ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ 
ವಿದೇಶ

ಭಾರತವನ್ನು ಪ್ರಮುಖ ಉತ್ಪಾದನಾ ಕೇಂದ್ರವಾಗಿ ಪರಿವರ್ತಿಸಲು ಬಯಸುತ್ತೇವೆ: ಎಸ್‌ಸಿಒ (SCO) ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

ಕೋವಿಡ್-19 ಸಾಂಕ್ರಾಮಿಕ ನಂತರ ಭಾರತ ದೇಶವನ್ನು ಉತ್ಪಾದನಾ ಕೇಂದ್ರವನ್ನಾಗಿ ಬದಲಾಯಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ರಷ್ಯಾ-ಉಕ್ರೇನ್ ಯುದ್ಧ ಜಾಗತಿಕ ಮಟ್ಟದಲ್ಲಿ ಪೂರೈಕೆ ಸರಪಳಿ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಮರ್ಕಾಂಡ್ (ಉಜ್ಬೇಕಿಸ್ತಾನ್): ಕೋವಿಡ್-19 ಸಾಂಕ್ರಾಮಿಕ ನಂತರ ಭಾರತ ದೇಶವನ್ನು ಉತ್ಪಾದನಾ ಕೇಂದ್ರವನ್ನಾಗಿ ಬದಲಾಯಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ರಷ್ಯಾ-ಉಕ್ರೇನ್ ಯುದ್ಧ ಜಾಗತಿಕ ಮಟ್ಟದಲ್ಲಿ ಪೂರೈಕೆ ಸರಪಳಿ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ಉಂಜು ಉಜ್ಬೇಕಿಸ್ತಾನದ ಸಮರ್ಕಾಂಡ್ ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಒಕ್ಕೂಟ(SCO)ದ ಶೃಂಗಸಭೆಯಲ್ಲಿ ಮಾತನಾಡಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ಸಮಸ್ಯೆಯಿಂದ ಜಗತ್ತು ಇಂದು ಹೊರಬರುತ್ತಿದೆ. ಕೋವಿಡ್-19 ಸಾಂಕ್ರಾಮಿಕ ರೋಗ ಮತ್ತು ಉಕ್ರೇನ್ ಯುದ್ಧ ಬಿಕ್ಕಟ್ಟಿನಿಂದ ಕಳೆದೆರಡು ವರ್ಷಗಳಲ್ಲಿ ಜಾಗತಿಕ ಮಟ್ಟದಲ್ಲಿ ಪೂರೈಕೆ ಕೊಂಡಿಗೆ ಸಾಕಷ್ಟು ಅಡೆತಡೆಯುಂಟಾಯಿತು. ಭಾರತವನ್ನು ಉತ್ಪಾದನಾ ಕೇಂದ್ರವಾಗಿ ರೂಪಾಂತರಿಸಲು ನಾವು ಬಯಸುತ್ತೇವೆ ಎಂದರು.

ಭಾರತದ ಆರ್ಥಿಕ ಸ್ಥಿರತೆ ಬಗ್ಗೆ ಶೃಂಗಸಭೆಯಲ್ಲಿ ಪ್ರಸ್ತಾಪಿಸಿದ ಮೋದಿ, ಭಾರತದಲ್ಲಿ 70 ಸಾವಿರಕ್ಕೂ ಹೆಚ್ಚು ಸ್ಟಾರ್ಟ್ ಅಪ್ ಗಳು ಮತ್ತು 100ಕ್ಕೂ ಹೆಚ್ಚು ಯೂನಿಕೋರ್ನ್ಸ್ ಗಳಿವೆ.ಜನ ಕೇಂದ್ರಿತ ಬೆಳವಣಿಗೆಗೆ ನಾವು ಗಮನ ಹರಿಸುತ್ತಿದ್ದೇವೆ. ಪ್ರತಿ ವಲಯದಲ್ಲಿಯೂ ಹೊಸ ಹೊಸ ಸಂಶೋಧನೆ, ಆವಿಷ್ಕಾರಕ್ಕೆ ನಾವು ಬೆಂಬಲ ನೀಡುತ್ತೇವೆ. ಪ್ರಸಕ್ತ ವರ್ಷ ಭಾರತದ ಆರ್ಥಿಕತೆ ಶೇಕಡಾ 7.5ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ. ವಿಶ್ವದ ಬೃಹತ್ ಆರ್ಥಿಕತೆಯಲ್ಲಿ ಭಾರತದ್ದು ಅತಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಾಗಿದೆ ಎಂದರು.

ನೆರೆಯ ದೇಶಗಳ ಮಧ್ಯೆ ಆಹಾರ ಪೂರೈಕೆಗೆ ಸಾರಿಕೆ ಹಕ್ಕುಗಳ ವಿಷಯ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಪಾಕಿಸ್ತಾನ ಮೂಲಕ ಆಫ್ಘಾನಿಸ್ತಾನಕ್ಕೆ ಆಹಾರ ಪೂರೈಸಲು ಹಲವು ತಿಂಗಳುಗಳೇ ಬೇಕಾಯಿತು ಎಂದರು. 

ಉತ್ತಮ ಸಾರಿಗೆ ಸಂಪರ್ಕವನ್ನು ಬೆಳೆಸಲು ಸದಸ್ಯ ರಾಷ್ಟ್ರಗಳು ಪರಸ್ಪರ ಸಾರಿಗೆ ಹಕ್ಕುಗಳನ್ನು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಶೃಂಗಸಭೆಯನ್ನು ಮನವಿ ಮಾಡಿಕೊಂಡರು. ಕೋವಿಡ್ -19 ಸಾಂಕ್ರಾಮಿಕ ಮತ್ತು ಉಕ್ರೇನ್‌ನಲ್ಲಿನ ಯುದ್ಧದಿಂದಾಗಿ ಜಾಗತಿಕ ಪೂರೈಕೆ ಸರಪಳಿಗಳು ಪರಿಣಾಮ ಬೀರಿದ ನಂತರ ಜಾಗತಿಕ ಆಹಾರ ಮತ್ತು ಇಂಧನ ಬಿಕ್ಕಟ್ಟು ಇರುವುದರಿಂದ ಶೃಂಗಸಭೆ ರಾಷ್ಟ್ರಗಳ ಮಧ್ಯೆ ಉತ್ತಮ ಸಂಪರ್ಕದ ಅಗತ್ಯವಿದೆ ಎಂದು ಅವರು ಹೇಳಿದರು.

SCO ವೈವಿಧ್ಯಮಯ ಮತ್ತು ಸ್ಥಿತಿಸ್ಥಾಪಕ ಪೂರೈಕೆ ಸರಪಳಿಗಳನ್ನು ತರಲು ಗಮನಹರಿಸಬೇಕು. ಇದಕ್ಕಾಗಿ, ಉತ್ತಮ ಸಂಪರ್ಕ ಮತ್ತು ಸಾರಿಗೆಗೆ ಪ್ರವೇಶದ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಹೇಳಿದರು, ಭಾರತವು SCO ದೇಶಗಳ ನಡುವೆ ಪರಸ್ಪರ ನಂಬಿಕೆ ಮತ್ತು ಸಹಕಾರವನ್ನು ಬೆಂಬಲಿಸುತ್ತದೆ. ನಮ್ಮ ಜನ-ಕೇಂದ್ರಿತ ಅಭಿವೃದ್ಧಿ ಮಾದರಿಯಲ್ಲಿ ತಂತ್ರಜ್ಞಾನದ ನವೀನ ಬಳಕೆಯನ್ನು ಕೇಂದ್ರೀಕರಿಸಲಾಗಿದೆ. ಭಾರತವು SCO ರಾಷ್ಟ್ರಗಳೊಂದಿಗೆ ಸಹಕರಿಸಲು ಸಿದ್ಧವಾಗಿದೆ ಎಂದು ಪ್ರಧಾನಿ ಹೇಳಿದರು.

ಪಾರಂಪರಿಕ ವೈದ್ಯ ಪದ್ಧತಿಗೂ ಸಹಕರಿಸಬೇಕು ಎಂದು ಪ್ರಧಾನಿ ಇತರ ರಾಷ್ಟ್ರಗಳಿಗೆ ಮನವಿ ಮಾಡಿದರು. ವೈದ್ಯಕೀಯ ಮತ್ತು ಕ್ಷೇಮ ಪ್ರವಾಸೋದ್ಯಮಕ್ಕಾಗಿ ಭಾರತವು ವಿಶ್ವದ ಅತ್ಯಂತ ಆರ್ಥಿಕ ರಾಷ್ಟ್ರಗಳಲ್ಲಿ ಒಂದಾಗಿದೆ. ನಾವು ಸಾಂಪ್ರದಾಯಿಕ ಔಷಧಕ್ಕಾಗಿ ಶೃಂಗಸಭೆ ದೇಶಗಳ ನಡುವೆ ಸಹಕಾರವನ್ನು ಹೆಚ್ಚಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT