ಘಟನೆ ನಡೆದ ಸ್ಥಳದಲ್ಲಿ ಜಮಾಯಿಸಿರುವ ಜನರು 
ವಿದೇಶ

ದೇವಸ್ಥಾನಕ್ಕೆ ಹಿಂದೂ ಭಕ್ತರನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ 24 ಮಂದಿ ಸಾವು, ಹಲವರು ನಾಪತ್ತೆ

ಶತಮಾನಗಳಷ್ಟು ಹಳೆಯದಾದ ಬೋದೇಶ್ವರಿ ದೇವಸ್ಥಾನಕ್ಕೆ ಹಿಂದೂ ಭಕ್ತರನ್ನು ಸಾಗಿಸುತ್ತಿದ್ದ ದೋಣಿಯೊಂದು ಭಾನುವಾರ ಮಗುಚಿ ಬಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ. ಹನ್ನೆರಡಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಢಾಕಾ: ಶತಮಾನಗಳಷ್ಟು ಹಳೆಯದಾದ ಬೋದೇಶ್ವರಿ ದೇವಸ್ಥಾನಕ್ಕೆ ಹಿಂದೂ ಭಕ್ತರನ್ನು ಸಾಗಿಸುತ್ತಿದ್ದ ದೋಣಿಯೊಂದು ಭಾನುವಾರ ಮಗುಚಿ ಬಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ. ಹನ್ನೆರಡಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾಲಯ ಪ್ರಯುಕ್ತ ಪೂಜೆ ಸಲ್ಲಿಸಲು ಭಕ್ತರು ದೋಣಿಯಲ್ಲಿ ತೆರಳುತ್ತಿದ್ದಾಗ ಪಂಚಗಢ ಜಿಲ್ಲೆಯ ಕೊರೊಟಾ ನದಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ 24 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಅಪ್ರಾಪ್ತ ವಯಸ್ಸಿನ 8 ಮಕ್ಕಳು ಮತ್ತು 12 ಮಹಿಳೆಯರು ಸೇರಿದ್ದಾರೆ. ಅವರಲ್ಲಿ ಕೆಲವರನ್ನು ಸ್ಥಳೀಯ ಆಸ್ಪತ್ರೆಗೆ ಕರೆ ತಂದ ನಂತರ ಸಾವನ್ನಪ್ಪಿದ್ದಾರೆ.

ನಾಪತ್ತೆಯಾದವರಿಗಾಗಿ ಅಗ್ನಿಶಾಮಕ ದಳದವರು ಮತ್ತು ಸ್ಥಳೀಯ ಈಜುಪಟುಗಳಿಂದ ಹುಡುಕಾಟ ನಡೆಯುತ್ತಿದೆ ಎಂದು ಪಂಚಗಢ ಮುಖ್ಯ ಆಡಳಿತಾಧಿಕಾರಿ ಸೊಲೈಮಾನ್ ಅಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರಯಾಣಿಕರ ಸಂಖ್ಯೆ 70 ರಿಂದ 80 ರ ನಡುವೆ ಇರಬಹುದೆಂದು ಊಹಿಸಲಾಗಿದೆ. ದೋಣಿ ತನ್ನ ಸಾಮರ್ಥ್ಯಕ್ಕೂ ಮೀರಿ ಪ್ರಯಾಣಿಕರನ್ನು ಸಾಗಿಸುತಿತ್ತು ಎಂದು  ಪಂಚಗಢ್‌ನ ಉಪ ಆಯುಕ್ತ ಜಹುರುಲ್ ಹಕ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿವಿ ಘಟಿಕೋತ್ಸವಕ್ಕೆ CJI ಸೂರ್ಯಕಾಂತ್ ಗೆ ಆಹ್ವಾನ: ಅವರಿಂದ ಪದವಿಪತ್ರ ಸ್ವೀಕರಿಸಲ್ಲ ಎಂದ NALSAR ವಿದ್ಯಾರ್ಥಿಗಳು!

"ಹಮಾಸ್ ನಿಶ್ಯಸ್ತ್ರಗೊಳಿಸುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

Video: ಮತ್ತೊಂದು ಗ್ಯಾಸ್ ಬಲೂನ್ ದುರಂತ: ಸಿಲಿಂಡರ್ ಸ್ಫೋಟ, 4 ಮಂದಿಗೆ ಗಾಯ, ಸ್ಥಳದಲ್ಲಿ ಆತಂಕ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ: ಆರು ತಿಂಗಳ ಬಳಿಕ ಕೊಲೆಗಾತಿ ಪತ್ನಿ, ಪ್ರಿಯಕರನ ಬಂಧನ!

ಪಾಕ್ ನಲ್ಲಿ ಮತ್ತೆ 'ದುರಂಧರ್' ಆಟ: ಲಷ್ಕರ್ ಕಮಾಂಡರ್ ನಿಗೂಢ ಸಾವು, ಊಟ ಮಾಡಿ ಮಸೀದಿ ಬಳಿ ಕುಸಿದು ಬಿದ್ದ Qari Saeed Abdul Aziz