ವಿದೇಶಾಂಗ ಸಚಿವ ಎಸ್ ಜೈಶಂಕರ್ 
ವಿದೇಶ

ಉಕ್ರೇನ್ ಸಂಘರ್ಷ ಅತ್ಯಂತ ಆತಂಕಕಾರಿ; ಯುದ್ಧ ನಿಲ್ಲಿಸಲು ಯುಎನ್ಎಸ್ ಸಿಯಲ್ಲಿ ಜೈಶಂಕರ್ ಕರೆ

ಉಕ್ರೇನ್ ನ ಸಂಘರ್ಷ ಇಡೀ ಅಂತಾರಾಷ್ಟ್ರೀಯ ಸಮುದಾಯಕ್ಕೆ ಅತ್ಯಂತ ಆತಂಕಕಾರಿಯಾದ ವಿಷಯ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. 

ವಿಶ್ವಸಂಸ್ಥೆ: ಉಕ್ರೇನ್ ನ ಸಂಘರ್ಷ ಇಡೀ ಅಂತಾರಾಷ್ಟ್ರೀಯ ಸಮುದಾಯಕ್ಕೆ ಅತ್ಯಂತ ಆತಂಕಕಾರಿಯಾದ ವಿಷಯ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದು, ಹೇಳಿದ್ದಾರೆ. 

ಉಕ್ರೇನ್ ಸಂಘರ್ಷದ ಪರಿಣಾಮವನ್ನು ಬೆಲೆ ಏರಿಕೆ ಹಾಗೂ ಆಹಾರ ಧಾನ್ಯ ಹಾಗೂ ರಸಗೊಬ್ಬರ, ಇಂಧನದ ಬೆಲೆ ಏರಿಕೆ ರೂಪದಲ್ಲಿ ಜಗತ್ತು ಅನುಭವಿಸಿದೆ ಎಂದು ಹೇಳಿದ್ದಾರೆ.

ಯುಎನ್ಎಸ್ ಸಿ ಸಭೆಯಲ್ಲಿ ಉಕ್ರೇನ್ ವಿಷಯವಾಗಿ ಮಾತನಾಡಿದ ಅವರು, ಉಕ್ರೇನ್ ನಲ್ಲಿ ಸಂಘರ್ಷವನ್ನು ಕೊನೆಗಾಣಿಸಿ, ಮಾತುಕತೆಗೆ ಹಿಂತಿರುಗಿಸುವುದು ಈಗಿನ ತುರ್ತು ಅಗತ್ಯ, ಈ ಪರಿಷತ್ ರಾಜತಾಂತ್ರಿಕತೆಯ ಅತ್ಯಂತ ಶಕ್ತಿಶಾಲಿ ಚಿಹ್ನೆಯಾಗಿದೆ, ಇದು ತನ್ನ ಉದ್ದೇಶಗಳಿಗೆ ತಕ್ಕಂತೆ ಕಾರ್ಯನಿರ್ವಹಿಸುವುದನ್ನು ಮುಂದುವರೆಸಬೇಕು ಎಂದು ಅವರು ಹೇಳಿದ್ದಾರೆ.

ಪ್ರಧಾನಿ ಮೋದಿ ಇತ್ತೀಚೆಗೆ ರಷ್ಯಾ ಅಧ್ಯಕ್ಷರೊಂದಿಗಿನ ಭೇಟಿಯ ವೇಳೆ ಉಕ್ರೇನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನು ಜೈಶಂಕರ್ ನೆನಪಿಸಿಕೊಂಡಿದ್ದಾರೆ. ಯುಎನ್ಎಸ್ ಸಿ ಸಭೆಯಲ್ಲಿ ಇತರ ದೇಶಗಳ ವಿದೇಶಾಂಗ ಮಂತ್ರಿಗಳೊಂದಿಗೆ ಜೈಶಂಕರ್ ಭಾಗವಹಿಸಿದ್ದರು.

ಉಕ್ರೇನ್ ಸಂಘರ್ಷದ ಪರಿಣಾಮವನ್ನು ಬೆಲೆ ಏರಿಕೆ ಹಾಗೂ ಆಹಾರ ಧಾನ್ಯ ಹಾಗೂ ರಸಗೊಬ್ಬರ, ಇಂಧನದ ಬೆಲೆ ಏರಿಕೆ ರೂಪದಲ್ಲಿ ಜಗತ್ತು ಅನುಭವಿಸಿದೆ. ಆದ್ದರಿಂದಲೇ ಭಾರತ ಮಾತುಕತೆಗಳ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದಕ್ಕೆ ಸಲಹೆ ನೀಡುತ್ತಿದೆ ಎಂದು ಜೈಶಂಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT