ಮೋದಿ - ಪುಟಿನ್ 
ವಿದೇಶ

ಉಕ್ರೇನ್ ಸಂಘರ್ಷ ಶೀಘ್ರದಲ್ಲೇ ಅಂತ್ಯಗೊಳಿಸಲು ಯತ್ನ: ಮೋದಿ ಕಳವಳಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭರವಸೆ

ಉಕ್ರೇನ್‌ ಜೊತೆಗಿನ ಸಂಘರ್ಷವನ್ನು ಆದಷ್ಟು ಬೇಗ ಕೊನೆಗೊಳಿಸಲು ಬಯಸಿದ್ದೇನೆ ಮತ್ತು ಈ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತದ ಕಳವಳ ಅರ್ಥವಾಗುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಕ್ರವಾರ ಪ್ರಧಾನಿ...

ಸಮರ್ಕಂಡ್: ಉಕ್ರೇನ್‌ ಜೊತೆಗಿನ ಸಂಘರ್ಷವನ್ನು ಆದಷ್ಟು ಬೇಗ ಕೊನೆಗೊಳಿಸಲು ಬಯಸಿದ್ದೇನೆ ಮತ್ತು ಈ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತದ ಕಳವಳ ಅರ್ಥವಾಗುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರವಸೆ ನೀಡಿದ್ದಾರೆ.

"ಉಕ್ರೇನ್‌ನಲ್ಲಿನ ಸಂಘರ್ಷದ ಬಗ್ಗೆ ನಿಮ್ಮ ನಿಲುವು, ನಿಮ್ಮ ಕಾಳಜಿಗಳು ನನಗೆ ಅರ್ಥವಾಗುತ್ತಿದೆ... ಇದನ್ನು ಆದಷ್ಟು ಬೇಗ ಕೊನೆಗೊಳಿಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ" ಎಂದು ಶಾಂಘೈ ಸಹಕಾರ ಸಂಘಟನೆ(SCO)ವಾರ್ಷಿಕ ಶೃಂಗಸಭೆಯಲ್ಲಿ ಪುಟಿನ್ ಅವರು ಪ್ರಧಾನಿ ಮೋದಿಗೆ ತಿಳಿಸಿದ್ದಾರೆ.

"ದುರದೃಷ್ಟವಶಾತ್, ಎದುರಾಳಿ ತಂಡ, ಉಕ್ರೇನ್ ನಾಯಕತ್ವ, ಸಂಧಾನ ಪ್ರಕ್ರಿಯೆಯನ್ನು ತಿರಸ್ಕರಿಸುವುದಾಗಿ ಘೋಷಿಸಿತು ಮತ್ತು ಯುದ್ಧಭೂಮಿಯಲ್ಲಿ ಮಿಲಿಟರಿ ವಿಧಾನಗಳ ಮೂಲಕ ತನ್ನ ಗುರಿಗಳನ್ನು ಸಾಧಿಸಲು ಬಯಸುವುದಾಗಿ ಹೇಳಿದೆ" ಎಂದು ಪುಟಿನ್ ತಿಳಿಸಿದರು.

ಪ್ರಧಾನಿ ಮೋದಿ ಅವರು ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಇದು "ಯುದ್ಧದ ಸಮಯವಲ್ಲ" ಎಂದು ಹೇಳಿದ್ದರು. ಅಲ್ಲದೆ ಶಾಂಘೈ ಸಹಕಾರ ಶೃಂಗದಲ್ಲಿ ಪ್ರಾದೇಶಿಕ, ಅಂತಾರಾಷ್ಟ್ರೀಯ ವಿಚಾರಗಳು, ಶಾಂಘೈ ಸಹಕಾರ ಸಂಘದ ವಿಸ್ತರಣೆ, ಪರಸ್ಪರ ಪ್ರಯೋಜನಕಾರಿ ಸಹಭಾಗಿತ್ವವನ್ನು ಇನ್ನಷ್ಟುಬಲಪಡಿಸುವ ಕುರಿತು ಪ್ರಧಾನಿ ಮೋದಿ ಮಾತನಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT