಿತ ಸ್ವಾಗತವನ್ನು ನೀಡಿದರು.

ಒಂದು ತಿಂಗಳ ಹಿಂದೆ ಮಹ್ಸಾ ಅಮಿನಿಯ ಸಾವಿನ ನಂತರ ಮಹಿಳಾ ನೇತೃತ್ವದ ಪ್ರತಿಭಟನೆಗಳಿಂದ ಇರಾನ್ ನಲ್ಲಿ ಇನ್ನು ಪ್ರಕ್ಷುಬ್ದ ವಾತಾವರಣ ಇದೆ. ಇದರ ಮಧ್ಯೆ ಇರಾನ್ ಆಟಗಾರ್ತಿ ಎಲ್ನಾಜ್ ರೆಕಾಬಿ ದಕ್ಷಿಣ ಕೊರಿಯಾದಲ್ಲಿ ನಡೆದ ಸ್ಪರ್ಧೆಯ ನಂತರ ಟೆಹ್ರಾನ್ ವಿಮಾನ ನಿಲ್ದಾಣಕ್ಕೆ ಹಿಂತಿರುಗಿದರು.

ವಿಮಾನ ನಿಲ್ದಾಣದಲ್ಲಿ ಏನಾಯಿತು ಎಂಬುದನ್ನು ರೇಕಾಬಿ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದು ಆಕಸ್ಮಿಕವಾಗಿ ನಾನು ಧರಿಸಿದ್ದ ಹಿಜಾಬ್ ಜಾರಿಬಿದ್ದಿದೆ. ಇದಕ್ಕೆ ನಾನು ಕ್ಷಮೆಯಾಚಿಸುತ್ತೇನೆ. ಕ್ರೀಡಾಪಟುಗಳು ಸೇರಿದಂತೆ ಎಲ್ಲಾ ಇರಾನಿನ ಮಹಿಳೆಯರು ಹಿಜಾಬ್ ಅನ್ನು ಧರಿಸಬೇಕು ಎಂದು ಆಟಗಾರ್ತಿ ಒತ್ತಾಯಿಸಿದ್ದಾರೆ. ಇನ್ನು ಇರಾನ್ ಅಧಿಕಾರಿಗಳ ಒತ್ತಡದಿಂದಾಗಿ ರೆಕಾಬಿ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಹಿಜಾಬ್ ವಿರೋಧಿ ಹೋರಾಟಗಾರರು ಹೇಳಿದ್ದಾರೆ.

ಇಮಾಮ್ ಖೊಮೇನಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ನ ಹೊರಗೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಬೆಂಬಲಿಗರು 'ಎಲ್ನಾಜ್ ಈಸ್ ಎ ಹೀರೋ' ಎಂದು ಘೋಷಣೆ ಕೂಗಿದರು. ಇನ್ನು ಚಪ್ಪಾಳೆ ತಟ್ಟುವ ಮೂಲಕ ಆಕೆಗೆ ಸ್ವಾಗತ ಕೂಗಿದ ಅವರು ಇದೆಲ್ಲವನ್ನು ಮೊಬೈಲ್ ನಲ್ಲಿ ಸೆರೆಹಿಡಿದಿದ್ದು ವಿಡಿಯೋ ವೈರಲ್ ಆಗಿದೆ.

ಇರಾನ್ ನಲ್ಲಿನ ಹಿಜಾಬ್ ವಿರೋಧಿ ಹೋರಾಟಕ್ಕೆ ಭಾರತೀಯ ಸೆಲೆಬ್ರಿಟಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಇರಾನ್‌ನ ಯುವತಿ ಮೃತ ಮಹ್ಸಾ ಅಮಿನಿಗೆ ಹೋಲಿಸಿಕೊಂಡಿದ್ದ ನಟಿ ಊರ್ವಶಿ ರೌಟೇಲಾ ಅವರು ಮಹ್ಸಾ ಸಾವಿನ ವಿರುದ್ಧ ಹಾಗೂ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಇರಾನ್ ಮಹಿಳೆಯರನ್ನು ಬೆಂಬಲಿಸಿ 'ತಲೆ ಕೂದಲು ಕತ್ತರಿಸುವ' ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!