ನೇಪಾಳ ಪ್ರವಾಹ 
ವಿದೇಶ

ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ: ಭೂಕುಸಿತದಲ್ಲಿ ಕನಿಷ್ಠ 17 ಮಂದಿ ಸಾವು

ನೇಪಾಳದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈ ವರೆಗೂ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಠ್ಮಂಡು: ನೇಪಾಳದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈ ವರೆಗೂ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ನೇಪಾಳದ ಪಶ್ಚಿಮ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಪರಿಣಾಮ ಹಲವು ಕಡೆ ಭೂಕುಸಿತ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ ಭೂಕುಸಿತದ ಕಾರಣಗಳಿಂದಾಗಿ ಕನಿಷ್ಠ 17 ಮಂದಿ ಸಾವಿಗೀಡಾಗಿದ್ದಾರೆ ಎಂದು ನೇಪಾಳದ ಅಧಿಕಾರಿಗಳು ತಿಳಿಸಿದ್ದಾರೆ.

ನೇಪಾಳದ ಪಶ್ಚಿಮ ಭಾಗದ ಸುದುರ್ಪಶ್ಚಿಮ್ ಪ್ರಾಂತ್ಯದ ಅಚಾಮ್ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ, ಇದು ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಉಂಟಾದ ಪ್ರವಾಹದಿಂದ ತೀವ್ರವಾಗಿ ಪ್ರಭಾವಿತವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಹಂಗಾಮಿ ಮುಖ್ಯ ಜಿಲ್ಲಾ ಅಧಿಕಾರಿ ದೀಪೇಶ್ ರಿಜಾಲ್ ಅವರು, ರಾಜಧಾನಿ ಕಠ್ಮಂಡುವಿನ ಪಶ್ಚಿಮಕ್ಕೆ ಸುಮಾರು 450 ಕಿಮೀ ದೂರದ(281 ಮೈಲುಗಳು) ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ದುರ್ಘಟನೆಯಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಹನ್ನೊಂದು ಜನರನ್ನು ಚಿಕಿತ್ಸೆಗಾಗಿ ಸುರ್ಖೇತ್ ಜಿಲ್ಲೆಗೆ ವಿಮಾನದಲ್ಲಿ ರವಾನಿಸಲಾಗಿದೆ. ಭೂಕುಸಿತದಲ್ಲಿ ಮೂವರು ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗೆ ನೇಪಾಳ ಪೊಲೀಸ್ ಸಿಬ್ಬಂದಿಯನ್ನು ಸಜ್ಜುಗೊಳಿಸಲಾಗಿದ್ದು, ನಾಪತ್ತೆಯಾದವರ ಹುಡುಕಾಟದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ದುರಂತದ ಕಾರಣದಿಂದ ಈ ಪ್ರಾಂತ್ಯದ ಏಳು ಜಿಲ್ಲೆಗಳನ್ನು ಸಂಪರ್ಕಿಸುವ ಭೀಮದತ್ತ ಹೆದ್ದಾರಿ ಕೂಡ ಅಸ್ತವ್ಯಸ್ತಗೊಂಡಿದೆ. ಘಟನೆಗಳಿಂದಾಗಿ ಅಚ್ಚಮ್‌ನಲ್ಲಿ ಸಂವಹನ ಸೇವೆಯ ಮೇಲೂ ಪರಿಣಾಮ ಬೀರಿದೆ ಎಂದು ಮಾಹಿತಿ ನೀಡಿದ್ದಾರೆ.

ನೇಪಾಳದ ಪರ್ವತ ಪ್ರದೇಶಗಳಲ್ಲಿ ವಿಶೇಷವಾಗಿ ಜೂನ್ ಮತ್ತು ಸೆಪ್ಟೆಂಬರ್ ನಡುವೆ ಪ್ರವಾಹಗಳು ಮತ್ತು ಭೂಕುಸಿತಗಳು ಆಗಾಗ್ಗೆ ಸಂಭವಿಸುತ್ತವೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!