ಮಹ್ಸಾ ಅಮಿನಿ 
ವಿದೇಶ

ಹಿಜಾಬ್ ಧರಿಸದೆ ಬಂಧನಕ್ಕೊಳಗಾಗಿದ್ದ 22 ವರ್ಷದ ಯುವತಿ ಅನುಮಾನಾಸ್ಪದ ಸಾವು!

ಹಿಜಾಬ್ ಧರಿಸಿಲ್ಲವೆಂದು ನೈತಿಕ ಪೊಲೀಸ್ ಘಟಕದಿಂದ ಬಂಧನಕ್ಕೊಳಗಾಗಿದ್ದ 22 ವರ್ಷದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

ಹ್ರಾನ್(ಇರಾನ್): ಹಿಜಾಬ್ ಧರಿಸಿಲ್ಲವೆಂದು ನೈತಿಕ ಪೊಲೀಸ್ ಘಟಕದಿಂದ ಬಂಧನಕ್ಕೊಳಗಾಗಿದ್ದ 22 ವರ್ಷದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

ತೆಹ್ರಾನ್‌ನಲ್ಲಿ ಬಂಧಿಸಲ್ಪಟ್ಟ ನಂತರ ಕೋಮಾಕ್ಕೆ ಜಾರಿದ್ದ ಇರಾನ್ ನ ಮಹ್ಸಾ ಅಮಿನಿ ಸಾವನ್ನಪ್ಪಿದ್ದಾಳೆ. ಆಕೆಯ ಅನುಮಾನಾಸ್ಪದ ಸಾವಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕೆಂದು ಕುಟುಂಬಸ್ಥರು ಸೇರಿದಂತೆ ಪ್ರಗತಿಪರರು ಒತ್ತಾಯಿಸಿದ್ದಾರೆ.

ಕುಟುಂಬದೊಂದಿಗೆ ಇರಾನ್ ರಾಜಧಾನಿಗೆ ಭೇಟಿ ನೀಡಿದ್ದ ಅಮಿನಿಯನ್ನು ಇಸ್ಲಾಮಿಕ್ ಗಣರಾಜ್ಯದ ಮಹಿಳೆಯರಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಅನ್ನು ಜಾರಿಗೊಳಿಸುವ ನೈತಿಕ ಪೊಲೀಸ್ ಘಟಕವು ಮಂಗಳವಾರ ಬಂಧಿಸಿತು. ಇನ್ನು ಇರಾನ್ ನಲ್ಲಿ ಸಾರ್ವಜನಿಕವಾಗಿ ಹಿಜಾಬ್ ಧರಿಸುವುದು ಕಡ್ಡಾಯವಾಗಿದೆ.

ಬಂಧನಕ್ಕೊಳಗಾಗಿದ್ದ ಯುವತಿ ದುರದೃಷ್ಟವಶಾತ್ ಮೃತಪಟ್ಟಿದ್ದು ಆಕೆಯ ದೇಹವನ್ನು ವೈದ್ಯಕೀಯ ಪರೀಕ್ಷಕರ ಕಛೇರಿಗೆ ವರ್ಗಾಯಿಸಲಾಯಿತು ಎಂದು ಇರಾನಿನ ರಾಜ್ಯ ದೂರದರ್ಶನ ವರದಿ ಮಾಡಿದೆ. ಪರ್ಷಿಯನ್ ಭಾಷೆಯ ಮಾಧ್ಯಮಗಳು, ಇರಾನ್ ವೈರ್ ವೆಬ್‌ಸೈಟ್ ಮತ್ತು ಶಾರ್ಗ್ ಪತ್ರಿಕೆ ಸೇರಿದಂತೆ ಆಕೆಯ ಕುಟುಂಬವನ್ನು ಉಲ್ಲೇಖಿಸಿ ಈ ಹಿಂದೆ ಆರೋಗ್ಯವಾಗಿದ್ದ ಅಮಿನಿ ಅವರನ್ನು ಬಂಧಿಸಿದ ಕೆಲವೇ ಗಂಟೆಗಳ ನಂತರ ಕೋಮಾಗೆ ಜಾರಿದ್ದು ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಆಕೆ ಮೃತಪಟ್ಟಿದ್ದಾಳೆ.

ಆಕೆ ಪೊಲೀಸ್ ಠಾಣೆಗೆ ಆಗಮಿಸುವ ಮತ್ತು ಆಸ್ಪತ್ರೆಗೆ ತೆರಳುವ ನಡುವೆ ಏನಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇರಾನ್‌ನಲ್ಲಿನ ಉಲ್ಲಂಘನೆಗಳನ್ನು ಮೇಲ್ವಿಚಾರಣೆ ಮಾಡುವ 1500ಟವ್‌ಸಿರ್ ಚಾನೆಲ್ ಆಕೆಯ ತಲೆಗೆ ಪೆಟ್ಟು ಬಿದ್ದಿದೆ ಎಂದು ಹೇಳಿದೆ. 22 ವರ್ಷದ ಯುವತಿ ಮಹ್ಸಾ ಅಮಿನಿಯ ಕಸ್ಟಡಿಯಲ್ಲಿ ಅನುಮಾನಾಸ್ಪದ ಸಾವಿಗೆ ಕಾರಣವಾದ ಸಂದರ್ಭಗಳು, ಕಸ್ಟಡಿಯಲ್ಲಿ ಚಿತ್ರಹಿಂಸೆ ಮತ್ತು ಇತರ ಕೆಟ್ಟ ವರ್ತನೆಯ ಆರೋಪಗಳನ್ನು ಒಳಗೊಂಡಿದ್ದು ಕ್ರಿಮಿನಲ್ ತನಿಖೆಯಾಗಬೇಕು ಎಂದು ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT