ಸಾಂಕೇತಿಕ ಚಿತ್ರ 
ವಿದೇಶ

ಹಸಿವಿನಿಂದ ಪ್ರತಿ 4 ಕ್ಷಣಕ್ಕೆ ಓರ್ವ ವ್ಯಕ್ತಿ ಸಾವು: ಜಾಗತಿಕ ಬಿಕ್ಕಟ್ಟಿನ ಬಗ್ಗೆ ಎನ್ ಜಿಒಗಳ ಎಚ್ಚರಿಕೆ!

ಹಸಿವಿನಿಂದಾಗಿ ಪ್ರತಿ ನಾಲ್ಕು ಕ್ಷಣಗಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪುತ್ತಿದ್ದಾರೆ ಎಂದು 200 ಕ್ಕೂ ಹೆಚ್ಚು ಎನ್ ಜಿಒಗಳು  ಎಚ್ಚರಿಕೆ ನೀಡಿದ್ದು, ಜಾಗತಿಕ ಹಸಿವು ಬಿಕ್ಕಟ್ಟನ್ನು ಅಂತ್ಯಗೊಳಿಸಲು ಅಂತಾರಾಷ್ಟ್ರೀಯ ಕ್ರಮಕ್ಕೆ ಒತ್ತಾಯಿಸಿವೆ.

ನವದೆಹಲಿ: ಹಸಿವಿನಿಂದಾಗಿ ಪ್ರತಿ ನಾಲ್ಕು ಕ್ಷಣಗಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪುತ್ತಿದ್ದಾರೆ ಎಂದು 200 ಕ್ಕೂ ಹೆಚ್ಚು ಎನ್ ಜಿಒಗಳು  ಎಚ್ಚರಿಕೆ ನೀಡಿದ್ದು, ಜಾಗತಿಕ ಹಸಿವು ಬಿಕ್ಕಟ್ಟನ್ನು ಅಂತ್ಯಗೊಳಿಸಲು ಅಂತಾರಾಷ್ಟ್ರೀಯ ಕ್ರಮಕ್ಕೆ ಒತ್ತಾಯಿಸಿವೆ.

ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿನ ನಾಯಕರಿಗೆ ಈ ಬಹಿರಂಗ ಪತ್ರವನ್ನು ಬರೆಯಲಾಗಿದ್ದು, ಆಕ್ಸ್ ಫಾಮ್, ಸೇವ್ ದಿ ಚಿಲ್ಡ್ರನ್, ಪ್ಲಾನ್ ಇಂಟರ್ ನ್ಯಾಷನಲ್ ಸೇರಿದಂತೆ 75 ದೇಶಗಳ 238 ಸಂಘಟನೆಗಳು ಗಗನಕ್ಕೇರುತ್ತಿರುವ ಹಸಿವಿನ ಮಟ್ಟದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ.

345 ಮಿಲಿಯನ್ ಮಂದಿ ಈಗ ತೀವ್ರ ಹಸಿವಿನಿಂದ ಬಳಲುತ್ತಿದ್ದು, 2019 ರಿಂದ ಈ ಸಂಖ್ಯೆ ದ್ವಿಗುಣಗೊಂಡಿದೆ ಎಂದು ಎನ್ ಜಿಒಗಳು ಹೇಳಿವೆ. 21 ನೇ ಶತಮಾನದಲ್ಲಿ ಬರಗಾಲಕ್ಕೆ ಮತ್ತೆ ಅವಕಾಶ ನೀಡುವುದಿಲ್ಲ ಎಂದು ಜಾಗತಿಕ ನಾಯಕರು ಭರವಸೆಗಳನ್ನು ನೀಡಿದ್ದರೂ, ಸೋಮಾಲಿಯಾದಲ್ಲಿ ತೀವ್ರ ಬರಗಾಲವಿದೆ. ಜಾಗತಿಕ ಮಟ್ಟದಲ್ಲಿ 45 ರಾಷ್ಟ್ರಗಳಲ್ಲಿ 50 ಮಿಲಿಯನ್ ಮಂದಿ ಹಸಿವಿನ ಅಂಚಿನಲ್ಲಿದ್ದಾರೆ ಎಂದು ಎನ್ ಜಿಒಗಳು ಹೇಳಿವೆ.

ಪ್ರತಿ ದಿನವೂ 19,700 ಮಂದಿ ಹಸಿವಿನಿಂದ ಸಾವನ್ನಪ್ಪುತ್ತಿದ್ದಾರೆ. ಅಂದರೆ ಪ್ರತಿ ನಾಲ್ಕು ಕ್ಷಣಕ್ಕೆ ಓರ್ವ ವ್ಯಕ್ತಿ ಹಸಿವಿನಿಂದ ಸಾವನ್ನಪ್ಪುತ್ತಿದ್ದಾನೆ ಎಂದಾಗುತ್ತದೆ.

ಕೃಷಿಯಲ್ಲಿ ಎಲ್ಲಾ ರೀತಿಯ ತಂತ್ರಜ್ಞಾನ ಹಾಗೂ ಕೊಯ್ಲು ತಂತ್ರಗಳ ಹೊರತಾಗಿಯೂ 21 ನೇ ಶತಮಾನದಲ್ಲಿ ಬರಗಾಲ ಎದುರಿಸುತ್ತಿದ್ದೇವೆ ಎಂದರೆ ಹೀನಾಯ ಪರಿಸ್ಥಿತಿಯಲ್ಲಿದ್ದೇವೆ ಎಂದು ಪತ್ರ ಬರೆದಿರುವ ಎನ್ ಜಿಒಗಳ ಪೈಕಿ ಗುರುತಿಸಿಕೊಂಡಿರುವ ಮೋಹನ ಅಹ್ಮದ್ ಅಲಿ ಎಲ್ಜಬಲಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT