ರಿಷಿ ಸುನಕ್ 
ವಿದೇಶ

ಬ್ರಿಟಿಷ್ ಪ್ರಧಾನಿ ಚುನಾವಣೆಯಲ್ಲಿ ಸೋಲು: ಭಾರತೀಯ ಮೂಲದ ರಿಷಿ ಸುನಕ್ ಮೊದಲ ಪ್ರತಿಕ್ರಿಯೆ!

ಬ್ರಿಟನ್ ಪ್ರಧಾನಿ ಹುದ್ದೆ ಸ್ಪರ್ಧೆಯಲ್ಲಿ ಸೋತ ರಿಷಿ ಸುನಕ್, ಬೋರಿಸ್ ಜಾನ್ಸನ್ ಉತ್ತರಾಧಿಕಾರಿಯಾಗಿ ನಾಯಕತ್ವದ ಸ್ಪರ್ಧೆಯಲ್ಲಿ ಗೆದ್ದ ಬ್ರಿಟಿಷ್ ಪ್ರಧಾನಿ ಲಿಜ್ ಟ್ರಸ್ ಅವರ ಹಿಂದೆ ಒಂದಾಗುವಂತೆ ರಿಷಿ ಕನ್ಸರ್ವೇಟಿವ್ ಪಕ್ಷದ ಸದಸ್ಯರನ್ನು ಕೋರಿದ್ದಾರೆ

ಲಂಡನ್:  ಬ್ರಿಟನ್ ಪ್ರಧಾನಿ ಹುದ್ದೆ ಸ್ಪರ್ಧೆಯಲ್ಲಿ ಸೋತ ರಿಷಿ ಸುನಕ್, ಬೋರಿಸ್ ಜಾನ್ಸನ್ ಉತ್ತರಾಧಿಕಾರಿಯಾಗಿ ನಾಯಕತ್ವದ ಸ್ಪರ್ಧೆಯಲ್ಲಿ ಗೆದ್ದ ಬ್ರಿಟಿಷ್ ಪ್ರಧಾನಿ ಲಿಜ್ ಟ್ರಸ್ ಅವರ ಹಿಂದೆ ಒಂದಾಗುವಂತೆ ರಿಷಿ ಕನ್ಸರ್ವೇಟಿವ್ ಪಕ್ಷದ ಸದಸ್ಯರನ್ನು ಕೋರಿದ್ದಾರೆ.

ಫಲಿತಾಂಶದ ನಂತರ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಸುನಕ್‌, ಹೊಸ ಪ್ರಧಾನಿ ಲಿಜ್ ಟ್ರಸ್‌ ಹಿಂದೆ ನಾವೆಲ್ಲ ಒಟ್ಟಾಗಿ ಸಾಗೋಣವೆಂದು ಹೇಳಿದ್ದಾರೆ. ‘ಈ ಅಭಿಯಾನದಲ್ಲಿ ನನಗೆ ಮತ ನೀಡಿದ ಎಲ್ಲರಿಗೂ ಧನ್ಯವಾದಗಳು. ಕನ್ಸರ್ವೇಟಿವ್ ಪಕ್ಷದ ಬೆಂಬಲಿಗರು ಒಂದೇ ಕುಟುಂಬಕ್ಕೆ ಸೇರಿದವರೆಂದು ನಾನು ಈ ಹಿಂದೆಯೇ ಹೇಳಿದ್ದೇನೆ. ನಾವು ಈಗ ಹೊಸ ಪ್ರಧಾನಿ ಲಿಜ್ ಟ್ರಸ್ ಅವರ ಹಿಂದೆ ಒಂದಾಗಿ ಸಾಗಬೇಕಿದೆ. ಕಷ್ಟದ ಸಮಯದಲ್ಲಿ ಅವರು ದೇಶವನ್ನು ಮುನ್ನಡೆಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ಒಟ್ಟು 1,72,437 ಅರ್ಹ ಮತದಾರರಿಂದ 654 ತಿರಸ್ಕೃತ ಮತಗಳೊಂದಿಗೆ 82.6 ಶೇಕಡಾ ಹೆಚ್ಚಿನ ಮತದಾನದೊಂದಿಗೆ ಚುನಾವಣೆಯಲ್ಲಿ ಸುನಕ್ ಅವರು 60,399 ಮತಗಳನ್ನು ಪಡೆದರೆ, ಟ್ರಸ್ 81,326 ಮತಗಳನ್ನು ಪಡೆದರು.

47 ವರ್ಷದ ಟ್ರಸ್ ಅವರು ಮಾರ್ಗರೇಟ್ ಥ್ಯಾಚರ್ ಮತ್ತು ಥೆರೆಸಾ ಮೇ ನಂತರ ಬ್ರಿಟನ್‌ನ ಮೂರನೇ ಮಹಿಳಾ ಪ್ರಧಾನಿಯಾಗಿದ್ದಾರೆ. ಭಾನುವಾರ ಕೂಡ ರಿಷಿ ಸುನಕ್ ಅವರು ಕನ್ಸರ್ವೇಟಿವ್ ಪಕ್ಷದ ನಾಯಕತ್ವದ ಸ್ಪರ್ಧೆಯಲ್ಲಿ ಸೋತರೆ, ಮುಂದಿನ ಸರ್ಕಾರವನ್ನು ಬೆಂಬಲಿಸುವುದು ಅವರ ಕೆಲಸ ಎಂದು ಹೇಳಿದ್ದರು.

ಪರಾಭವಗೊಂಡ ರಿಷಿ ಸುನಕ್ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿಯವರ ಪುತ್ರಿ ಅಕ್ಷತಾ ಮೂರ್ತಿಯ ಪತಿಯಾಗಿದ್ದು, ಬ್ರಿಟನ್‍ನಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದರು. ಇವರನ್ನು ಬೋರಿಸ್ ಜಾನ್ಸನ್ 2020ರಲ್ಲಿ ಮೊದಲ ಬಾರಿಗೆ ಪೂರ್ಣ ಕ್ಯಾಬೆನೆಟ್ ಸ್ಥಾನವನ್ನು ನೀಡಿದ್ದರು. ಹಣಕಾಸು ಸಚಿವರಾಗಿ ಬೋರಿಸ್ ಜಾನ್ಸನ್ ಸರ್ಕಾರದಲ್ಲಿ ರಿಷಿ ಸುನಾಕ್ ಕಾರ್ಯನಿರ್ವಹಿಸಿದ್ದರು.

ಪ್ರಧಾನಿ ಬೋರಿಸ್ ಜಾನ್ಸನ್ ಜುಲೈ 7 ರಂದು ಕನ್ಸರ್ವೇಟಿವ್ ಪಕ್ಷದ ನಾಯಕತ್ವವನ್ನು ತ್ಯಜಿಸುವುದಾಗಿ ಘೋಷಿಸಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT