ಮೋದಿ - ಪುಟಿನ್ 
ವಿದೇಶ

ಉಕ್ರೇನ್ ಸಂಘರ್ಷ ಶೀಘ್ರದಲ್ಲೇ ಅಂತ್ಯಗೊಳಿಸಲು ಯತ್ನ: ಮೋದಿ ಕಳವಳಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭರವಸೆ

ಉಕ್ರೇನ್‌ ಜೊತೆಗಿನ ಸಂಘರ್ಷವನ್ನು ಆದಷ್ಟು ಬೇಗ ಕೊನೆಗೊಳಿಸಲು ಬಯಸಿದ್ದೇನೆ ಮತ್ತು ಈ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತದ ಕಳವಳ ಅರ್ಥವಾಗುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಕ್ರವಾರ ಪ್ರಧಾನಿ...

ಸಮರ್ಕಂಡ್: ಉಕ್ರೇನ್‌ ಜೊತೆಗಿನ ಸಂಘರ್ಷವನ್ನು ಆದಷ್ಟು ಬೇಗ ಕೊನೆಗೊಳಿಸಲು ಬಯಸಿದ್ದೇನೆ ಮತ್ತು ಈ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತದ ಕಳವಳ ಅರ್ಥವಾಗುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರವಸೆ ನೀಡಿದ್ದಾರೆ.

"ಉಕ್ರೇನ್‌ನಲ್ಲಿನ ಸಂಘರ್ಷದ ಬಗ್ಗೆ ನಿಮ್ಮ ನಿಲುವು, ನಿಮ್ಮ ಕಾಳಜಿಗಳು ನನಗೆ ಅರ್ಥವಾಗುತ್ತಿದೆ... ಇದನ್ನು ಆದಷ್ಟು ಬೇಗ ಕೊನೆಗೊಳಿಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ" ಎಂದು ಶಾಂಘೈ ಸಹಕಾರ ಸಂಘಟನೆ(SCO)ವಾರ್ಷಿಕ ಶೃಂಗಸಭೆಯಲ್ಲಿ ಪುಟಿನ್ ಅವರು ಪ್ರಧಾನಿ ಮೋದಿಗೆ ತಿಳಿಸಿದ್ದಾರೆ.

"ದುರದೃಷ್ಟವಶಾತ್, ಎದುರಾಳಿ ತಂಡ, ಉಕ್ರೇನ್ ನಾಯಕತ್ವ, ಸಂಧಾನ ಪ್ರಕ್ರಿಯೆಯನ್ನು ತಿರಸ್ಕರಿಸುವುದಾಗಿ ಘೋಷಿಸಿತು ಮತ್ತು ಯುದ್ಧಭೂಮಿಯಲ್ಲಿ ಮಿಲಿಟರಿ ವಿಧಾನಗಳ ಮೂಲಕ ತನ್ನ ಗುರಿಗಳನ್ನು ಸಾಧಿಸಲು ಬಯಸುವುದಾಗಿ ಹೇಳಿದೆ" ಎಂದು ಪುಟಿನ್ ತಿಳಿಸಿದರು.

ಪ್ರಧಾನಿ ಮೋದಿ ಅವರು ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಇದು "ಯುದ್ಧದ ಸಮಯವಲ್ಲ" ಎಂದು ಹೇಳಿದ್ದರು. ಅಲ್ಲದೆ ಶಾಂಘೈ ಸಹಕಾರ ಶೃಂಗದಲ್ಲಿ ಪ್ರಾದೇಶಿಕ, ಅಂತಾರಾಷ್ಟ್ರೀಯ ವಿಚಾರಗಳು, ಶಾಂಘೈ ಸಹಕಾರ ಸಂಘದ ವಿಸ್ತರಣೆ, ಪರಸ್ಪರ ಪ್ರಯೋಜನಕಾರಿ ಸಹಭಾಗಿತ್ವವನ್ನು ಇನ್ನಷ್ಟುಬಲಪಡಿಸುವ ಕುರಿತು ಪ್ರಧಾನಿ ಮೋದಿ ಮಾತನಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!