ಸ್ವಾಮಿ ನಾರಾಯಣ ದೇವಾಲಯ (ಸಂಗ್ರಹ ಚಿತ್ರ) 
ವಿದೇಶ

ಕೆನಡಾದ ಸ್ವಾಮಿ ನಾರಾಯಣ್ ದೇವಾಲಯದಲ್ಲಿ ಭಾರತ ವಿರೋಧಿ ಬರಹ, ದೇವಾಲಯಕ್ಕೆ ಹಾನಿ

ಕೆನಡಾದಲ್ಲಿ ಖಾಲಿಸ್ಥಾನಿ ತೀವ್ರಗಾಮಿಗಳು ಸ್ವಾಮಿ ನಾರಾಯಣ್ ದೇವಾಲಯದ ಮೇಲೆ ದಾಳಿ ನಡೆಸಿ ಹಾನಿ ಉಂಟುಮಾಡಿದ್ದಾರೆ.

ಕೆನಡಾ: ಕೆನಡಾದಲ್ಲಿ ಖಾಲಿಸ್ಥಾನಿ ತೀವ್ರಗಾಮಿಗಳು ಸ್ವಾಮಿ ನಾರಾಯಣ್ ದೇವಾಲಯದ ಮೇಲೆ ದಾಳಿ ನಡೆಸಿ ಹಾನಿ ಉಂಟುಮಾಡಿದ್ದಾರೆ.

ದೇವಾಲಯದ ಗೋಡೆಗಳ ಮೇಲೆ ಭಾರತ ವಿರೋಧಿ ಬರಹಗಳನ್ನು ಹಾಕಿದ್ದು, ಟೋರಂಟೋದಲ್ಲಿರುವ ಭಾರತೀಯ ಮಿಷನ್ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು ತ್ವರಿತಗತಿಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. 

ಬಿಎಪಿಎಸ್ ಸ್ವಾಮಿ ನಾರಾಯಣ್ ಮಂದಿರದಲ್ಲಿ ನಡೆದ ದಾಳಿಯ ಸಮಯ ಇನ್ನಷ್ಟೇ ತಿಳಿಯಬೇಕಿದೆ. "ಸ್ವಾಮಿ ನಾರಾಯಣ್ ಮಂದಿರದ ಮೇಲಿನ ದಾಳಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಈ ಬಗ್ಗೆ ತನಿಖೆ ನಡೆಸಿ ಕ್ಷಿಪ್ರಗತಿಯಲ್ಲಿ ಅಪರಾಧಿಗಳಿಗೆ ಶಿಕ್ಷೆ ವಿಧಿಸುವಂತೆ ಕೆನಡಾ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ" ಎಂದು ಭಾರತ ಪ್ರತಿಕ್ರಿಯೆ ನೀಡಿದೆ.

ಇದನ್ನೂ ಓದಿ: ನ್ಯೂಯಾರ್ಕ್: ಹಿಂದೂ ದೇವಾಲಯದ ಹೊರಗಿನ ಗಾಂಧಿ ಪ್ರತಿಮೆ ಧ್ವಂಸ
 
ಈ ಬಗ್ಗೆ ಭಾರತೀಯ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಮಾತನಾಡಿ, ಖಾಲಿಸ್ಥಾನಿ ತೀವ್ರಗಾಮಿಗಳು ಟೊರಂಟೋದ ಸ್ವಾಮಿ ನಾರಾಯಣ್ ಮಂದಿರ ಧ್ವಂಸಗೊಳಿಸಿರುವುದನ್ನು ನಾವೆಲ್ಲರೂ ಖಂಡಿಸಬೇಕು. ಇದು ಕೇವಲ ಮತ್ತೊಂದು ಘಟನೆಯಲ್ಲ, ಇತ್ತೀಚಿನ ದಿನಗಳಲ್ಲಿ ಈ ರೀತಿಯ ದ್ವೇಷ ಅಪರಾಧಗಳ ಮೂಲಕ ಹಿಂದೂ ದೇವಾಲಯವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT